Homeಮುಖಪುಟರಾಮ ಮಂದಿರ ಟ್ರಸ್ಟ್: ಭೂ ಕಬಳಿಕೆ ಆರೋಪ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

ರಾಮ ಮಂದಿರ ಟ್ರಸ್ಟ್: ಭೂ ಕಬಳಿಕೆ ಆರೋಪ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಮ ಮಂದಿರ ಟ್ರಸ್ಟ್ ಮಾಡಲಾಗಿದೆ ಎನ್ನುವ ಭೂ ಕಬಳಿಕೆ ಪ್ರಕರಣವನ್ನು ವರದಿ ಮಾಡಿದ ಒಬ್ಬ ಪತ್ರಕರ್ತ ಇತರ ಇಬ್ಬರ ವಿರುದ್ಧ 18 ಆರೋಪಗಳನ್ನು ಹೊರಿಸಿರುವ ಉತ್ತರ ಪ್ರದೇಶದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಯೋಧ್ಯೆಯಲ್ಲಿನ ವಿವಾದಾತ್ಮಕ ಭೂ ವ್ಯವಹಾರಗಳ ಬಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರ ಸಹೋದರರ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಭೂ  ವ್ಯವಹಾರ ಆರೋಪಗಳ ಕುರಿತಂತೆ ಪ್ರಾಥಮಿಕ ಸಾಕ್ಷ್ಯಗಳ ಆಧಾರದಲ್ಲಿ ಬಿಜ್ನೋರ್ ಪೊಲೀಸ್ ಮುಖ್ಯಸ್ಥರು ಈಗಾಗಲೇ ಚಂಪತ್ ರಾಯ್ ಮತ್ತು ಅವರ ಸಹೋದರರಿಗೆ “ಕ್ಲೀನ್ ಚಿಟ್” ನೀಡಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಚಂಪತ್ ರಾಯ್ ಅವರ ಸಹೋದರ ಸಂಜಯ್ ಬನ್ಸಾಲ್ ನೀಡಿದ ದೂರಿನ ಆಧಾರದ ಮೇಲೆ ಪತ್ರಕರ್ತ ವಿನೀತ್ ನರೈನ್, ಅಲ್ಕಾ ಲಹೋಟಿ ಮತ್ತು ರಜನೀಶ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ಮೂವರೂ ವಿಎಚ್‌ಪಿ ನಾಯಕನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲು ಸಂಚು ರೂಪಿಸಿದ್ದಾರೆ ಮತ್ತು ಈ ಮೂಲಕ ದೇಶಾದ್ಯಂತ ಕೋಟ್ಯಾಂತರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮೂರು ದಿನಗಳ ಹಿಂದೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿನೀತ್ ನರೈನ್ ಅವರು, ವಿಶ್ವ ಹಿಂದೂ ಪರಿಷತ್ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್‍ರಾಯ್‍  ಅವರು ತಮ್ಮ ಸಹೋದರರು ಬಿಜ್ನೋರ್‌ನಲ್ಲಿ ಭೂ ಕಬಳಿಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಎನ್‌ಆರ್‌ಐ ಅಲ್ಕಾ ಲಹೋಟಿ (ಎಫ್‌ಐಆರ್‌ನಲ್ಲಿ ಸಹ ಹೆಸರಿಸಲಾಗಿದೆ) ಒಡೆತನದ 20 ಸಾವಿರ ಚದರ ಮೀಟರ್ ಭೂಮಿಯನ್ನು ದೋಚಲು ಚಂಪತ್‍ರಾಯ್‍ ತಮ್ಮ ಸಹೋದರರಿಗೆ ಸಹಾಯ ಮಾಡಿದ್ದಾರೆ ಎಂದು ಪೋಸ್ಟ್‌ನಲ್ಲಿ ನರೈನ್ ಆರೋಪಿಸಿದ್ದಾರೆ.

ಅಲ್ಕಾ ಲಹೋಟಿ ಅವರು 2018ರಿಂದ ಅತಿಕ್ರಮಣದಾರರನ್ನು ಹೊರಹಾಕಲು ಪ್ರಯತ್ನಿಸುತ್ತಿದ್ದಾರೆ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತ ಬಂದಿದ್ದಾರೆ.

ತನ್ನ ದೂರಿನಲ್ಲಿ, ಸಂಜಯ್ ಬನ್ಸಾಲ್, ‘ ಪ್ರಕರಣದ ಸತ್ಯಸಂಗತಿಗಳನ್ನು ತಿಳಿಸುವಂತೆ ನರೈನ್‍ ಅವರಿಗೆ ಫೋನ್‍ ಮಾಡಿದ್ದೆ. ಆದರೆ, ರಜನೀಶ್ ಎಂದು ಕರೆದುಕೊಳ್ಳುವ ವ್ಯಕ್ತಿಯೊಬ್ಬರು ಫೋನ್ ಎತ್ತಿಕೊಂಡು, ನನ್ನೊಂದಿಗೆ ಕೆಟ್ಟದಾಗಿ ವರ್ತಿಸಿದರು ಮತ್ತು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ”ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾದ ಒಂದು ದಿನದ ನಂತರ, ಬಿಜ್ನೋರ್ ಪೊಲೀಸ್ ಮುಖ್ಯಸ್ಥರು ಟ್ವಿಟರ್‌ನಲ್ಲಿ ವೀಡಿಯೊ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ಚಂಪತ್‍ರಾಯ್‍ ಸಹೋದರ ಬನ್ಸಾಲ್ ಅವರ ಆವೃತ್ತಿಯನ್ನು ಬೆಂಬಲಿಸುತ್ತಿದ್ದಾರೆ ಎನಿಸುತ್ತದೆ. ಪೊಲೀಸ್ ತಂಡ ಇನ್ನೂ ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು  ಅದೇ ಪೊಲೀಸ್‍ ಮುಖ್ಯಸ್ಥರು ಹೇಳಿದ್ದಾರೆ.

“ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಂಪತ್ ರಾಯ್ ವಿಎಚ್‌ಪಿಯ ಹಿರಿಯ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್ ಸದಸ್ಯರಾಗಿದ್ದಾರೆ ಅವರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಮತ್ತು ಅವರ ಸಂಬಂಧಿಕರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂಬುದು ಮೇಲ್ನೋಟಕ್ಕೆ ಅನಿಸುತ್ತದೆ. ನಾವು ಸತ್ಯವನ್ನು ತಿಳಿಯಲು ತನಿಖೆ ನಡೆಸುತ್ತಿದ್ದೇವೆ” ಎಂದು ಬಿಜ್ನೋರ್ ಪೊಲೀಸ್ ಮುಖ್ಯಸ್ಥ ಡಾ.ರಾಮ್‍ವೀರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

0
ಸಾರ್ವತ್ರಿಕ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆಗೂ ಮುನ್ನ ಬಂಧಿಸಿದ್ದು ಏಕೆ? ಎಂದು...