Homeಮುಖಪುಟತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

ತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಸರ್ಕಾರವು ‘ನೂತನ ಮುಖ್ಯಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ’ ಜಗತ್ಪ್ರಸಿದ್ದ ಅರ್ಥಶಾಸ್ತ್ರಜ್ಞರನ್ನು ನೇಮಿಸಿಕೊಂಡು ಗಮನ ಸೆಳೆದಿದೆ.

ಸಮಿತಿಯಲ್ಲಿ ಆರ್‌ಬಿಐನ್‌ ಮಾಜಿ ಗರ್ವನರ್ ರಘುರಾಮ್ ರಾಜನ್, ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞೆ ಎಸ್ತರ್ ಡುಫ್ಲೊ, ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ಅಭಿವೃದ್ಧಿ ಅರ್ಥಶಾಸ್ತ್ರಜ್ಞ ಜೀನ್ ಡ್ರೆಜ್ ಮತ್ತು ಮಾಜಿ ಕೇಂದ್ರ ಹಣಕಾಸು ಕಾರ್ಯದರ್ಶಿ ಎಸ್ ನಾರಾಯಣ್ ಸೇರಿದ್ದಾರೆ.

ಇಂದು ತಮಿಳುನಾಡು ರಾಜ್ಯಪಾಲರಾದ ಭನ್ವಾರಿಲಾಲ್ ಪುರೋಹಿತ್ ಸಮಿತಿಯನ್ನು ಘೋಷಿಸಿ “ಈ ಮಂಡಳಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಆರ್ಥಿಕ ಬೆಳವಣಿಗೆಯ ಅನುಕೂಲಗಳು ಸಮಾಜದ ಎಲ್ಲಾ ವಿಭಾಗಗಳನ್ನು ತಲುಪುವಂತೆ ನೋಡಿಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯಕ್ಕೆ ತ್ವರಿತ ಮತ್ತು ಒಳಗೊಳ್ಳುವ ಆರ್ಥಿಕ ಬೆಳವಣಿಗೆಯ ಹಾದಿಯನ್ನು ರೂಪಿಸುವ ನಿಟ್ಟಿನಲ್ಲಿ ಈ ಮಂಡಳಿ ಕಾರ್ಯನಿರ್ವಹಿಸಲಿದೆ. ಹಣಕಾಸು ನೀತಿಗಳು ಜಿಲ್ಲೆಗಳ ಕೈಗಾರಿಕಾ ನೆಲೆಯನ್ನು ವೈವಿಧ್ಯಗೊಳಿಸುವುದು ಮತ್ತು ತಾಂತ್ರಿಕ ಉನ್ನತೀಕರಣವನ್ನು ಖಾತರಿಪಡಿಸಲು ಇದು ಶ್ರಮಿಸುತ್ತದೆ” ಎಂದು ತಿಳಿಸಿದ್ದಾರೆ.

ಎಂಎಸ್‌ಎಂಇಗಳನ್ನು ಪುನರುಜ್ಜೀವನಗೊಳಿಸುವ ಯೋಜನೆಗಳನ್ನು ರೂಪಿಸಲು ಕೈಗಾರಿಕೋದ್ಯಮಿಗಳು, ಬ್ಯಾಂಕಿಂಗ್ ಮತ್ತು ಹಣಕಾಸು ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗುವುದು. ಆರ್ಥಿಕ ಸಲಹಾ ಸಮಿತಿ ಮತ್ತು ಇತರ ಗುಂಪುಗಳು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅಧ್ಯಯನ ಮಾಡುತ್ತವೆ ಮತ್ತು ರಾಜ್ಯದ ಆರ್ಥಿಕತೆಯನ್ನು ಸದೃಢವಾಗಿಸಲು ಬದಲಾವಣೆಗಳನ್ನು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಅಲ್ಲದೆ ತಮಿಳುನಾಡು ಸರ್ಕಾರವು ಕೃಷಿ ಮತ್ತು ತಮಿಳು ಮಾಧ್ಯಮದ ವಿದ್ಯಾರ್ಥಿಗಳಿಗೆ ಉದ್ಯೋಗಕ್ಕಾಗಿ ಪ್ರತ್ಯೇಕ ಬಜೆಟ್‌ ಅನ್ನು ಮೀಸಲಿಡುತ್ತದೆ ಎಂದು ಅವರು ಘೋಷಿಸಿದ್ದಾರೆ.

ಈ ಆರ್ಥಿಕ ಸಲಹಾ ಮಂಡಳಿಯ ಸದಸ್ಯರು ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದು, ಅಪಾರ ಅನುಭವವುಳ್ಳವರಾಗಿದ್ದಾರೆ. ಕೆಲವರು ಕೇಂದ್ರ ಸರ್ಕಾರದ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮೋದಿ ಸರ್ಕಾರದ ನೀತಿಗಳನ್ನು ಖಂಡಿಸಿ ಹೊರಬಂದಿದ್ದಾರೆ. ಅಂತವರನ್ನು ತಮಿಳುನಾಡು ಸರ್ಕಾರ ತಮ್ಮ ಸಲಹಾ ಸಮಿತಿಗೆ ನೇಮಿಸಿಕೊಂಡು ದೇಶದ ಗಮನ ಸೆಳೆದಿದೆ.

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

ಎಸ್ತರ್ ಡುಫ್ಲೊರವರು ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪಡೆದ ಅರ್ಥಶಾಸ್ತ್ರಜ್ಞೆಯಾಗಿದ್ದಾರೆ.

2014 ರಿಂದ 2018ರವರೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ ಅರವಿಂದ್ ಸುಬ್ರಮಣಿಯನ್‌ಯವರು ಸರ್ಕಾರದ ನೀತಿಗಳನ್ನು ಟೀಕಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದರು.

ಇಂತಹ ಅನುಭವಿಗಳನ್ನು ನೇಮಿಸಿಕೊಂಡು ರಾಜ್ಯದ ಆರ್ಥಿಕತೆಯನ್ನು ರೂಪಿಸಲು ತಮಿಳುನಾಡು ಸರ್ಕಾರ ಹೊರಟಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಸ್ಟಾಲಿನ (ಪ್ರಪಂಚದ ಖ್ಯಾತ ಅರ್ಥ ಶಾಸ್ತ್ರಜ್ಞರನ್ನು ಒಳಗೊಂಡ ಸಲಹಾ ಮಂಡಳಿಯ ನೇಮಕಾತಿ )ಹಾಗು ಕೇರಳದ ವಿಜಯನ್ ರವರು (ನವ್ಯ ಹಾಗೂ ವಿನೂತನ ಮಂತ್ರಿ ಮಂಡಲ ), ರಾಜ್ಯಗಳ ಆಡಳಿತದಲ್ಲಿ ಹೊಸ ಅಧ್ಯಯವನ್ನೇ ಬರೆಯುತ್ತಿದ್ದಾರೆ.
    ಅವರ ಯಶಸ್ಸಿನಲ್ಲೇ ದೇಶದ ಯಶಸ್ಸಿದೆ
    ??????????????

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...