Homeಮುಖಪುಟಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ಅರಂಭವಾಗಿವೆ. ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ಸಣ್ಣದಾದ ಅಸಮಾಧಾನದ ಕಿಡಿ ಹೊತ್ತಿಕೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಬಂದ ದಿನದಿಂದಲೂ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಠಾಕ್ರೆ ವಿರುದ್ಧ ತಮ್ಮ ಆಕ್ಷೇಪಗಳನ್ನು ಹೊರಹಾಕುತ್ತಲೇ ಬಂದಿದ್ದಾರೆ. ಕೆಳಹಂತದ ನಾಯಕರಿಂದ ಆರಂಭವಾದ ಈ ಭಿನ್ನಮತ ಮತ್ತು ಮೈತ್ರಿಯ ಬಗೆಗಿನ ಅಸಮಾಧಾನ ನಿಧಾನಕ್ಕೆ ಕಾಂಗ್ರೆಸ್‌ನ ಉನ್ನತ ನಾಯಕರಿಂದಲೂ ಬರತೊಡಗಿದೆ. ಇದಕ್ಕೆ ತುಪ್ಪ ಸುರಿಯುವಂತೆ ಇಂದು ಮಹಾರಾಷ್ಟ್ರ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ನಾನಾ ಪಟೋಲಿ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ತಡೆಯುವುದಾಕ್ಕಾಗಿ ಮಾತ್ರ ಕಾಂಗ್ರೆಸ್ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಹಾಗಾಗಿ ಕಾಂಗ್ರೆಸ್ ಮಹಾರಾಷ್ಟ್ರ ವಿಕಾಸ ಅಘಾಡಿಯ ಭಾಗವಾಗಿದೆ. ಕಾಂಗ್ರೆಸ್ ಮತ್ತು ಶಿವಸೇನೆ ಮಹಾರಾಷ್ಟ್ರದಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸುತ್ತವೆ ಎಂಬ ಕುರಿತು ಮೈತ್ರಿ ಸರ್ಕಾರ ರಚನೆಯ ಸಂದರ್ಭದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಪ್ರತಿಯೊಂದು ರಾಜಕೀಯ ಪಕ್ಷವೂ ತನ್ನ ಮತದಾರರ ಬೇಸ್ ಅನ್ನು ಬೆಳೆಸಲು ಪ್ರಯತ್ನಿಸುತ್ತದೆ. ಕಾಂಗ್ರೆಸ್‌ ಕೂಡ ಮಹಾರಾಷ್ಟ್ರದಲ್ಲಿ ಅದನ್ನೆ ಮಾಡುತ್ತಿದೆ. ಆದರೆ ಕಾಂಗ್ರೆಸ್ ತಾನಾಗಿಯೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಡವುವ ಯಾವ ಪ್ರಯತ್ನಕ್ಕೂ ಮುಂದಾಗುವುದಿಲ್ಲ. ಶಿವಸೇನೆ, ಸರ್ಕಾರದ ಭಾಗವಾದ ಕಾಂಗ್ರೆಸ್‌ ಪಕ್ಷವನ್ನು ಗೌರವಿಸುವ ಮೂಲಕ ಮೈತ್ರಿಧರ್ಮವನ್ನು ಪಾಲಿಸಬೇಕು ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲಿ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳಿಗೆ ಇನ್ನಷ್ಟು ಪುಷ್ಠಿ ನೀಡಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಬೃಹನ್‌ ಮುಂಬೈ ಕಾರ್ಪೋರೇಷನ್ (BMC) ಚುನಾವಣೆ ಮತ್ತು ಮುಂದಿನ ಮಹರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್-ಶಿವಸೇನೆ ಮೈತ್ರಿ ಕೇವಲ 5 ವರ್ಷದ ಅವಧಿಯದು ಎಂಬುದನ್ನು ನಾನಾ ಪಟೋಲಿ ಪರೋಕ್ಷವಾಗಿ ತಿಳಿಸಿದ್ದರು.

ಇನ್ನು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್ “ಮುಂದಿನ ಮೈತ್ರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ. ಅಂದರೆ ಕಾಂಗ್ರೆಸ್ ಮೈತ್ರಿಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಭಿನ್ನವಾದ ಪ್ರತಿಕ್ರಿಯೆನ್ನು ಶಿವಸೇನಾ ಸಂಸದ ಸಂಜಯ್ ರಾವತ್ ವ್ಯಕ್ತಪಡಿಸಿದ್ದಾರೆ. “ಮೈತ್ರಿಯಲ್ಲಿ ಬಿರುಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಒಗ್ಗಟ್ಟಾಗಿದ್ದೇವೆ ಮತ್ತು ಒಗ್ಗಟ್ಟಾಗಿಯೇ 5 ವರ್ಷ ಪೂರೈಸುತ್ತೇವೆ. ಸರ್ಕಾರ ರಚಿಸಲು ಪ್ರಯತ್ನಿಸಿ ವಿಫಲರಾದ, ಅಧಿಕಾರ ಕಳೆದುಕೊಂಡ ಕೆಲ ಹೊರಗಿನ ಶಕ್ತಿಗಳು ಊಹಾಪೋಹಗಳನ್ನು ಹರಿಯಬಿಡುತ್ತಿವೆ. ಆದರೆ ಅದು ಯಶಸ್ವಿಯಾಗುವುದಿಲ್ಲ” ಎಂದು ಅವರು ಮೈತ್ರಿ ಸರ್ಕಾರದ ಪರ ನಿಂತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಾನಾ ಪಟೋಲಿ ಹೇಳಿಕೆಗೆ ಪರೊಕ್ಷವಾಗಿ ಪ್ರತಿಕ್ರಿಯಿಸಿ ರಾಜಕೀಯ ಪಕ್ಷಗಳು ಬೇರೆ ಎಲ್ಲಾ ವಿಷಯಗಳನ್ನು ಬದಿಗೊತ್ತಿ ಸದ್ಯ ಮಹರಾಷ್ಟ್ರದ ಅಭಿವೃದ್ದಿ ಮತ್ತು ರಾಜ್ಯದ ಆರ್ಥಿಕ ಚೇತರಿಕೆಯ ಕಡೆ ಗಮನಕೊಡಬೇಕು ಎಂದಿದ್ದರು.

ಒಟ್ಟಿನಲ್ಲಿ ಎರಡು ವಿರುದ್ಧ ಸಿದ್ಧಾಂತಗಳ ಪಕ್ಷಗಳಾದ ಕಾಂಗ್ರೆಸ್ ಮತ್ತು ಶಿವಸೇನೆ ಎಷ್ಟುದಿನ ಹೊಂದಾಣಿಕೆಯಿಂದ ಅಡಳಿತ ನಡೆಸಬಲ್ಲವು ಎಂದು ಹಲವರು ಮೈತ್ರಿಯ ಅರಂಭದಲ್ಲಿಯೇ ಅನುಮಾನವನ್ನು ವ್ಯಕ್ತಪಡಿಸಿದ್ದರು. ಈಗ ನಿಧಾನಕ್ಕೆ ಮಹಾರಾಷ್ಟ್ರ ಸರ್ಕಾರದಲ್ಲಿ ಅಸಮಾಧಾನದ ಅಲೆಗಳು ಏಳತೊಡಗಿವೆ.

ಇದನ್ನು ಓದಿ : ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...