HomeಮುಖಪುಟIISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

- Advertisement -
- Advertisement -

2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಲಯ ಪ್ರಕರಣದ ಆರೋಪಿ ಮೊಹಮ್ಮದ್ ಹಬೀಬ್ ಅವರನ್ನು ಇಂದು ದೋಷಮುಕ್ತಗೊಳಿಸಿದೆ. ಮೊಹಮ್ಮದ್ ಹಬೀಬ್ ಅವರು UAPA ಕಾಯ್ದೆಯಡಿ ಕಳೆದ 4 ವರ್ಷಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದರು.

2005 ರ ಡಿಸೆಂಬರ್‌ನಲ್ಲಿ ಬೆಂಗಳೂರಿನ IISC ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ವ್ಯಕ್ತಿ ಮೃತಪಟ್ಟು ಅನೇಕರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 7 ನೇ ಆರೋಪಿಯಾಗಿ ಹಬೀಬ್ ಅವರನ್ನು 2017 ರಲ್ಲಿ ಬಂಧಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಧೀಶ ಕಾಸನಪ್ಪ ನಾಯ್ಕ್‌ ಮೊಹಮ್ಮದ್ ಹಬೀಬ್ ಅವರನ್ನು ಬಿಡುಗಡೆಗೊಳಿಸಿ ಆದೇಶ ನೀಡಿದ್ದಾರೆ. ಎನ್‌ಐಎ ಆರೋಪಿತರ ವಿರುದ್ಧದ ಆರೊಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ. NIA ಬಂಧಿತ ಆರೋಪಿ ಮೊಹಮ್ಮದ್ ಹಬೀಬ್ ಅವರ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಪ್ರಕರಣದ 7 ನೇ ಆರೋಪಿಯಾಗಿರುವ ಹಬೀಬ್ ವಿರುದ್ಧ IPC ಸೆಕ್ಷನ್ 121-A, 122, 123, 307, 302 ಇಂಡಿಯನ್ ಆರ್ಮ್ಸ್‌ ಆಕ್ಟ್‌ನ ಸೆಕ್ಷನ್‌ 25, 27 ಸೇರಿದಂತೆ ಬೇರೆ ಬೇರೆ ಕಾನೂನುಗಳಡಿ  NIA ಪ್ರಕರಣವನ್ನು ದಾಖಲಿಸಿತ್ತು.

ಆರೋಪಿಯು ತಾನು ಯಾವ ಕಾರಣಕ್ಕೆ ಬಂಧಿತನಾಗಿದ್ದೇನೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನ್ಯಾಯಾಧೀಶರಾದ ಕಾಸನಪ್ಪ ನಾಯ್ಕ್ ಪ್ರಕರಣದ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮೊಹಮ್ಮದ್ ಹಬೀಬ್ ಅವರನ್ನು ಎನ್‌ಐಎ ಪೊಲೀಸರು 2017 ರಲ್ಲಿ ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ಬಂಧಿಸಿದ್ದರು.

ಆರೋಪಿತ ಹಬೀಬ್ ಅವರ ಪರವಾಗಿ ವಾದಿಸಿದ ನ್ಯಾಯವಾದಿ ಮೊಹಮ್ಮದ್ ತಾಹೀರ್ ಪೊಲೀಸರು ಆರೋಪಿಯ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಯಾವುದೇ ಆರೋಪಗಳನ್ನು ಮಾಡಿಲ್ಲ. ಜೊತೆಗೆ ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ಪಾತ್ರವನ್ನು ಸಾಬೀತುಪಡಿಸುವ ಯಾವೊಂದು ಸಾಕ್ಷಿಗಳನ್ನು ಇದುವರೆಗೆ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದೀನ್ 29.03.2008 ರಲ್ಲಿ ನೀಡಿದ್ದ ಹೇಳಿಕೆಯಲ್ಲಿ ತಾನು ಮೇ 2005 ರಲ್ಲಿ ಹಬೀಬ್ ಅವರನ್ನು ತ್ರಿಪುರಾದಲ್ಲಿ ಭೇಟಿಯಾಗಿದ್ದೆ. ಹಬೀಬ್ ಸಹಾಯದಿಂದ ಭಾರತದ ಗಡಿಯನ್ನು ದಾಟಿ ಬಾಂಗ್ಲಾದೇಶಕ್ಕೆ ಹೋಗಿ ಬಂದಿದ್ದೆ. ಎಲ್ಲೂ ನನ್ನ ಉದ್ಧೇಶವನ್ನು ಹಬೀಬ್‌ಗೆ ಹೇಳಿರಲಿಲ್ಲ ಎಂದು 35 ಪುಟಗಳ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದರು. ಸಬಾಹುದ್ದಿನ್ ಹೇಳಿಕೆಯ ಆಧಾರದ ಮೇಲೆ ಎನ್‌ಐಎ ಪೊಲೀಸರು ಹಬೀಬ್ ಅವರನ್ನು ಬಂಧಿಸಿದ್ದರು.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದಿನ್ ತನ್ನ ಹೇಳಿಕೆಯಲ್ಲಿ ಅನೇಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಆಶ್ರಯ ನೀಡಿದವರು, ದಾಳಿಗೆ ಸಹಾಯ ಮಾಡಿದವರು, ಹೀಗೆ ಅನೆಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರೆ ಎನ್‌ಐಎ ಪೊಲೀಸರು ಇವರೆಲ್ಲರ ಕುರಿತು ಸ್ಪಷ್ಟ ಮಾಹಿತಿಯಿದ್ದರೂ ಅವರನ್ನೆಲ್ಲ ಪ್ರಕರಣದ ಆರೊಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿಲ್ಲ. ಸಾಕ್ಷಿಗಳನ್ನಾಗಿಯೂ ಮಾಡಿಲ್ಲ. ಅದರೆ ಹಬೀಬ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಹಾಗೇ 2017 ರ ಮಾರ್ಚ್‌ 23 ರಂದು ಹಬೀಬ್ ಅವರನ್ನು ಬಂಧಿಸಿದ ಎನ್‌ಐಎ ಅವರಿಂದ ಬಲವಂತವಾಗಿ ಹೇಳಿಕೆಯನ್ನು ಪಡೆದುಕೊಂಡಿದೆ. ಅದರೆ ಆ ಹೇಳಿಕೆಗೆ ಕಾನೂನಾತ್ಮಕವಾದ ಯಾವ ಮಾನ್ಯತೆಯೂ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಎನ್‌ಐಎ ನ್ಯಾಯಾಲಯವು ಸುದೀರ್ಘವಾಗಿ ಪ್ರಕರಣದ ವಿಚಾರಣೆಯನ್ನು ನಡೆಸಿ ಮುಖ್ಯ ಆರೋಪಿ ಸಬಾಹುದ್ದಿನ್ ತನ್ನ ಉದ್ಧೇಶಗಳನ್ನು ಮೊಹಮ್ಮದ್ ಹಬೀಬ್ ಅವರಿಗೆ ತಿಳಿಸಿರಲಿಲ್ಲ. ಜೊತೆಗೆ ಮೊಹಮ್ಮದ್ ಹಬೀಬ್ ಅವರಿಗೆ ಐಐಎಸ್‌ಸಿ ಬೆಂಗಳೂರಿನಲ್ಲಿ ದಾಳಿ ನಡೆಯುವ ಯಾವ ಮಾಹಿತಿಯೂ ಇರಲಿಲ್ಲ. ಸಬಾಹುದ್ದಿನ್‌ಗೆ ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ನಂಟು ಇರುವುದು ಮೊಹಮ್ಮದ್ ಹಬೀಬ್ ಅವರಿಗೆ ಮಾಹಿತಿಯಿರಲಿಲ್ಲ. ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ವಯಕ್ತಿಕ ಪಾತ್ರ ಸಾಬೀತಾಗಿಲ್ಲ. ಹಾಗಾಗಿ ಬೆಂಗಳೂರು IISc ದಾಳಿ ಪ್ರಕರಣದ ಆರೊಪದಿಂದ ಮೊಹಮ್ಮದ್ ಹಬೀಬ್ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು NIA ಕೋರ್ಟ್ ಹೇಳಿದೆ.


ಇದನ್ನೂ ಓದಿ : ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...