HomeಮುಖಪುಟIISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

- Advertisement -
- Advertisement -

2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಲಯ ಪ್ರಕರಣದ ಆರೋಪಿ ಮೊಹಮ್ಮದ್ ಹಬೀಬ್ ಅವರನ್ನು ಇಂದು ದೋಷಮುಕ್ತಗೊಳಿಸಿದೆ. ಮೊಹಮ್ಮದ್ ಹಬೀಬ್ ಅವರು UAPA ಕಾಯ್ದೆಯಡಿ ಕಳೆದ 4 ವರ್ಷಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದರು.

2005 ರ ಡಿಸೆಂಬರ್‌ನಲ್ಲಿ ಬೆಂಗಳೂರಿನ IISC ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ವ್ಯಕ್ತಿ ಮೃತಪಟ್ಟು ಅನೇಕರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 7 ನೇ ಆರೋಪಿಯಾಗಿ ಹಬೀಬ್ ಅವರನ್ನು 2017 ರಲ್ಲಿ ಬಂಧಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಧೀಶ ಕಾಸನಪ್ಪ ನಾಯ್ಕ್‌ ಮೊಹಮ್ಮದ್ ಹಬೀಬ್ ಅವರನ್ನು ಬಿಡುಗಡೆಗೊಳಿಸಿ ಆದೇಶ ನೀಡಿದ್ದಾರೆ. ಎನ್‌ಐಎ ಆರೋಪಿತರ ವಿರುದ್ಧದ ಆರೊಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ. NIA ಬಂಧಿತ ಆರೋಪಿ ಮೊಹಮ್ಮದ್ ಹಬೀಬ್ ಅವರ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಪ್ರಕರಣದ 7 ನೇ ಆರೋಪಿಯಾಗಿರುವ ಹಬೀಬ್ ವಿರುದ್ಧ IPC ಸೆಕ್ಷನ್ 121-A, 122, 123, 307, 302 ಇಂಡಿಯನ್ ಆರ್ಮ್ಸ್‌ ಆಕ್ಟ್‌ನ ಸೆಕ್ಷನ್‌ 25, 27 ಸೇರಿದಂತೆ ಬೇರೆ ಬೇರೆ ಕಾನೂನುಗಳಡಿ  NIA ಪ್ರಕರಣವನ್ನು ದಾಖಲಿಸಿತ್ತು.

ಆರೋಪಿಯು ತಾನು ಯಾವ ಕಾರಣಕ್ಕೆ ಬಂಧಿತನಾಗಿದ್ದೇನೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನ್ಯಾಯಾಧೀಶರಾದ ಕಾಸನಪ್ಪ ನಾಯ್ಕ್ ಪ್ರಕರಣದ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮೊಹಮ್ಮದ್ ಹಬೀಬ್ ಅವರನ್ನು ಎನ್‌ಐಎ ಪೊಲೀಸರು 2017 ರಲ್ಲಿ ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ಬಂಧಿಸಿದ್ದರು.

ಆರೋಪಿತ ಹಬೀಬ್ ಅವರ ಪರವಾಗಿ ವಾದಿಸಿದ ನ್ಯಾಯವಾದಿ ಮೊಹಮ್ಮದ್ ತಾಹೀರ್ ಪೊಲೀಸರು ಆರೋಪಿಯ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಯಾವುದೇ ಆರೋಪಗಳನ್ನು ಮಾಡಿಲ್ಲ. ಜೊತೆಗೆ ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ಪಾತ್ರವನ್ನು ಸಾಬೀತುಪಡಿಸುವ ಯಾವೊಂದು ಸಾಕ್ಷಿಗಳನ್ನು ಇದುವರೆಗೆ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದೀನ್ 29.03.2008 ರಲ್ಲಿ ನೀಡಿದ್ದ ಹೇಳಿಕೆಯಲ್ಲಿ ತಾನು ಮೇ 2005 ರಲ್ಲಿ ಹಬೀಬ್ ಅವರನ್ನು ತ್ರಿಪುರಾದಲ್ಲಿ ಭೇಟಿಯಾಗಿದ್ದೆ. ಹಬೀಬ್ ಸಹಾಯದಿಂದ ಭಾರತದ ಗಡಿಯನ್ನು ದಾಟಿ ಬಾಂಗ್ಲಾದೇಶಕ್ಕೆ ಹೋಗಿ ಬಂದಿದ್ದೆ. ಎಲ್ಲೂ ನನ್ನ ಉದ್ಧೇಶವನ್ನು ಹಬೀಬ್‌ಗೆ ಹೇಳಿರಲಿಲ್ಲ ಎಂದು 35 ಪುಟಗಳ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದರು. ಸಬಾಹುದ್ದಿನ್ ಹೇಳಿಕೆಯ ಆಧಾರದ ಮೇಲೆ ಎನ್‌ಐಎ ಪೊಲೀಸರು ಹಬೀಬ್ ಅವರನ್ನು ಬಂಧಿಸಿದ್ದರು.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದಿನ್ ತನ್ನ ಹೇಳಿಕೆಯಲ್ಲಿ ಅನೇಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಆಶ್ರಯ ನೀಡಿದವರು, ದಾಳಿಗೆ ಸಹಾಯ ಮಾಡಿದವರು, ಹೀಗೆ ಅನೆಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರೆ ಎನ್‌ಐಎ ಪೊಲೀಸರು ಇವರೆಲ್ಲರ ಕುರಿತು ಸ್ಪಷ್ಟ ಮಾಹಿತಿಯಿದ್ದರೂ ಅವರನ್ನೆಲ್ಲ ಪ್ರಕರಣದ ಆರೊಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿಲ್ಲ. ಸಾಕ್ಷಿಗಳನ್ನಾಗಿಯೂ ಮಾಡಿಲ್ಲ. ಅದರೆ ಹಬೀಬ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಹಾಗೇ 2017 ರ ಮಾರ್ಚ್‌ 23 ರಂದು ಹಬೀಬ್ ಅವರನ್ನು ಬಂಧಿಸಿದ ಎನ್‌ಐಎ ಅವರಿಂದ ಬಲವಂತವಾಗಿ ಹೇಳಿಕೆಯನ್ನು ಪಡೆದುಕೊಂಡಿದೆ. ಅದರೆ ಆ ಹೇಳಿಕೆಗೆ ಕಾನೂನಾತ್ಮಕವಾದ ಯಾವ ಮಾನ್ಯತೆಯೂ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಎನ್‌ಐಎ ನ್ಯಾಯಾಲಯವು ಸುದೀರ್ಘವಾಗಿ ಪ್ರಕರಣದ ವಿಚಾರಣೆಯನ್ನು ನಡೆಸಿ ಮುಖ್ಯ ಆರೋಪಿ ಸಬಾಹುದ್ದಿನ್ ತನ್ನ ಉದ್ಧೇಶಗಳನ್ನು ಮೊಹಮ್ಮದ್ ಹಬೀಬ್ ಅವರಿಗೆ ತಿಳಿಸಿರಲಿಲ್ಲ. ಜೊತೆಗೆ ಮೊಹಮ್ಮದ್ ಹಬೀಬ್ ಅವರಿಗೆ ಐಐಎಸ್‌ಸಿ ಬೆಂಗಳೂರಿನಲ್ಲಿ ದಾಳಿ ನಡೆಯುವ ಯಾವ ಮಾಹಿತಿಯೂ ಇರಲಿಲ್ಲ. ಸಬಾಹುದ್ದಿನ್‌ಗೆ ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ನಂಟು ಇರುವುದು ಮೊಹಮ್ಮದ್ ಹಬೀಬ್ ಅವರಿಗೆ ಮಾಹಿತಿಯಿರಲಿಲ್ಲ. ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ವಯಕ್ತಿಕ ಪಾತ್ರ ಸಾಬೀತಾಗಿಲ್ಲ. ಹಾಗಾಗಿ ಬೆಂಗಳೂರು IISc ದಾಳಿ ಪ್ರಕರಣದ ಆರೊಪದಿಂದ ಮೊಹಮ್ಮದ್ ಹಬೀಬ್ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು NIA ಕೋರ್ಟ್ ಹೇಳಿದೆ.


ಇದನ್ನೂ ಓದಿ : ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...