Homeಕರ್ನಾಟಕಕನ್ನಡಿಗರ ಆಕ್ರೋಶಕ್ಕೆ ಮನ್ನಣೆ: ಲೋಕಸಭಾ ಸಚಿವಾಲಯದ ಪ್ರೈಡ್(PRIDE) ಆನ್‌ಲೈನ್ ತರಗತಿಯಲ್ಲಿ ಕನ್ನಡ ಸೇರ್ಪಡೆ

ಕನ್ನಡಿಗರ ಆಕ್ರೋಶಕ್ಕೆ ಮನ್ನಣೆ: ಲೋಕಸಭಾ ಸಚಿವಾಲಯದ ಪ್ರೈಡ್(PRIDE) ಆನ್‌ಲೈನ್ ತರಗತಿಯಲ್ಲಿ ಕನ್ನಡ ಸೇರ್ಪಡೆ

- Advertisement -
- Advertisement -

ಲೋಕಸಭಾ ಸಚಿವಾಲಯದ ಅಡಿಯಲ್ಲಿ ಬರುವ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಕನ್ನಡವನ್ನು ಕಡೆಗಣಿದ್ದ ಬಗ್ಗೆ ರಾಜ್ಯದಲ್ಲಿ ಆಕ್ರೋಶ  ವ್ಯಕ್ತವಾಗಿತ್ತು. ಕನ್ನಡ ಸಾಹಿತಿಗಳು, ಕನ್ನಡಪರ ಹೋರಾಟಗಾರರು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್‌, ರಾಜಕೀಯ ನಾಯಕರ ಟೀಕೆಯಿಂದ ಎಚ್ಚೆತ್ತಿರುವ ಒಕ್ಕೂಟ ಸರ್ಕಾರ ಈಗ ಕನ್ನಡವನ್ನು ಆನ್‌ಲೈನ್‌ ತರಗತಿಯಲ್ಲಿ ಸೇರಿಸಿದೆ.

ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಇದೇ 22ರಿಂದ ಭಾಷೆಗಳ ಕಲಿಕಾ ಆನ್‌ಲೈನ್‌ ತರಬೇತಿ ಆರಂಭ ಮಾಡುತ್ತಿದ್ದು, ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ ಭಾಷೆಯನ್ನು ಇದರಲ್ಲಿ ಸೇರಿಸಲಾಗಿತ್ತು. ಆದರೆ ಕನ್ನಡವನ್ನು ಕಡೆಗಣಿಸಲಾಗಿತ್ತು.

ಈ ಕುರಿತು ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್‌, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದು ಆನ್‌ಲೈನ್‌ ತರಗತಿಗಳಲ್ಲಿ ಕನ್ನಡವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಇದರಂತೆ ಜುಲೈ 5 ರಿಂದ ಕನ್ನಡವನ್ನು ಪರಿಗಣಿಸುವುದಾಗಿ ವೆಂಕಯ್ಯ ನಾಯ್ಡು ಆದೇಶಿಸಿದ್ದಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್‌, ’ಕನ್ನಡ ಭಾಷೆಯನ್ನು ಆನ್‌ಲೈನ್ ತರಗತಿಯಲ್ಲಿ ಪರಿಗಣಿಸುವಂತೆ ಮಾಡಿದ್ದ ಮನವಿಯನ್ನು ಪರಿಗಣಿಸಿದ್ದಾರೆ. ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, “ಕನ್ನಡಿಗರ ಎಚ್ಚರಿಕೆಗೆ ಮಣಿದ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಭಾಷೆ ಕಲಿಕೆ ತರಬೇತಿಯಲ್ಲಿ ಕನ್ನಡವನ್ನೂ ಸೇರಿಸಿದೆ. ಭಾಷಾಭಿಮಾನದ ಮೂಲಕ ಎಚ್ಚರಿಕೆ ರವಾನಿಸಿದ ಸ್ವಾಭಿಮಾನಿ ಕನ್ನಡಿಗರನ್ನು ನಾನು ಅಭಿನಂದಿಸುತ್ತೇನೆ. ಕನ್ನಡಕ್ಕಾಗಿ ನಾವೆಲ್ಲರೂ ಹೀಗೆ ಒಗ್ಗಟ್ಟಾಗಿರೋಣ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...