Homeಕರ್ನಾಟಕಕನ್ನಡಿಗರ ಆಕ್ರೋಶಕ್ಕೆ ಮನ್ನಣೆ: ಲೋಕಸಭಾ ಸಚಿವಾಲಯದ ಪ್ರೈಡ್(PRIDE) ಆನ್‌ಲೈನ್ ತರಗತಿಯಲ್ಲಿ ಕನ್ನಡ ಸೇರ್ಪಡೆ

ಕನ್ನಡಿಗರ ಆಕ್ರೋಶಕ್ಕೆ ಮನ್ನಣೆ: ಲೋಕಸಭಾ ಸಚಿವಾಲಯದ ಪ್ರೈಡ್(PRIDE) ಆನ್‌ಲೈನ್ ತರಗತಿಯಲ್ಲಿ ಕನ್ನಡ ಸೇರ್ಪಡೆ

- Advertisement -
- Advertisement -

ಲೋಕಸಭಾ ಸಚಿವಾಲಯದ ಅಡಿಯಲ್ಲಿ ಬರುವ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಕನ್ನಡವನ್ನು ಕಡೆಗಣಿದ್ದ ಬಗ್ಗೆ ರಾಜ್ಯದಲ್ಲಿ ಆಕ್ರೋಶ  ವ್ಯಕ್ತವಾಗಿತ್ತು. ಕನ್ನಡ ಸಾಹಿತಿಗಳು, ಕನ್ನಡಪರ ಹೋರಾಟಗಾರರು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್‌, ರಾಜಕೀಯ ನಾಯಕರ ಟೀಕೆಯಿಂದ ಎಚ್ಚೆತ್ತಿರುವ ಒಕ್ಕೂಟ ಸರ್ಕಾರ ಈಗ ಕನ್ನಡವನ್ನು ಆನ್‌ಲೈನ್‌ ತರಗತಿಯಲ್ಲಿ ಸೇರಿಸಿದೆ.

ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಇದೇ 22ರಿಂದ ಭಾಷೆಗಳ ಕಲಿಕಾ ಆನ್‌ಲೈನ್‌ ತರಬೇತಿ ಆರಂಭ ಮಾಡುತ್ತಿದ್ದು, ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ ಭಾಷೆಯನ್ನು ಇದರಲ್ಲಿ ಸೇರಿಸಲಾಗಿತ್ತು. ಆದರೆ ಕನ್ನಡವನ್ನು ಕಡೆಗಣಿಸಲಾಗಿತ್ತು.

ಈ ಕುರಿತು ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್‌, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದು ಆನ್‌ಲೈನ್‌ ತರಗತಿಗಳಲ್ಲಿ ಕನ್ನಡವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಇದರಂತೆ ಜುಲೈ 5 ರಿಂದ ಕನ್ನಡವನ್ನು ಪರಿಗಣಿಸುವುದಾಗಿ ವೆಂಕಯ್ಯ ನಾಯ್ಡು ಆದೇಶಿಸಿದ್ದಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್‌, ’ಕನ್ನಡ ಭಾಷೆಯನ್ನು ಆನ್‌ಲೈನ್ ತರಗತಿಯಲ್ಲಿ ಪರಿಗಣಿಸುವಂತೆ ಮಾಡಿದ್ದ ಮನವಿಯನ್ನು ಪರಿಗಣಿಸಿದ್ದಾರೆ. ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, “ಕನ್ನಡಿಗರ ಎಚ್ಚರಿಕೆಗೆ ಮಣಿದ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಭಾಷೆ ಕಲಿಕೆ ತರಬೇತಿಯಲ್ಲಿ ಕನ್ನಡವನ್ನೂ ಸೇರಿಸಿದೆ. ಭಾಷಾಭಿಮಾನದ ಮೂಲಕ ಎಚ್ಚರಿಕೆ ರವಾನಿಸಿದ ಸ್ವಾಭಿಮಾನಿ ಕನ್ನಡಿಗರನ್ನು ನಾನು ಅಭಿನಂದಿಸುತ್ತೇನೆ. ಕನ್ನಡಕ್ಕಾಗಿ ನಾವೆಲ್ಲರೂ ಹೀಗೆ ಒಗ್ಗಟ್ಟಾಗಿರೋಣ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...