Homeಕರ್ನಾಟಕರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ...

ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್ ಆದೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯ (ದಿವ್ಯ ಸ್ಪಂದನ) ಅವರು ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಹಾಕಿದ್ದ ಕೇಸಿನಲ್ಲಿ ಬೆಂಗಳೂರಿನ 8ನೇ ಅಪರ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶರು, ಸದರಿ ಚಾನೆಲ್‍ಗೆ 50 ಲಕ್ಷ ರೂಗಳನ್ನು ದಂಡ ವಿಧಿಸಿದ್ದಾರೆ. ಈ ಹಣವನ್ನು 2 ತಿಂಗಳೊಳಗೆ ರಮ್ಯಾರಿಗೆ ಪಾವತಿಸಬೇಕೆಂದು ಕೋರ್ಟ್ ಆದೇಶಿಸಿದೆ. ಈ ಕುರಿತು ವರದಿ ಮಾಡಿರುವ ಲೈವ್‍ಲಾ ವೆಬ್ ತಾಣವು, ಕೋರ್ಟಿನ ಜಡ್ಜ್‍ಮೆಂಟ್ ( https://www.livelaw.in/amp/news-updates/asianet-suvarna-news-held-liable-for-defaming-divya-spandana-50-lakhs-damages-144883 ) ಅನ್ನೂ ಪೂರ್ಣವಾಗಿ ಪ್ರಕಟಿಸಿದೆ. ಏಷ್ಯಾನೆಟ್ ಅವರ ಮಾಲೀಕತ್ವದಲ್ಲಿರುವ ಸುವರ್ಣ ಚಾನೆಲ್ ಮೇ 2013ರಲ್ಲಿ ಒಂದು ಸುಳ್ಳು ಸುದ್ದಿ ಪ್ರಕಟಿಸಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದ ಕೇಸು ಇದಾಗಿತ್ತು.

ಐಪಿಎಲ್ ಕ್ರಿಕೆಟ್‍ಗೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿದ್ದು, ಅದರಲ್ಲಿ ರಮ್ಯ ಭಾಗಿಯಾಗಿದ್ದರೆಂಬುದು ಆ ಸಂದರ್ಭದಲ್ಲಿ ಪ್ರಕಟವಾದ ಸುದ್ದಿಯ ಸಾರಾಂಶವಾಗಿತ್ತು. ಅದನ್ನು ಪ್ರಸಾರ ಮಾಡುವಾಗ ‘ಬೆಟ್ಟಿಂಗ್ ರಾಣಿಯರು’, ‘ಬೆಟ್ಟಿಂಗ್‍ನಲ್ಲಿ ಕನ್ನಡದ ಬೊಂಬೆಗಳು’, ‘ಲಿಂಕ್ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ನಟಿಯರು’, ‘ಆ ನಟಿಮಣಿಯರು ಯಾರು ಗೊತ್ತಾ?’ ಇತ್ಯಾದಿ ವಿಶೇಷಣಗಳನ್ನು ಬಳಸಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದಲ್ಲದೆ ಆ ಸಂದರ್ಭದಲ್ಲಿ ಆರ್‍ಸಿಬಿ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದ ರಮ್ಯಾರ ಫೋಟೊವನ್ನು ಸುದ್ದಿಯೊಂದಿಗೆ ಪದೇ ಪದೇ ಪ್ರಸಾರ ಮಾಡಲಾಗಿತ್ತು. ರಮ್ಯಾರ ಹೆಸರನ್ನು ಹೇಳಿ, ಅವರೇ ಇಂತಹ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕನ್ನಡದ ನಟಿ ಎಂದು ಬಿಂಬಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ತನಗೂ ಐಪಿಎಲ್‍ಗೂ ಅಥವಾ ಐಪಿಎಲ್ ಬೆಟ್ಟಿಂಗ್‍ಗೂ ಯಾವುದೇ ಸಂಬಂಧವಿಲ್ಲ. ಇದು ದುರುದ್ದೇಶಪೂರ್ವಕವಾಗಿ ತನಗೆ ಮಾನಹಾನಿ ಮಾಡುವ ಸುದ್ದಿಯಾಗಿದೆ. ಅದಕ್ಕಾಗಿ ತನಗೆ ಹತ್ತು ಕೋಟಿ ರೂಪಾಯಿ ನಷ್ಟ ಪರಿಹಾರವನ್ನು ಕಟ್ಟಿಕೊಡಬೇಕೆಂದು ಕೇಳಿದ್ದರು. ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಕೋರ್ಟ್ ರಮ್ಯಾರ ವಾದವನ್ನು ಎತ್ತಿಹಿಡಿದಿದೆ. ಸುವರ್ಣ ನ್ಯೂಸ್ ಚಾನಲ್ ದುರುದ್ದೇಶಪೂರ್ವಕವಾಗಿ ಈ ಸುದ್ದಿಯನ್ನು ಪ್ರಕಟಿಸಿರುವುದಕ್ಕೆ ತಪರಾಕಿ ಕೊಟ್ಟಿರುವ ಕೋರ್ಟ್, ಇನ್ನು ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾರ ಬಗ್ಗೆ ಸುದ್ದಿ ಪ್ರಕಟಣೆ ಮಾಡಬಾರದೆಂದು ಸದರಿ ಚಾನೆಲ್ ಗೆ ಆದೇಶಿಸಿದೆ.

ಈ ಕುರಿತು ನಾನು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ವಕೀಲೆ ರಾಜಲಕ್ಷ್ಮಿ ಅಂಕಲಗಿ ‘ಕೀಳು ಮಟ್ಟದ ರೋಚಕತೆ, ಟಿಆರ್‍ಪಿ ಮತ್ತು ಬಿಜೆಪಿ ಪರ ಸುದ್ದಿ ಮಾಡುವ ದುರುದ್ದೇಶದೊಂದಿಗೆ ಇಂತಹ ಸುದ್ದಿಗಳನ್ನು ಚಾನೆಲ್‍ಗಳು ಪ್ರಕಟಿಸುತ್ತವೆ. ಈ ಪ್ರಕರಣದಲ್ಲಿ ಸದರಿ ಚಾನೆಲ್ ಬಳಸಿರುವ ಶೀರ್ಷಿಕೆಗಳೆ ಆ ಚಾನೆಲ್ ನ ಕೀಳು ಅಭಿರುಚಿಯನ್ನು ಎತ್ತಿ ತೋರಿಸುತ್ತದೆ. ಕೋರ್ಟ್ ಸರಿಯಾದ ಪಾಠ ಕಲಿಸಿದೆ. ಇದು ಇದೇ ರೀತಿ ಸುದ್ದಿ ಪ್ರಕಟಿಸುತ್ತಿರುವ ಉಳಿದ ಚಾನೆಲ್‍ಗಳಿಗೂ ದೊಡ್ಡ ಪಾಠವಾಗಲಿದೆ. ಮುಂದಾದರೂ ಈ ಚಾನೆಲ್‍ಗಳು ಬುದ್ದಿ ಕಲಿಯುತ್ತಾರ ನೋಡಬೇಕು’ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ರಮ್ಯಾರ ಪರ ಪ್ರಮೋದ್ ನಾಯರ್ ಅವರು ಮತ್ತು ಸುವರ್ಣ ಚಾನೆಲ್ ಪರ ಪೂವಯ್ಯ ಅಂಡ್ ಕಂಪನಿ ವಕಾಲತ್ತು ವಹಿಸಿದ್ದರು. ಪಾಟೀಲ್ ನಾಗಲಿಂಗನಗೌಡ ಅವರು ತೀರ್ಪು ನೀಡಿದ ನ್ಯಾಯಾಧೀಶರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...