Homeಕರ್ನಾಟಕರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ...

ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್ ಆದೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯ (ದಿವ್ಯ ಸ್ಪಂದನ) ಅವರು ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಹಾಕಿದ್ದ ಕೇಸಿನಲ್ಲಿ ಬೆಂಗಳೂರಿನ 8ನೇ ಅಪರ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶರು, ಸದರಿ ಚಾನೆಲ್‍ಗೆ 50 ಲಕ್ಷ ರೂಗಳನ್ನು ದಂಡ ವಿಧಿಸಿದ್ದಾರೆ. ಈ ಹಣವನ್ನು 2 ತಿಂಗಳೊಳಗೆ ರಮ್ಯಾರಿಗೆ ಪಾವತಿಸಬೇಕೆಂದು ಕೋರ್ಟ್ ಆದೇಶಿಸಿದೆ. ಈ ಕುರಿತು ವರದಿ ಮಾಡಿರುವ ಲೈವ್‍ಲಾ ವೆಬ್ ತಾಣವು, ಕೋರ್ಟಿನ ಜಡ್ಜ್‍ಮೆಂಟ್ ( https://www.livelaw.in/amp/news-updates/asianet-suvarna-news-held-liable-for-defaming-divya-spandana-50-lakhs-damages-144883 ) ಅನ್ನೂ ಪೂರ್ಣವಾಗಿ ಪ್ರಕಟಿಸಿದೆ. ಏಷ್ಯಾನೆಟ್ ಅವರ ಮಾಲೀಕತ್ವದಲ್ಲಿರುವ ಸುವರ್ಣ ಚಾನೆಲ್ ಮೇ 2013ರಲ್ಲಿ ಒಂದು ಸುಳ್ಳು ಸುದ್ದಿ ಪ್ರಕಟಿಸಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದ ಕೇಸು ಇದಾಗಿತ್ತು.

ಐಪಿಎಲ್ ಕ್ರಿಕೆಟ್‍ಗೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿದ್ದು, ಅದರಲ್ಲಿ ರಮ್ಯ ಭಾಗಿಯಾಗಿದ್ದರೆಂಬುದು ಆ ಸಂದರ್ಭದಲ್ಲಿ ಪ್ರಕಟವಾದ ಸುದ್ದಿಯ ಸಾರಾಂಶವಾಗಿತ್ತು. ಅದನ್ನು ಪ್ರಸಾರ ಮಾಡುವಾಗ ‘ಬೆಟ್ಟಿಂಗ್ ರಾಣಿಯರು’, ‘ಬೆಟ್ಟಿಂಗ್‍ನಲ್ಲಿ ಕನ್ನಡದ ಬೊಂಬೆಗಳು’, ‘ಲಿಂಕ್ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ನಟಿಯರು’, ‘ಆ ನಟಿಮಣಿಯರು ಯಾರು ಗೊತ್ತಾ?’ ಇತ್ಯಾದಿ ವಿಶೇಷಣಗಳನ್ನು ಬಳಸಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದಲ್ಲದೆ ಆ ಸಂದರ್ಭದಲ್ಲಿ ಆರ್‍ಸಿಬಿ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದ ರಮ್ಯಾರ ಫೋಟೊವನ್ನು ಸುದ್ದಿಯೊಂದಿಗೆ ಪದೇ ಪದೇ ಪ್ರಸಾರ ಮಾಡಲಾಗಿತ್ತು. ರಮ್ಯಾರ ಹೆಸರನ್ನು ಹೇಳಿ, ಅವರೇ ಇಂತಹ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕನ್ನಡದ ನಟಿ ಎಂದು ಬಿಂಬಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ತನಗೂ ಐಪಿಎಲ್‍ಗೂ ಅಥವಾ ಐಪಿಎಲ್ ಬೆಟ್ಟಿಂಗ್‍ಗೂ ಯಾವುದೇ ಸಂಬಂಧವಿಲ್ಲ. ಇದು ದುರುದ್ದೇಶಪೂರ್ವಕವಾಗಿ ತನಗೆ ಮಾನಹಾನಿ ಮಾಡುವ ಸುದ್ದಿಯಾಗಿದೆ. ಅದಕ್ಕಾಗಿ ತನಗೆ ಹತ್ತು ಕೋಟಿ ರೂಪಾಯಿ ನಷ್ಟ ಪರಿಹಾರವನ್ನು ಕಟ್ಟಿಕೊಡಬೇಕೆಂದು ಕೇಳಿದ್ದರು. ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಕೋರ್ಟ್ ರಮ್ಯಾರ ವಾದವನ್ನು ಎತ್ತಿಹಿಡಿದಿದೆ. ಸುವರ್ಣ ನ್ಯೂಸ್ ಚಾನಲ್ ದುರುದ್ದೇಶಪೂರ್ವಕವಾಗಿ ಈ ಸುದ್ದಿಯನ್ನು ಪ್ರಕಟಿಸಿರುವುದಕ್ಕೆ ತಪರಾಕಿ ಕೊಟ್ಟಿರುವ ಕೋರ್ಟ್, ಇನ್ನು ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾರ ಬಗ್ಗೆ ಸುದ್ದಿ ಪ್ರಕಟಣೆ ಮಾಡಬಾರದೆಂದು ಸದರಿ ಚಾನೆಲ್ ಗೆ ಆದೇಶಿಸಿದೆ.

ಈ ಕುರಿತು ನಾನು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ವಕೀಲೆ ರಾಜಲಕ್ಷ್ಮಿ ಅಂಕಲಗಿ ‘ಕೀಳು ಮಟ್ಟದ ರೋಚಕತೆ, ಟಿಆರ್‍ಪಿ ಮತ್ತು ಬಿಜೆಪಿ ಪರ ಸುದ್ದಿ ಮಾಡುವ ದುರುದ್ದೇಶದೊಂದಿಗೆ ಇಂತಹ ಸುದ್ದಿಗಳನ್ನು ಚಾನೆಲ್‍ಗಳು ಪ್ರಕಟಿಸುತ್ತವೆ. ಈ ಪ್ರಕರಣದಲ್ಲಿ ಸದರಿ ಚಾನೆಲ್ ಬಳಸಿರುವ ಶೀರ್ಷಿಕೆಗಳೆ ಆ ಚಾನೆಲ್ ನ ಕೀಳು ಅಭಿರುಚಿಯನ್ನು ಎತ್ತಿ ತೋರಿಸುತ್ತದೆ. ಕೋರ್ಟ್ ಸರಿಯಾದ ಪಾಠ ಕಲಿಸಿದೆ. ಇದು ಇದೇ ರೀತಿ ಸುದ್ದಿ ಪ್ರಕಟಿಸುತ್ತಿರುವ ಉಳಿದ ಚಾನೆಲ್‍ಗಳಿಗೂ ದೊಡ್ಡ ಪಾಠವಾಗಲಿದೆ. ಮುಂದಾದರೂ ಈ ಚಾನೆಲ್‍ಗಳು ಬುದ್ದಿ ಕಲಿಯುತ್ತಾರ ನೋಡಬೇಕು’ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ರಮ್ಯಾರ ಪರ ಪ್ರಮೋದ್ ನಾಯರ್ ಅವರು ಮತ್ತು ಸುವರ್ಣ ಚಾನೆಲ್ ಪರ ಪೂವಯ್ಯ ಅಂಡ್ ಕಂಪನಿ ವಕಾಲತ್ತು ವಹಿಸಿದ್ದರು. ಪಾಟೀಲ್ ನಾಗಲಿಂಗನಗೌಡ ಅವರು ತೀರ್ಪು ನೀಡಿದ ನ್ಯಾಯಾಧೀಶರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...