Homeಕರ್ನಾಟಕರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ...

ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್ ಆದೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯ (ದಿವ್ಯ ಸ್ಪಂದನ) ಅವರು ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಹಾಕಿದ್ದ ಕೇಸಿನಲ್ಲಿ ಬೆಂಗಳೂರಿನ 8ನೇ ಅಪರ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶರು, ಸದರಿ ಚಾನೆಲ್‍ಗೆ 50 ಲಕ್ಷ ರೂಗಳನ್ನು ದಂಡ ವಿಧಿಸಿದ್ದಾರೆ. ಈ ಹಣವನ್ನು 2 ತಿಂಗಳೊಳಗೆ ರಮ್ಯಾರಿಗೆ ಪಾವತಿಸಬೇಕೆಂದು ಕೋರ್ಟ್ ಆದೇಶಿಸಿದೆ. ಈ ಕುರಿತು ವರದಿ ಮಾಡಿರುವ ಲೈವ್‍ಲಾ ವೆಬ್ ತಾಣವು, ಕೋರ್ಟಿನ ಜಡ್ಜ್‍ಮೆಂಟ್ ( https://www.livelaw.in/amp/news-updates/asianet-suvarna-news-held-liable-for-defaming-divya-spandana-50-lakhs-damages-144883 ) ಅನ್ನೂ ಪೂರ್ಣವಾಗಿ ಪ್ರಕಟಿಸಿದೆ. ಏಷ್ಯಾನೆಟ್ ಅವರ ಮಾಲೀಕತ್ವದಲ್ಲಿರುವ ಸುವರ್ಣ ಚಾನೆಲ್ ಮೇ 2013ರಲ್ಲಿ ಒಂದು ಸುಳ್ಳು ಸುದ್ದಿ ಪ್ರಕಟಿಸಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದ ಕೇಸು ಇದಾಗಿತ್ತು.

ಐಪಿಎಲ್ ಕ್ರಿಕೆಟ್‍ಗೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿದ್ದು, ಅದರಲ್ಲಿ ರಮ್ಯ ಭಾಗಿಯಾಗಿದ್ದರೆಂಬುದು ಆ ಸಂದರ್ಭದಲ್ಲಿ ಪ್ರಕಟವಾದ ಸುದ್ದಿಯ ಸಾರಾಂಶವಾಗಿತ್ತು. ಅದನ್ನು ಪ್ರಸಾರ ಮಾಡುವಾಗ ‘ಬೆಟ್ಟಿಂಗ್ ರಾಣಿಯರು’, ‘ಬೆಟ್ಟಿಂಗ್‍ನಲ್ಲಿ ಕನ್ನಡದ ಬೊಂಬೆಗಳು’, ‘ಲಿಂಕ್ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ನಟಿಯರು’, ‘ಆ ನಟಿಮಣಿಯರು ಯಾರು ಗೊತ್ತಾ?’ ಇತ್ಯಾದಿ ವಿಶೇಷಣಗಳನ್ನು ಬಳಸಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದಲ್ಲದೆ ಆ ಸಂದರ್ಭದಲ್ಲಿ ಆರ್‍ಸಿಬಿ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದ ರಮ್ಯಾರ ಫೋಟೊವನ್ನು ಸುದ್ದಿಯೊಂದಿಗೆ ಪದೇ ಪದೇ ಪ್ರಸಾರ ಮಾಡಲಾಗಿತ್ತು. ರಮ್ಯಾರ ಹೆಸರನ್ನು ಹೇಳಿ, ಅವರೇ ಇಂತಹ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕನ್ನಡದ ನಟಿ ಎಂದು ಬಿಂಬಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ತನಗೂ ಐಪಿಎಲ್‍ಗೂ ಅಥವಾ ಐಪಿಎಲ್ ಬೆಟ್ಟಿಂಗ್‍ಗೂ ಯಾವುದೇ ಸಂಬಂಧವಿಲ್ಲ. ಇದು ದುರುದ್ದೇಶಪೂರ್ವಕವಾಗಿ ತನಗೆ ಮಾನಹಾನಿ ಮಾಡುವ ಸುದ್ದಿಯಾಗಿದೆ. ಅದಕ್ಕಾಗಿ ತನಗೆ ಹತ್ತು ಕೋಟಿ ರೂಪಾಯಿ ನಷ್ಟ ಪರಿಹಾರವನ್ನು ಕಟ್ಟಿಕೊಡಬೇಕೆಂದು ಕೇಳಿದ್ದರು. ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಕೋರ್ಟ್ ರಮ್ಯಾರ ವಾದವನ್ನು ಎತ್ತಿಹಿಡಿದಿದೆ. ಸುವರ್ಣ ನ್ಯೂಸ್ ಚಾನಲ್ ದುರುದ್ದೇಶಪೂರ್ವಕವಾಗಿ ಈ ಸುದ್ದಿಯನ್ನು ಪ್ರಕಟಿಸಿರುವುದಕ್ಕೆ ತಪರಾಕಿ ಕೊಟ್ಟಿರುವ ಕೋರ್ಟ್, ಇನ್ನು ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾರ ಬಗ್ಗೆ ಸುದ್ದಿ ಪ್ರಕಟಣೆ ಮಾಡಬಾರದೆಂದು ಸದರಿ ಚಾನೆಲ್ ಗೆ ಆದೇಶಿಸಿದೆ.

ಈ ಕುರಿತು ನಾನು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ವಕೀಲೆ ರಾಜಲಕ್ಷ್ಮಿ ಅಂಕಲಗಿ ‘ಕೀಳು ಮಟ್ಟದ ರೋಚಕತೆ, ಟಿಆರ್‍ಪಿ ಮತ್ತು ಬಿಜೆಪಿ ಪರ ಸುದ್ದಿ ಮಾಡುವ ದುರುದ್ದೇಶದೊಂದಿಗೆ ಇಂತಹ ಸುದ್ದಿಗಳನ್ನು ಚಾನೆಲ್‍ಗಳು ಪ್ರಕಟಿಸುತ್ತವೆ. ಈ ಪ್ರಕರಣದಲ್ಲಿ ಸದರಿ ಚಾನೆಲ್ ಬಳಸಿರುವ ಶೀರ್ಷಿಕೆಗಳೆ ಆ ಚಾನೆಲ್ ನ ಕೀಳು ಅಭಿರುಚಿಯನ್ನು ಎತ್ತಿ ತೋರಿಸುತ್ತದೆ. ಕೋರ್ಟ್ ಸರಿಯಾದ ಪಾಠ ಕಲಿಸಿದೆ. ಇದು ಇದೇ ರೀತಿ ಸುದ್ದಿ ಪ್ರಕಟಿಸುತ್ತಿರುವ ಉಳಿದ ಚಾನೆಲ್‍ಗಳಿಗೂ ದೊಡ್ಡ ಪಾಠವಾಗಲಿದೆ. ಮುಂದಾದರೂ ಈ ಚಾನೆಲ್‍ಗಳು ಬುದ್ದಿ ಕಲಿಯುತ್ತಾರ ನೋಡಬೇಕು’ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ರಮ್ಯಾರ ಪರ ಪ್ರಮೋದ್ ನಾಯರ್ ಅವರು ಮತ್ತು ಸುವರ್ಣ ಚಾನೆಲ್ ಪರ ಪೂವಯ್ಯ ಅಂಡ್ ಕಂಪನಿ ವಕಾಲತ್ತು ವಹಿಸಿದ್ದರು. ಪಾಟೀಲ್ ನಾಗಲಿಂಗನಗೌಡ ಅವರು ತೀರ್ಪು ನೀಡಿದ ನ್ಯಾಯಾಧೀಶರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...