Homeಮುಖಪುಟಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ...

ಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ ಪಕ್ಷಗಳು ಸಜ್ಜು?

- Advertisement -
- Advertisement -

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಪ್ರಶಾಂತ್‌ ಕಿಶೋರ್‌ ಅವರನ್ನು ಸೋಮವಾರ ಭೇಟಿಯಾಗಿದ್ದಾರೆ. ಇದು ಈ ತಿಂಗಳಲ್ಲಿ ಅವರ ನಡುವೆ ನಡೆಯುತ್ತಿರುವ ಎರಡನೆ ಸಭೆಯಾಗಿದೆ. ಮುಂದಿನ 2024 ರ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ರಚನೆಯಾಗಲಿದೆ ಎನ್ನಲಾಗಿರುವ ತೃತೀಯ ರಂಗದ ಊಹಾಪೋಹಗಳಿಗೆ ಈ ಭೇಟಿಯು ಮತ್ತಷ್ಟು ಪುಷ್ಠಿ ನೀಡಿದೆ.

ಸಭೆಯ ಬೆನ್ನಿಗೆ ಶರಾದ್ ಪವಾರ್‌ ನಾಳೆ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ನಾಳಿನ ಸಭೆಯು 2024 ರ ಲೋಕ ಸಭಾ ಚುನಾವಣೆ ಮಾತ್ರವಲ್ಲದೆ, ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಜಂಟಿ ಹೋರಾಟ ನಡೆಸುವ ಬಗ್ಗೆ ಕೂಡಾ ಗಮನ ಹರಿಸಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

ಇಂದು ಪ್ರಶಾಂತ್‌ ಕಿಶೋರ್‌ ಮತ್ತು ಶರದ್‌ ಪವಾರ್ ನಡುವಿನ ನಿವಾಸದಲ್ಲಿ ಆಂತರಿಕ ಚರ್ಚೆಗಳು ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದವು ಎಂದು ಮೂಲಗಳು ತಿಳಿಸಿವೆ. ಇಷ್ಟೇ ಅಲ್ಲದೆ ಎನ್‌ಸಿಪಿಯ ಸಾಮಾನ್ಯ ಸಭೆಯು ಕೂಡಾ ನಾಳೆಯೆ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಶಾಂತ್‌‌ ಕಿಶೋರ್, ಜೂನ್ 11 ರಂದು ಶರದ್‌ ಪವಾರ್ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿ ಸೇರುವ ಮಾತುಕತೆಗೆ ಉತ್ತೇಜನ ನೀಡಿತ್ತು.

ಮಾಜಿ ಹಣಕಾಸು ಸಚಿವ ಪ್ರಸ್ತುತ ಟಿಎಂಸಿ ಮುಖಂಡರಾಗಿರುವ ಯಶ್ವಂತ್ ಸಿನ್ಹಾ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ಮನೋಜ್ ಝಾ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಸಿಂಗ್ ಕೂಡ ಮಂಗಳವಾರ ಶರದ್‌ ಪವಾರ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

2014 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಯ ಪರವಾಗಿ ಕೆಲಸ ಮಾಡಿದ್ದ ಪ್ರಶಾಂತ್‌‌ ಕಿಶೋರ್ ನಂತರ ಅವರೊಂದಿಗೆ ಮುನಿಸಿಕೊಂಡಿದ್ದರು. ಅದರ ನಂತರ ಅವರು ಹಲವಾರು ಬಿಜೆಪಿ ಮೈತ್ರಿ ಕೂಟದ ವಿರುದ್ದವಾಗಿ ಚುನಾವಣೆಗಳಲ್ಲಿ ಕೆಲಸ ಮಾಡಿದ್ದರು.

ಪ್ರಶಾಂತ್‌ ಕಿಶೋರ್‌ ಅವರು ಟಿಎಂಸಿಗೆ ಮಾತ್ರವಲ್ಲದೆ, ತಮಿಳುನಾಡಿನ ಡಿಎಂಕೆಗೆ ಕೂಡಾ ಅವರು ಚುನಾವಣಾ ಕಾರ್ಯತಂತ್ರವನ್ನು ಮಾಡಿದ್ದರು. 2015 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜನತಾದಳ-ಯುನೈಟೆಡ್ (ಜೆಡಿ-ಯು) ಮತ್ತು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮೈತ್ರಿಕೂಟಕ್ಕೂ ಅವರು ಚುನಾವಣಾ ತಂತ್ರಗಾರರಾಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ಶರದ್ ಪವಾರ್ ಭೇಟಿಯಾದ ಪ್ರಶಾಂತ್ ಕಿಶೋರ್: 2024ರಲ್ಲಿ ಮೋದಿ ವಿರುದ್ಧ ಮೈತ್ರಿಕೂಟಕ್ಕೆ ಸಿದ್ದತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...