Homeಕರ್ನಾಟಕಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ.

- Advertisement -
- Advertisement -

ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ ಬದುಕಬೇಕೆ…? ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ…? ಮಾತನಾಡಬಾರದೇ…? ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿರುವುದು ಕನ್ನಡದ ಖ್ಯಾತ ನಟ ಸತೀಶ್ ನಿನಾಸಂ.

ಖಾಸಗಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರ ಸ್ನೇಹಿತ, ದಿವಂಗತ ನಟ ಸಂಚಾರಿ ವಿಜಯ್ ಬಗ್ಗೆ ಮಾತನಾಡುತ್ತಾ, ಸಮಾಜದಲ್ಲಿನ ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ. ಜಾತಿ ವ್ಯವಸ್ಥೆಯಿಂದ ಮನುಷ್ಯ ಅನುಭವಿಸುವ ನೋವು, ಅವಮಾನಗಳ ಕುರಿತು ಮಾತನಾಡುತ್ತಾ ‘ಇದೇ ಸಮಾಜ ಮಾಡಿದ ಅವಮಾನ, ನೋವಿನಿಂದ ನಟ ಸಂಚಾರಿ ವಿಜಯ್ ಯಾತನೆ ಅನುಭವಿಸಬೇಕಾಯಿತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಸಮಾಜದಲ್ಲಿ ಶಿಕ್ಷಣ ಪಡೆದರೂ ಮನುಷ್ಯನಲ್ಲಿ ಯಾವ ಬದಲಾವಣೆಯಾಗಿದೆ? ಪ್ರಾಣಿಗಳಲ್ಲಿ ಆಗಿರುವ ಬೆಳವಣಿಗೆ ಮನುಷ್ಯನಲ್ಲಿಲ್ಲ. ಸಮಾಜ ಯಾವಾಗ ಬದಲಾಗುತ್ತದೆ…? ಎಲ್ಲ ಸರಿಯಿದೆ ಎಂದು ಮುಚ್ಚಿಟ್ಟುಕೊಳ್ಳುವುದು ಸರಿಯಲ್ಲ. ಈಗ ವಿಜಿಯನ್ನು ಕರ್ನಾಟಕದ ಹೆಮ್ಮೆ ಎನ್ನುವಾಗ, ಆತನಿಗೆ ನಾವು ಕೊಟ್ಟ ಅವಮಾನಗಳನ್ನು, ನೋವನ್ನು ನೆನಪಿಸಿಕೊಳ್ಳಬೇಕು. ಇವತ್ತು ಅವರಿಲ್ಲ ಎಂದು ಕಣ್ಣೀರಿಡುವಾಗ ಅದಕ್ಕೆ ನಾವು ಕೂಡ ಕಾರಣ ಎಂಬುದನ್ನು ತಿಳಿಯಬೇಕು. ಈ ಸಮಾಜ, ವ್ಯವಸ್ಥೆ ಕಾರಣ ಕೂಡ ಆತನಿಲ್ಲದಕ್ಕೆ ಕಾರಣ’ ಎಂದು ನಟ ಸತೀಶ್ ನಿನಾಸಂ ಹೇಳಿದ್ದಾರೆ.

ಇದನ್ನೂ ಓದಿ: 10 ರಲ್ಲಿ8 ಭಾರತೀಯ ಅಮೆರಿಕನ್ನರು ಮೇಲ್ಜಾತಿ ಅಥವಾ ಸಾಮಾನ್ಯ ಜಾತಿಯೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ – ಸಮೀಕ್ಷೆ

’ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ  ಬದುಕುವುದು ಎಷ್ಟು ದಿನ….? ನನ್ನಿಂದ ತಪ್ಪಾಗಿದೆ..ನಿಮ್ಮಿಂದ ತಪ್ಪಾಗಿದೆ. ಸರಿ ಪಡಿಸಿಕೊಳ್ಳೋಣ’ ಎಂದಿದ್ದಾರೆ.

’ಸಮಾಜದಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕಾ…? ಮಾತನಾಡಬಾರದ…? ನಾವು 21ನೇ ಶತಮಾನದಲ್ಲಿ, ಈ ಕಾಲದಲ್ಲಿಯೂ ಎಲ್ಲಾ ರೀತಿಯಲ್ಲಿ ಶೈಕ್ಷಣಿಕವಾಗಿ, ವೈಜ್ಞಾನಿಕವಾಗಿ ಮುಂದುವರೆದರೂ ಮನುಷ್ಯತ್ವದ ವಿಚಾರದಲ್ಲಿ ಪ್ರಾಣಿಗಳಿಗಿಂತ  ಹಿಂದಿದ್ದೇವೆ. ಮನುಷ್ಯನಲ್ಲಿ ಕೆಟ್ಟ, ಕೊಳಕು, ವಿಷ ತುಂಬಿದ ಮನಸ್ಸು ಇದೆ’ ಎಂದು ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ.

’ಜಾತಿ ವಿಷಯದಲ್ಲಿ ಸಂಚಾರಿ ವಿಜಯ್ ತುಂಬಾ ನೋವುಗಳನ್ನು ಅನುಭವಿಸಿದ್ದಾರೆ. ಇದರಲ್ಲಿ ಸುಳ್ಳು ಇಲ್ಲ. ಈ ಬಗ್ಗೆ ವೇದಿಕೆ, ಸಮಯ ಸಿಗಲಿ ಎಳೆ ಎಳೆಯಾಗಿ ಆತನಿಗಾದ ನೋವು, ಅವಮಾನಗಳನ್ನು ತಿಳಿಸುತ್ತೇನೆ. ಆತ ಮಾತನಾಡಲು ಹೆದರುತ್ತಿದ್ದ. ಏಕೆಂದರೆ ಸಮಾಜದಲ್ಲಿ ಅಂತಹ ಪರಿಸ್ಥತಿ ಇದೆ. ಆದರೆ, ನಾನು ಮಾತನಾಡುತ್ತೇನೆ. ಏನಾದರೂ ಆಗಲಿ ಎದುರಿಸುತ್ತೇನೆ’ ಎಂದಿದ್ದಾರೆ.

’ನಮ್ಮ ಸಮಸ್ಯೆಳ ಬಗ್ಗೆ, ನಮಗಾಗಿರುವ ನೋವುಗಳ ಬಗ್ಗೆ ಮಾತನಾಡಿದರೆ, ಒಂದು ವರ್ಗಕ್ಕೆ ನಮ್ಮನ್ನು ಸೀಮಿತಗೊಳಿಸುವುದು, ಇದೊಂದು ಬೇರೆ ವರ್ಗ ಅಂತ ಪಕ್ಕಕ್ಕೆ ಇಡುವುದು ಮಾಡ್ತಾರೆ. ಆತನ ಸಿನಿಮಾಗಳನ್ನು ನೋಡಬೇಡಿ, ಅವನು ಸರಿಯಿಲ್ಲ. ಅವನು ಹೀಗೆಯೇ ಎಂದು ಹೇಳುತ್ತಾರೆ. ನನ್ನ ವಿರುದ್ಧ ಮಾತಾಡುವವರನ್ನು ಮತ್ತೊಂದು ಕೆಟಗರಿ ಮಾಡುತ್ತಾರೆ. ಆದರೆ, ಇವರು ಯಾಕೆ ಮಾತನಾಡುತ್ತಿದ್ದಾರೆ ಎಂಬುದನ್ನು ವಿಚಾರ ಮಾಡುವುದಿಲ್ಲ’ ಎಂದು ಸಮಸ್ಯೆಗಳ ಬಗ್ಗೆ ಮಾತನಾಡುವವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಮನಸ್ಥಿತಿ ಕುರಿತು ಟೀಕಿಸಿದ್ದಾರೆ.

ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

’ಮನುಷ್ಯ ತಾನೇ ಶ್ರೇಷ್ಠ ಎಂಬುದನ್ನು ಎಲ್ಲಿಯವರೆಗೆ ಬಿಡುವುದಿಲ್ಲವೂ ಅಲ್ಲಿಯವರೆಗೆ ಮನುಷ್ಯ ಉದ್ದಾರ ಆಗುವುದಿಲ್ಲ. ಮನುಷ್ಯನ ಕೊಳಕು ಮನಸ್ಥಿತಿ ಬದಲಾಗಲ್ಲ. ಭೂಮಿ ನಾಶವಾಗುತ್ತಿರುವುದು ಮನುಷ್ಯನಿಂದಲೇ, ಮನುಷ್ಯ ನಾಶವಾಗುತ್ತಿರುವುದು ಮನುಷ್ಯನಿಂದಲೇ. ಪ್ರಕೃತಿ, ಪ್ರಾಣಿಗಳಿಂದ ಅಲ್ಲ’ ಎಂದು ಒತ್ತಿ ಹೇಳಿದ್ದಾರೆ.

’ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ. ಈಗಾಗಲೇ ಜನ ತಿರುಗಿ ಬಿದ್ದಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿದರೇ ನನ್ನನ್ನು ನಾಳೆ ಸಾಯಿಸಬಹುದು. ನಿಮ್ಮನ್ನು ನಾಡಿದ್ದು, ಆದರೆ ಮಾತನಾಡುವುದನ್ನು ಮಾತನಾಡಬೇಕು’ ಎಂದು ಸತೀಶ್ ನಿನಾಸಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸತೀಶ್ ನಿನಾಸಂ ಅವರ ಹೇಳಿಕೆಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನಿನಾಸಂ ಅವರ ಅಭಿಪ್ರಾಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು, ಹೋರಾಟ ಮುಂದುವರಿಯುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಜಾತಿ ವ್ಯವಸ್ಥೆ ಒಂದು ಸಮಾಜಕ್ಕೆ ಅಂಟಿಕೊಂಡ ರೋಗ. ನನ್ನ ಜಾತಿಗೆ ಅವಮಾನ ನಿನ್ನ ಜಾತಿಗೆ ಅವಮಾನ ಮತ್ತೊಂದು ಜಾತಿಯ ವ್ಯಕ್ತಿ ಮಾತುಗಳು ಅಡಿದಾಗ ಕೆಲವು ಜನರು ವಿರೊದ ಮಾತುಗಳು ಅಡುತ್ತಾರೆ. ಆದರೆ ತನ್ನ ಜಾತಿಯ ಜನರು ಮತ್ತೊಂದು ಜಾತಿಯ ವ್ಯಕ್ತಿ ಬಗ್ಗೆ ಕೆಟ್ಟ ರೀತಿಯಲ್ಲಿ ನಡೆದುಕೊಳ್ಳುವ ಬಗ್ಗೆ ಮಾತುಗಳು ಅಡುತ್ತಿಲ್ಲಾ. ಯಾವುದೇ ಜಾತಿಯ ವ್ಯಕ್ತಿ ಜಾತಿವಾದಿ ಮಾಡಿದರು ಅವನು ಕೊಳಕು ಮನಸ್ಸಿನ ವ್ಯಕ್ತಿ . ಆಗುತ್ತಾನೆ ಭಾರತೀಯ ಜಾತಿ ವ್ಯವಸ್ಥೆ ಹೊಗದ ಹೊರತು ಭಾರತ ಎಷ್ಟೇ ಅಭಿವೃದ್ಧಿ ಆದರು ಅದು ವ್ಯರ್ಥ ಅನಿಸುತ್ತದೆ. ದಯವಿಟ್ಟು ಸಮ ಸಮಾಜ ಕಲ್ಯಾಣ ಸಮಾಜ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈ ಜೊಡಿಸೊಣ

  2. ಭಾರತದ ಅಭಿವೃದ್ಧಿ ಅಂದರೆ ಸಮ ಸಮಾಜದ ನಿರ್ಮಾಣ.
    ಬಸವಾದಿ ಶರಣರ ಬಯಸಿದ ಸಮಾಜ.
    ಬುದ್ಧ ಬಯಸಿದ ಸಮಾಜ.
    ಪೆರಿಯಾರ್ ಬಯಸಿದ ಸಮಾಜ.
    ನಾನು ಮಾತ್ರ ಶೈಕ್ಷಣಿಕ ಭಾರತ ಬಯಸುತ್ತೆನೆ.
    ಮಾನವೀಯ ಮೌಲ್ಯಗಳನ್ನು ಹೊಂದಿರುವ ಭಾರತ ಬಯಸುತ್ತೇನೆ.
    ಪ್ರತಿ ವ್ಯಕ್ತಿ ಜಾತಿಯ ಮುಕ್ತಿ ಪಡೆಯಲು ಪ್ರಯತ್ನ ಮಾಡಬೇಕು.
    ಇವನಾರವ ಇವ ನಮ್ಮವ ಅನ್ನುವ ಸಮಾಜ ನಿರ್ಮಾಣ ಮಾಡಬೇಕು.
    ಪ್ರತಿಯೊಂದು ವಿದ್ಯಾವಂತ ವ್ಯಕ್ತಿ ಸಮಾಜದ ಜಾತಿ ವ್ಯವಸ್ಥೆ ನಾಶಕ್ಕೆ ಪ್ರಯತ್ನ ಮಾಡಬೇಕು

  3. ನೀನಾಸಂ ಸತೀಶ್ ರವರ ನಿಲುವು ಸ್ವಾಗತಾರ್ಹ. ನಾವು ಕೊಚ್ಚೆಗುಂಡಿಯಲ್ಲಿ ಬದುಕುತ್ತಿದ್ದರೂ, “ಇದೇ ಸ್ವರ್ಗ” ಎಂದು ಸುಳ್ಳು ಹೇಳಿಕೊಂಡು ಎಷ್ಟು ದಿನ ತಾನೇ ಬದುಕಲು ಸಾದ್ಯ? ಸತ್ಯವನ್ನು ಒಂದಲ್ಲಾ ಒಂದು ದಿನ ಹೇಳಬೇಕಾಗಿದೆ.

  4. ಹನ್ನೆರಡನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ಯಾವ ರೀತಿ ಇತ್ತೊ ಇವತ್ತಿಗೂ ಅದೇ ರೀತಿ ಇದೆ. ಯಾವುದೇ ಬದಲಾವಣೆ ಆಗಿಲ್ಲ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...