Homeಚಳವಳಿಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

ಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

- Advertisement -
- Advertisement -

ಕೊರೊನಾ ಪರಿಹಾರವಾಗಿ ಸಮಗ್ರ ಪ್ಯಾಕೇಜ್‌‌ ನೀಡಬೇಕು ಮತ್ತು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಜೂನ್‌ 22 ರ ಮಂಗಳವಾರ (ನಾಳೆ) ದಂದು ವಸತಿ ಸಚಿವ ವಿ.ಸೋಮಣ್ಣ ಅವರ ನಿವಾಸದ ಎದುರು ಖಾಲಿ ಚೀಲಗಳನ್ನು ಸುಟ್ಟು ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆಯು ಬೆಂಗಳೂರಿನಲ್ಲಿ ಮಾತ್ರವಲ್ಲದೆ, ರಾಜ್ಯದ ಇತರ ಕಡೆಗಳಲ್ಲೂ ಜಿಲ್ಲೆಗಳ ಉಸ್ತುವಾರಿ ಮಂತ್ರಿ ಹಾಗೂ ಶಾಸಕರುಗಳ ಕಛೇರಿಯ ಮುಂದೆಯು ನಡೆಯಲಿದೆ. ಅದರಂತೆ ಬೆಂಗಳೂರಿನ ಹೋರಾಟವು ಸಚಿವ ಸೋಮಣ್ಣ ಅವರ ಬೆಂಗಳೂರಿನ ವಿಜಯನಗರದಲ್ಲಿರುವ ನಿವಾಸ ಮುಂದೆ ನಡೆಯಲಿದೆ ಎಂದು ‘ಜನಾಗ್ರಹ ಆಂದೋಲನ’ದ ಸಂಚಾಲಕಿಯಾದ ಬಿ.ಟಿ ಲಲಿತ ನಾಯಕ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

“ಕೊರೊನಾ ಎರಡನೇ ಅಲೆ ಅಪ್ಪಳಿಸಿದಾಗಿನಿಂದ ಅದನ್ನು ಎದುರಿಸಲು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುವ ಜನಸಾಮಾನ್ಯರ ದನಿಯಾಗಿ ಜನಾಗ್ರಹ ಆಂದೋಲನವು ರೂಪತಳೆದಿದೆ. ರಾಜ್ಯದ ನೂರಾರು ಗಣ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರು ಸೇರಿ ಮುಖ್ಯಮಂತ್ರಿಗೆ ಮೂರು ಬಾರಿ ಪತ್ರ ಬರೆದಿದ್ದಾರೆ ಮತ್ತು ಎರಡು ಸುತ್ತಿನ ರಾಜ್ಯವ್ಯಾಪಿ ಪ್ರತಿಭಟನೆಗಳೂ ನಡೆದಿವೆ. ಜನಾಗ್ರಹ, ಜನಪರ ಸಂಘಟನೆಗಳು ಹಾಗೂ ಮಾಧ್ಯಮಗಳು ಮಾಡಿದ ಒತ್ತಡಗಳಿಂದಾಗಿ ಎರಡು ಪ್ಯಾಕೇಜುಗಳನ್ನು ಸರ್ಕಾರ ಘೋಷಿಸಿದೆ, ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಇವು ಏನಕ್ಕೂ ಸಾಲದ ಅರೆಮನಸ್ಸಿನ ಅರೆಬರೆ ಕ್ರಮಗಳಾಗಿವೆ” ಎಂದು ಜನಾಗ್ರಹ ಆಂದೋಲನವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

“ಕುಟುಂಬಗಳು ಕುಸಿದು ಕೂತಿದ್ದು, ಬಂಧುಗಳನ್ನು ಕಳೆದುಕೊಂಡ ಕುಟುಂಬಗಳು ಕಣ್ಣೀರಿನಲ್ಲಿ ಮುಳುಗಿವೆ. ಆರ್ಥಿಕತೆ ನೆಲಕಚ್ಚಿದ್ದು ಇನ್ನೂ ಅನೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯುತ್ತಿದೆ. ಇದರಿಂದಾಗಿ ದುಡಿಮೆ ಪ್ರಾರಂಭವಾಗುವ, ಪರಿಸ್ಥಿತಿ ಸುಧಾರಿಸುವ ಆಶಾಭಾವನೆಯು ದೂರವಿದೆ. ಅಲ್ಲದೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗುತ್ತಿದೆ. ಇದೊಂದು ಅಸಮಾನ್ಯ ಪರಿಸ್ಥಿತಿ ಆಗಿದೆ” ಎಂದು ಹೇಳಿಕೆ ತಿಳಿಸಿದೆ.

“ಈ ಅಸಮಾನ್ಯ ಪರಿಸ್ಥಿತಿಯು ಅಸಮಾನ್ಯ ಕ್ರಮಗಳನ್ನು ಕೇಳುತ್ತಿದ್ದು, ಆದರೆ ಸರ್ಕಾರ ಅದನ್ನು ದಿಟ್ಟವಾಗಿ ಎದುರಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತಿಲ್ಲ. ಇಡೀ ರಾಜ್ಯ ಒಕ್ಕೊರಲಿನೊಂದಿಗೆ ಸರ್ಕಾರಕ್ಕೆ ಕೇಳಿಸುವಂತೆ, ಸರ್ಕಾರ ಕಾರ್ಯಪ್ರವೃತ್ತವಾಗುವಂತೆ ಮಾಡಬೇಕಿದೆ. ಇದರಲ್ಲಿ ಜನ ಪ್ರತಿನಿಧಿಗಳ ಪಾತ್ರ ಮುಖ್ಯವಾಗಿದೆ. ಜನಸಾಮಾನ್ಯರು ಮಾತ್ರವಲ್ಲ ಜನಪ್ರತಿನಿಧಿಗಳಾಗಿ ಅವರೂ ಸಹ ಸರ್ಕಾರವನ್ನು ಒತ್ತಾಯಿಸಬೇಕಿದೆ. ಹಾಗಾಗಿ ರಾಜ್ಯವ್ಯಾಪಿಯಾಗಿ ಉಸ್ತುವಾರಿ ಸಚಿವರು ಮತ್ತು ಬಿಜೆಪಿ ಶಾಸಕರ ಕಛೇರಿಗಳ ಮುಂದೆ ಜನಾಗ್ರಹ ನಡೆಸುತ್ತಿದ್ದೇವೆ” ಎಂದು ಜನಾಗ್ರಹ ಆಂದೋಲನ ಸಂಚಾಲನಾ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...