Homeಕರೋನಾ ತಲ್ಲಣರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

ರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

- Advertisement -
- Advertisement -

ಕೊರೊನಾ ಲಸಿಕೆ ಬಗ್ಗೆ ಹಲವು ಅನುಮಾನಗಳನ್ನು ಹೊಂದಿರುವವರಲ್ಲಿ ಅರಿವು ಮೂಡಿಸಿ, ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ಬೂತ್ ಮಟ್ಟದ ಅಧಿಕಾರಿಗಳದ್ದಾಗಿದೆ. ಹೀಗೆ ಲಸಿಕೆ ಪಡೆಯದ ಬುಡಕಟ್ಟು ಜನರ ಮನವೊಲಿಸಲು ಉಚಿತ ಪಡಿತರ ನೀಡುವುದು, ಕೋವಿಡ್ ಲಸಿಕಾ ಕೇಂದ್ರಗಳಿಗೆ ಉಚಿತ ಪ್ರಯಾಣ ಒದಗಿಸುವಂತಹ ಕೆಲಸಗಳನ್ನು ರಾಜಸ್ಥಾನದ ಉದಯಪುರ ಹಳ್ಳಿಯಲ್ಲಿ ಮಾಡಲಾಗುತ್ತಿದೆ.

ಜೂನ್ 21 ರಿಂದ ದೇಶದಲ್ಲಿ ಎಲ್ಲಾ ವಯಸ್ಕಿಗೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಉದಯಪುರದ ಬುಡಕಟ್ಟು ಜನರನ್ನು ಮನವೊಲಿಸಲು ಬೂತ್ ಮಟ್ಟದ ಅಧಿಕಾರಿ ದಿನೇಶ್ ಚಂದ್ರ ಜೋಶಿ, ಉಚಿತ ಪಡಿತರ, ಉಚಿತ ಪ್ರಯಾಣ ವ್ಯವಸ್ಥೆ, ಬುಡಕಟ್ಟು ಜನರ ಪುರೋಹಿತರನ್ನು ಒಳಗೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಉದಯಪುರದ ಹಳ್ಳಿಯ ಬುಡಕಟ್ಟು ಜನರಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದ ಜನರು ಸಾವನ್ನಪ್ಪುತ್ತಿದ್ದಾರೆ ಎಂಬ ಬಗ್ಗೆ ವದಂತಿಗಳಿವೆ. ಇದಕ್ಕೆ ಉತ್ತರಿಸಿರುವ ಅಧಿಕಾರಿ ದಿನೇಶ್ ಚಂದ್ರ ಜೋಶಿ,“ಇದು ಕೇವಲ ವದಂತಿಯಾಗಿದೆ. ಜನರು ಸತ್ತದ್ದು ಲಸಿಕೆಗಳಿಂದಲ್ಲ, ಕೊರೊನಾ ಸೋಂಕಿನಿಂದ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

45 ವರ್ಷಕ್ಕಿಂತ ಮೇಲಪಟ್ಟವರಲ್ಲಿ ಲಸಿಕೆ ತೆಗೆದುಕೊಂಡ ಸರಾಸರಿ ಪ್ರಮಾಣ 78.3% ರಷ್ಟಿರುವ ರಾಜಸ್ಥಾನದಲ್ಲಿ, ಬುಡಕಟ್ಟು ಜಿಲ್ಲೆಗಳಾದ ಉದಯಪುರ (63.9%), ಡುಂಗರಪುರ (62.7%) ಮತ್ತು ಪ್ರತಾಪಗಢ (59.3%) ಜಿಲ್ಲೆಗಳು ಕಡಿಮೆ ಲಸಿಕೆ ಪ್ರಮಾಣ ದಾಖಲಿಸಿವೆ.

ಉದಯಪುರದ ಜೋದೊಲ್ ಬ್ಲಾಕ್‌ನಲ್ಲಿ ಕೇವಲ 34% ಲಸಿಕೆ ಪಡೆಯಲಾಗಿದೆ. ಹೀಗಾಗಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಗುಂಜನ್ ಸಿಂಗ್ ಸುಮಾರು 2,000 ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದ್ದಾರೆ. ಈ ಕಿಟ್‌ಗಳಲ್ಲಿ ಅಡುಗೆ ಎಣ್ಣೆ, ಅವಲಕ್ಕಿ, ಅಕ್ಕಿ, ದಾಲ್ ಮತ್ತು ಗೋಧಿ ಹಿಟ್ಟು ಸೇರಿವೆ. ಈ ಪಡಿತರ ಕಿಟ್‌ಗಳು, ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿರುವ 12 ರಿಂದ 13 ಬುಡಕಟ್ಟು ಹಾಸ್ಟೆಲ್‌ಗಳಿಂದ ತರಲಾಗಿದೆ. ಜೊತೆಗೆ ಹಲವು ಎನ್‌ಜಿಒಗಳು ಸಹಾಯಕ್ಕೆ ನಿಂತಿವೆ ಎಂದು ಗುಂಜನ್ ಸಿಂಗ್ ಹೇಳಿದ್ದಾರೆ.

“ನಾವು ಹಳ್ಳಿಗಳಿಗೆ ಭೇಟಿ ನೀಡಿದಾಗ, ಜನರು ವ್ಯಾಕ್ಸಿನೇಷನ್ ಪಡೆದ ಬಳಿಕ ಸಾವು ಸಂಭವಿಸುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಕೆಲವೊಮ್ಮೆ ನಮಗೆ ಹಳ್ಳಿ ಒಳಗೆ ಪ್ರವೇಶಿಸಲು ಅವಕಾಶ ಕೂಡ ನೀಡುವುದಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಏನಾದರೂ ಸಂಭವಿಸಿದಲ್ಲಿ, ನಾವು ಪರಿಹಾರ ನೀಡುತ್ತೇವೆ ಎಂಬ ಆಶ್ವಾಸನೆ ನೀಡಿ, ಲಸಿಕೆ ನೀಡಲಾಗುತ್ತಿದೆ” ಎಂದು ಅಧಿಖಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಮುಂದಿನ ಎರಡು ವಾರಗಳಲ್ಲಿ 100% ಲಸಿಕೆ ನೀಡುವ ಪ್ರತಿಜ್ಞೆ ಮಾಡಿದ್ದಾರೆ.

ಇದು ಕೇವಲ ರಾಜಸ್ಥಾನದ ಹಳ್ಳಿಗಳ ಸ್ಥಿತಿಯಲ್ಲ. ದೇಶದ ಕುಗ್ರಾಮಗಳಲ್ಲಿ ಈಗಲೂ ಲಸಿಕೆ ಕುರಿತು ಇಂತಹದ್ದೇ ಅಭಿಪ್ರಾಯಗಳಿವೆ. ಉಚಿತ ಲಸಿಕೆ ನೀಡುವುದು ಮಾತ್ರ ಸರ್ಕಾರದ ಕೆಲಸವಲ್ಲ. ಇದರ ಜೊತೆಗೆ ಲಸಿಕೆ 100% ಸುರಕ್ಷಿತ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಅವಶ್ಯಕ ಎಂದು ಸಾಮಾಜಿಕ ಹೋರಾಟಗಾರರು ತಿಳಿಸುತ್ತಾರೆ.


 ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...