Homeಕರೋನಾ ತಲ್ಲಣರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

ರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

- Advertisement -
- Advertisement -

ಕೊರೊನಾ ಲಸಿಕೆ ಬಗ್ಗೆ ಹಲವು ಅನುಮಾನಗಳನ್ನು ಹೊಂದಿರುವವರಲ್ಲಿ ಅರಿವು ಮೂಡಿಸಿ, ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ಬೂತ್ ಮಟ್ಟದ ಅಧಿಕಾರಿಗಳದ್ದಾಗಿದೆ. ಹೀಗೆ ಲಸಿಕೆ ಪಡೆಯದ ಬುಡಕಟ್ಟು ಜನರ ಮನವೊಲಿಸಲು ಉಚಿತ ಪಡಿತರ ನೀಡುವುದು, ಕೋವಿಡ್ ಲಸಿಕಾ ಕೇಂದ್ರಗಳಿಗೆ ಉಚಿತ ಪ್ರಯಾಣ ಒದಗಿಸುವಂತಹ ಕೆಲಸಗಳನ್ನು ರಾಜಸ್ಥಾನದ ಉದಯಪುರ ಹಳ್ಳಿಯಲ್ಲಿ ಮಾಡಲಾಗುತ್ತಿದೆ.

ಜೂನ್ 21 ರಿಂದ ದೇಶದಲ್ಲಿ ಎಲ್ಲಾ ವಯಸ್ಕಿಗೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಉದಯಪುರದ ಬುಡಕಟ್ಟು ಜನರನ್ನು ಮನವೊಲಿಸಲು ಬೂತ್ ಮಟ್ಟದ ಅಧಿಕಾರಿ ದಿನೇಶ್ ಚಂದ್ರ ಜೋಶಿ, ಉಚಿತ ಪಡಿತರ, ಉಚಿತ ಪ್ರಯಾಣ ವ್ಯವಸ್ಥೆ, ಬುಡಕಟ್ಟು ಜನರ ಪುರೋಹಿತರನ್ನು ಒಳಗೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಉದಯಪುರದ ಹಳ್ಳಿಯ ಬುಡಕಟ್ಟು ಜನರಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದ ಜನರು ಸಾವನ್ನಪ್ಪುತ್ತಿದ್ದಾರೆ ಎಂಬ ಬಗ್ಗೆ ವದಂತಿಗಳಿವೆ. ಇದಕ್ಕೆ ಉತ್ತರಿಸಿರುವ ಅಧಿಕಾರಿ ದಿನೇಶ್ ಚಂದ್ರ ಜೋಶಿ,“ಇದು ಕೇವಲ ವದಂತಿಯಾಗಿದೆ. ಜನರು ಸತ್ತದ್ದು ಲಸಿಕೆಗಳಿಂದಲ್ಲ, ಕೊರೊನಾ ಸೋಂಕಿನಿಂದ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

45 ವರ್ಷಕ್ಕಿಂತ ಮೇಲಪಟ್ಟವರಲ್ಲಿ ಲಸಿಕೆ ತೆಗೆದುಕೊಂಡ ಸರಾಸರಿ ಪ್ರಮಾಣ 78.3% ರಷ್ಟಿರುವ ರಾಜಸ್ಥಾನದಲ್ಲಿ, ಬುಡಕಟ್ಟು ಜಿಲ್ಲೆಗಳಾದ ಉದಯಪುರ (63.9%), ಡುಂಗರಪುರ (62.7%) ಮತ್ತು ಪ್ರತಾಪಗಢ (59.3%) ಜಿಲ್ಲೆಗಳು ಕಡಿಮೆ ಲಸಿಕೆ ಪ್ರಮಾಣ ದಾಖಲಿಸಿವೆ.

ಉದಯಪುರದ ಜೋದೊಲ್ ಬ್ಲಾಕ್‌ನಲ್ಲಿ ಕೇವಲ 34% ಲಸಿಕೆ ಪಡೆಯಲಾಗಿದೆ. ಹೀಗಾಗಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಗುಂಜನ್ ಸಿಂಗ್ ಸುಮಾರು 2,000 ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದ್ದಾರೆ. ಈ ಕಿಟ್‌ಗಳಲ್ಲಿ ಅಡುಗೆ ಎಣ್ಣೆ, ಅವಲಕ್ಕಿ, ಅಕ್ಕಿ, ದಾಲ್ ಮತ್ತು ಗೋಧಿ ಹಿಟ್ಟು ಸೇರಿವೆ. ಈ ಪಡಿತರ ಕಿಟ್‌ಗಳು, ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿರುವ 12 ರಿಂದ 13 ಬುಡಕಟ್ಟು ಹಾಸ್ಟೆಲ್‌ಗಳಿಂದ ತರಲಾಗಿದೆ. ಜೊತೆಗೆ ಹಲವು ಎನ್‌ಜಿಒಗಳು ಸಹಾಯಕ್ಕೆ ನಿಂತಿವೆ ಎಂದು ಗುಂಜನ್ ಸಿಂಗ್ ಹೇಳಿದ್ದಾರೆ.

“ನಾವು ಹಳ್ಳಿಗಳಿಗೆ ಭೇಟಿ ನೀಡಿದಾಗ, ಜನರು ವ್ಯಾಕ್ಸಿನೇಷನ್ ಪಡೆದ ಬಳಿಕ ಸಾವು ಸಂಭವಿಸುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಕೆಲವೊಮ್ಮೆ ನಮಗೆ ಹಳ್ಳಿ ಒಳಗೆ ಪ್ರವೇಶಿಸಲು ಅವಕಾಶ ಕೂಡ ನೀಡುವುದಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಏನಾದರೂ ಸಂಭವಿಸಿದಲ್ಲಿ, ನಾವು ಪರಿಹಾರ ನೀಡುತ್ತೇವೆ ಎಂಬ ಆಶ್ವಾಸನೆ ನೀಡಿ, ಲಸಿಕೆ ನೀಡಲಾಗುತ್ತಿದೆ” ಎಂದು ಅಧಿಖಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಮುಂದಿನ ಎರಡು ವಾರಗಳಲ್ಲಿ 100% ಲಸಿಕೆ ನೀಡುವ ಪ್ರತಿಜ್ಞೆ ಮಾಡಿದ್ದಾರೆ.

ಇದು ಕೇವಲ ರಾಜಸ್ಥಾನದ ಹಳ್ಳಿಗಳ ಸ್ಥಿತಿಯಲ್ಲ. ದೇಶದ ಕುಗ್ರಾಮಗಳಲ್ಲಿ ಈಗಲೂ ಲಸಿಕೆ ಕುರಿತು ಇಂತಹದ್ದೇ ಅಭಿಪ್ರಾಯಗಳಿವೆ. ಉಚಿತ ಲಸಿಕೆ ನೀಡುವುದು ಮಾತ್ರ ಸರ್ಕಾರದ ಕೆಲಸವಲ್ಲ. ಇದರ ಜೊತೆಗೆ ಲಸಿಕೆ 100% ಸುರಕ್ಷಿತ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಅವಶ್ಯಕ ಎಂದು ಸಾಮಾಜಿಕ ಹೋರಾಟಗಾರರು ತಿಳಿಸುತ್ತಾರೆ.


 ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...