Homeಕರೋನಾ ತಲ್ಲಣರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

ರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

- Advertisement -
- Advertisement -

ಕೊರೊನಾ ಲಸಿಕೆ ಬಗ್ಗೆ ಹಲವು ಅನುಮಾನಗಳನ್ನು ಹೊಂದಿರುವವರಲ್ಲಿ ಅರಿವು ಮೂಡಿಸಿ, ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ಬೂತ್ ಮಟ್ಟದ ಅಧಿಕಾರಿಗಳದ್ದಾಗಿದೆ. ಹೀಗೆ ಲಸಿಕೆ ಪಡೆಯದ ಬುಡಕಟ್ಟು ಜನರ ಮನವೊಲಿಸಲು ಉಚಿತ ಪಡಿತರ ನೀಡುವುದು, ಕೋವಿಡ್ ಲಸಿಕಾ ಕೇಂದ್ರಗಳಿಗೆ ಉಚಿತ ಪ್ರಯಾಣ ಒದಗಿಸುವಂತಹ ಕೆಲಸಗಳನ್ನು ರಾಜಸ್ಥಾನದ ಉದಯಪುರ ಹಳ್ಳಿಯಲ್ಲಿ ಮಾಡಲಾಗುತ್ತಿದೆ.

ಜೂನ್ 21 ರಿಂದ ದೇಶದಲ್ಲಿ ಎಲ್ಲಾ ವಯಸ್ಕಿಗೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಉದಯಪುರದ ಬುಡಕಟ್ಟು ಜನರನ್ನು ಮನವೊಲಿಸಲು ಬೂತ್ ಮಟ್ಟದ ಅಧಿಕಾರಿ ದಿನೇಶ್ ಚಂದ್ರ ಜೋಶಿ, ಉಚಿತ ಪಡಿತರ, ಉಚಿತ ಪ್ರಯಾಣ ವ್ಯವಸ್ಥೆ, ಬುಡಕಟ್ಟು ಜನರ ಪುರೋಹಿತರನ್ನು ಒಳಗೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಉದಯಪುರದ ಹಳ್ಳಿಯ ಬುಡಕಟ್ಟು ಜನರಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದ ಜನರು ಸಾವನ್ನಪ್ಪುತ್ತಿದ್ದಾರೆ ಎಂಬ ಬಗ್ಗೆ ವದಂತಿಗಳಿವೆ. ಇದಕ್ಕೆ ಉತ್ತರಿಸಿರುವ ಅಧಿಕಾರಿ ದಿನೇಶ್ ಚಂದ್ರ ಜೋಶಿ,“ಇದು ಕೇವಲ ವದಂತಿಯಾಗಿದೆ. ಜನರು ಸತ್ತದ್ದು ಲಸಿಕೆಗಳಿಂದಲ್ಲ, ಕೊರೊನಾ ಸೋಂಕಿನಿಂದ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

45 ವರ್ಷಕ್ಕಿಂತ ಮೇಲಪಟ್ಟವರಲ್ಲಿ ಲಸಿಕೆ ತೆಗೆದುಕೊಂಡ ಸರಾಸರಿ ಪ್ರಮಾಣ 78.3% ರಷ್ಟಿರುವ ರಾಜಸ್ಥಾನದಲ್ಲಿ, ಬುಡಕಟ್ಟು ಜಿಲ್ಲೆಗಳಾದ ಉದಯಪುರ (63.9%), ಡುಂಗರಪುರ (62.7%) ಮತ್ತು ಪ್ರತಾಪಗಢ (59.3%) ಜಿಲ್ಲೆಗಳು ಕಡಿಮೆ ಲಸಿಕೆ ಪ್ರಮಾಣ ದಾಖಲಿಸಿವೆ.

ಉದಯಪುರದ ಜೋದೊಲ್ ಬ್ಲಾಕ್‌ನಲ್ಲಿ ಕೇವಲ 34% ಲಸಿಕೆ ಪಡೆಯಲಾಗಿದೆ. ಹೀಗಾಗಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಗುಂಜನ್ ಸಿಂಗ್ ಸುಮಾರು 2,000 ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದ್ದಾರೆ. ಈ ಕಿಟ್‌ಗಳಲ್ಲಿ ಅಡುಗೆ ಎಣ್ಣೆ, ಅವಲಕ್ಕಿ, ಅಕ್ಕಿ, ದಾಲ್ ಮತ್ತು ಗೋಧಿ ಹಿಟ್ಟು ಸೇರಿವೆ. ಈ ಪಡಿತರ ಕಿಟ್‌ಗಳು, ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿರುವ 12 ರಿಂದ 13 ಬುಡಕಟ್ಟು ಹಾಸ್ಟೆಲ್‌ಗಳಿಂದ ತರಲಾಗಿದೆ. ಜೊತೆಗೆ ಹಲವು ಎನ್‌ಜಿಒಗಳು ಸಹಾಯಕ್ಕೆ ನಿಂತಿವೆ ಎಂದು ಗುಂಜನ್ ಸಿಂಗ್ ಹೇಳಿದ್ದಾರೆ.

“ನಾವು ಹಳ್ಳಿಗಳಿಗೆ ಭೇಟಿ ನೀಡಿದಾಗ, ಜನರು ವ್ಯಾಕ್ಸಿನೇಷನ್ ಪಡೆದ ಬಳಿಕ ಸಾವು ಸಂಭವಿಸುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಕೆಲವೊಮ್ಮೆ ನಮಗೆ ಹಳ್ಳಿ ಒಳಗೆ ಪ್ರವೇಶಿಸಲು ಅವಕಾಶ ಕೂಡ ನೀಡುವುದಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಏನಾದರೂ ಸಂಭವಿಸಿದಲ್ಲಿ, ನಾವು ಪರಿಹಾರ ನೀಡುತ್ತೇವೆ ಎಂಬ ಆಶ್ವಾಸನೆ ನೀಡಿ, ಲಸಿಕೆ ನೀಡಲಾಗುತ್ತಿದೆ” ಎಂದು ಅಧಿಖಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಮುಂದಿನ ಎರಡು ವಾರಗಳಲ್ಲಿ 100% ಲಸಿಕೆ ನೀಡುವ ಪ್ರತಿಜ್ಞೆ ಮಾಡಿದ್ದಾರೆ.

ಇದು ಕೇವಲ ರಾಜಸ್ಥಾನದ ಹಳ್ಳಿಗಳ ಸ್ಥಿತಿಯಲ್ಲ. ದೇಶದ ಕುಗ್ರಾಮಗಳಲ್ಲಿ ಈಗಲೂ ಲಸಿಕೆ ಕುರಿತು ಇಂತಹದ್ದೇ ಅಭಿಪ್ರಾಯಗಳಿವೆ. ಉಚಿತ ಲಸಿಕೆ ನೀಡುವುದು ಮಾತ್ರ ಸರ್ಕಾರದ ಕೆಲಸವಲ್ಲ. ಇದರ ಜೊತೆಗೆ ಲಸಿಕೆ 100% ಸುರಕ್ಷಿತ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಅವಶ್ಯಕ ಎಂದು ಸಾಮಾಜಿಕ ಹೋರಾಟಗಾರರು ತಿಳಿಸುತ್ತಾರೆ.


 ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...