Homeಮುಖಪುಟಪತ್ರಕರ್ತೆ ರಾಣಾ ಅಯ್ಯೂಬ್ ಅವರ ಬಂಧನಕ್ಕೆ ಬಾಂಬೆ ಹೈಕೋರ್ಟ್‌ನಿಂದ 4 ವಾರಗಳ ತಡೆ

ಪತ್ರಕರ್ತೆ ರಾಣಾ ಅಯ್ಯೂಬ್ ಅವರ ಬಂಧನಕ್ಕೆ ಬಾಂಬೆ ಹೈಕೋರ್ಟ್‌ನಿಂದ 4 ವಾರಗಳ ತಡೆ

- Advertisement -
- Advertisement -

ಗಾಜಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು 4 ವಾರಗಳ ಕಾಲ ಬಂಧಿಸದಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.

ಜೂನ್ ಮೊದಲ ವಾರದಲ್ಲಿ ಗಾಝಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವೃದ್ಧರೊಬ್ಬರನ್ನು ಯುವಕರು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ರಾಣಾ ಅಯ್ಯೂಬ್ ಅವರ ವಿರುದ್ಧ FIR ದಾಖಲಾಗಿತ್ತು. FIR ದಾಖಲಾದ ಬೆನ್ನಲ್ಲೇ ರಾಣಾ ಅಯ್ಯೂಬ್ ತಮ್ಮ ಬಂಧನಕ್ಕೆ ತಡೆಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು.

ಜಸ್ಟಿಸ್ ಪ್ರಕಾಶ್ ಡಿ. ನಾಯ್ಕ್‌ ಅವರನ್ನೊಳಗೊಂಡ ಬಾಂಬೆ ಹೈಕೋರ್ಟ್ ನ ಏಕ ಸದಸ್ಯ ಪೀಠ ರಾಣಾ ಅಯ್ಯೂಬ್ ಅವರ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿತು. ಅಯ್ಯೂಬ್ ಅವರ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೂಕ್ತ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟಿದೆ.

ರಾಣಾ ಅಯ್ಯೂಬ್, ದಿ ವೈರ್, ಮೊಹಮ್ಮದ್ ಜುಬೇರ್, ಸಬಾ ನಕ್ವಿ ಸೇರಿದಂತೆ ಹಲವರು ಘಟನೆಯ ಹಿನ್ನಲೆಯನ್ನು ಪರಿಶೀಲಿಸದೇ ವಿಡಿಯೋವನ್ನು ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಘಟನೆಗೆ ಧರ್ಮದ ಲೇಪನವನ್ನು ನೀಡಿದ್ದರು. ಇದು ಸಮಾಜದಲ್ಲಿನ ಕೋಮು ಸಾಮರಸ್ಯವನ್ನು ಹದಗೆಡಿಸಿದೆ. ಈ ಕಾರಣದಿಂದ ಇವರ ವಿರುದ್ಧ  IPC ಸೆಕ್ಷನ್ 153(ದಂಗೆಗೆ ಪ್ರಚೋದನೆ), 153A (ಸಮುದಾಯಗಳ ನಡುವೆ ಧಾರ್ಮಿಕ ದ್ವೇಷ ಹರಡುವ ಕೃತ್ಯ), ಸೆಕ್ಷನ್ 295A, ಸೆಕ್ಷನ್, ಸೆಕ್ಷನ್ 505 (ಅಪರಾಧಿಕ ಕೃತ್ಯಗಳಿಗೆ ಪ್ರಚೋದನೆ), ಸೆಕ್ಷನ್ 120B (ಅಪರಾಧಿಕ ಒಳಸಂಚು)  ಗಂಭೀರವಾದ ಅಪರಾಧಿಕ ಸೆಕ್ಷನ್‌ಗಳ ಅಡಿ FIR ದಾಖಲಿಸಿಕೊಳ್ಳಲಾಗಿತ್ತು ಎಂದು ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.

ಘಟನೆಯ ಹಿನ್ನಲೆ 

ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಗಾಜಿಯಾಬಾದ್ ಲೋನಿ ಪ್ರದೇಶದಲ್ಲಿ 72 ವರ್ಷದ  ಅಬ್ದುಲ್ ಸಮೀದ್ ಸಫಿ ಎಂಬುವವರನ್ನು ಯುವಕರ ಗುಂಪು ಥಳಿಸುತ್ತಿರುವ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಕೆಲವರು ಸಫಿ ಅವರಲ್ಲಿ ಜೈ ಶ್ರೀರಾಮ್ ಪಠಣವನ್ನು ಮಾಡುವಂತೆ ಒತ್ತಾಯಿಸುತ್ತಿದ್ದರು ಎಂದು ಆರೋಪಿಸಲಾಗಿತ್ತು. ಘಟನೆಗೆ ಸಂಬಂಧಿಸಿದ ವಿಡಿಯೋ ಒಂದು ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸಹ ಘಾಜಿಯಾಬಾದ್ ಘಟನೆಯನ್ನು ಖಂಡಿಸಿ ಹೇಳಿಕೆಗಳನ್ನು ನೀಡಿದ್ದರು.


ಇದನ್ನು ಓದಿ : ಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...