HomeUncategorizedಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

ಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

- Advertisement -
| ವಿಶ್ವಾರಾಧ್ಯ ಸತ್ಯಂಪೇಟೆ |
ಪ್ರತಿ ವರ್ಷ ಅಕ್ಷಯ ತೃತೀಯ ದಿನ ಬಂತೆಂದರೆ ಬಂಗಾರ ಮಾರಾಟ ಮಾಡುವವರಿಗೂ ಹಾಗೂ ತೆಗೆದುಕೊಳ್ಳುವವರಿಗೂ ಖುಷಿಯೋ ಖುಷಿ. ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯ ದಿನದಂದು ಯಾರು ಬಂಗಾರ ಖರೀದಿ ಮಾಡುತ್ತಾರೊ ಅವರ ಮನೆಯಲ್ಲಿ ಬಂಗಾರದ ಹೊಳೆಯೇ ಹರಿಯುತ್ತದೆ ಎಂಬುದೊಂದು ನಂಬಿಕೆ. ಈ ನಂಬಿಕೆಗೆ ಯಾವುದೆ ರೀತಿಯ ವೈಜ್ಞಾನಿಕ ಆಧಾರವಿಲ್ಲವೆಂಬುದು ಅಷ್ಟೇ ಸತ್ಯ. ಆದರೆ ಜನ ನಂಬುಗೆಯ ಜಾತ್ರೆಯಲ್ಲಿ ತಮ್ಮ ಅಸಲಿತನವನ್ನು ಕಳಕೊಂಡಿದ್ದಾರೆ. ಜೋತಿಷ್ಯಗಾರರಿಗೆ ತಮ್ಮ ತಲೆಯನ್ನು ಒತ್ತೆ ಇಟ್ಟ ಮೇಲೆ ಅವರ ಮಿದುಳು ಕ್ರಿಯಾಶೀಲವಾಗಿದೆ ಎಂದು ಊಹಿಸಲು ಸಾಧ್ಯವಿಲ್ಲದ ವಾತಾವರಣ ಇಂದು ಸೃಷ್ಟಿಯಾಗಿದೆ. ಇದು ನಮ್ಮ ಭಾರತಿಯರೆಲ್ಲರ ದುರಂತವಾಗಿದೆ.
ಮತ್ತೊಂದು ಆಶ್ಚರ್ಯ ಹಾಗೂ ವ್ಯಂಗ್ಯದ ಸಮಾಚಾರವೆಂದರೆ ಇದೆ ಅಕ್ಷಯ ತೃತೀಯ ನಕ್ಷತ್ರದ ದಿನ ಯುಗ ಯುಗಳ ಪುರುಷ, ವೈಚಾರಿಕ ಚಿಂತಕ, ಚಳುವಳಿಗಳ ಜನಕ ವಿಶ್ವಗುರು ಬಸವಣ್ಣನವರು ಹುಟ್ಟಿದ ದಿನ. ಅಕ್ಷಯ ತೃತೀಯ ದಿನದ ನಂಬುಗೆ ಒಂದು ಬಗೆಯಾದರೆ ಬಸವಣ್ಣನವರ ವಿಚಾರ ಧಾರೆ ಮತ್ತೊಂದು ಮಗ್ಗುಲು. ಇವು ಒಂದಕ್ಕೊಂದು ಸೇರಲು ಸಾಧ್ಯವೇ ಇಲ್ಲ. ಒಂದು ಉತ್ತರವಾದರೆ ಮತ್ತೊಂದು ದಕ್ಷಿಣ. ಆದರೆ ನಾವು ಇವೆರಡರಲ್ಲಿ ಯಾವುದನ್ನು ಆಯ್ದುಕೊಂಡರೆ ನಮ್ಮ ಬದುಕು ಪಾವನವಾಗುತ್ತದೆ ಎಂಬ ಸತ್ಯವನ್ನು ಮನಗಾಣಲೆಬೇಕಾಗಿದೆ. ಇಲ್ಲದೆ ಹೋದರೆ ನಾವು ಬದುಕಿರುವವರೆಗೂ ಭ್ರಮೆಗಳ ನಡುವೆಯೆ ಬದುಕು ವಾಸ್ತವವನ್ನು ಅರ್ಥಮಾಡಿಕೊಳ್ಳದೆ ಸತ್ತು ಹೋಗುವ ಅಪಾಯ ಇದೆ.
ಹೊನ್ನಿನೊಳಗೊಂದೊರೆಯ , ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ ನಿಮ್ಮ ಪ್ರಮಥರಾಣಿ
ನಿಮ್ಮ ಶರಣರಿಗಲ್ಲದೆ ಮತ್ತೊಂದನರಿಯೆ ಕೂಡಲಸಂಗಮದೇವಾ
ಎಂಬುದು ಬಸವಣ್ಣನವರ ಉಸಿರು. ನಾಳೆ ಬೇಕೆಂದು ತೆಗೆದು ಇರಿಸುವುದೆ ಬಹು ದೊಡ್ಡ ಅಪರಾಧ. ಅಲ್ಲದೆ ಹೊನ್ನು ಮಾಯೆ ಎಂಬರು. ಹೊನ್ನು ಮಾಯೆ ಅಲ್ಲವೆ ಅಲ್ಲ, ಮನದ ಮುಂದಣ ಆಸೆಯೆ ಮಾಯೆ ಎಂಬುದು ಶರಣರ ಇಂಗಿತವಾಗಿದೆ. ನಾಳೆ ಬೇಕೆಂದು ತೆಗೆದು ಇಡುವುದು ಅಪರಾಧ. ಒಂದು ಸಲ ಬಸವಣ್ಣನವರ ಮಹಾಮನೆಗೆ ಕಳ್ಳನೊಬ್ಬ ಬರುತ್ತಾನೆ. ಆ ಕಳ್ಳ ಸಹಜವಾಗಿ ನೀಲಾಂಬಿಕೆಯ ಕಿವಿಯಲ್ಲಿರುವ ಓಲೆಗೆ ಕೈಹಾಕಿ ಕಳ್ಳತನ ಮಾಡಬೇಕೆಂದು ಪ್ರಯತ್ನ ಮಾಡುತ್ತಿರುತ್ತಾನೆ. ಆಗ ನೀಲಾಂಬಿಕೆ ಚಟಾರನೆ ಕಿರುಚಿಕೊಂಡು ಕಳ್ಳ ಕಳ್ಳ ಎಂದು ಧಾವಂತಗೊಳ್ಳುತ್ತಾರೆ. ಆಶ್ಚರ್ಯವೆಂದರೆ ಕಲ್ಯಾಣ ನಾಡಿನ ಅಂದಿನ ಪ್ರಧಾನಿಯಾಗಿದ್ದ ಬಸವಣ್ಣನವರು ತನ್ನ ಮಡದಿ ನೀಲಾಂಬಿಕೆಯನ್ನು ಗದರಿಸುವ ಧ್ವನಿಯಲ್ಲಿ  :
ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ
ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ
ಅಯ್ಯ ನಮ್ಮಯ್ಯನ ಕೈನೊಂದಿತು,
ತೆಗೆದುಕೊಡಾ ಎಲೆ ಬೆಂಡೊಲೆ ಕಿತ್ತಿ
ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ
ಕೂಡಲಸಂಗಮನಲ್ಲದೆ ಆರೂ ಇಲ್ಲ
ಎಂಬ ವಚನದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ ನಮಗೆ ಬೇಕಾಗಿರುವುದಕ್ಕಿಂತಲೂ ಹೆಚ್ಚು ಹೆಚ್ಚು ಸಂಗ್ರಹ ಮಾಡಿಕೊಂಡಿರುವುದೆ ದೊಡ್ಡ ಅಪರಾಧ. ಕಳ್ಳನಾದರೂ ತನ್ನ ಹಸಿವನ್ನು ಹಿಂಗಿಸಿಕೊಳ್ಳಲು ಕಳ್ಳತನಕ್ಕೆ ಇಳಿದಿರಬಹುದು. ಆದರೆ ನಮ್ಮ ಹೊಟ್ಟೆ ತುಂಬಿಸಿಕೊಂಡೂ ಹೆಚ್ಚು ಹೆಚ್ಚು ಬೇಕೆಂಬ ಬಯಕೆ ಇಟ್ಟುಕೊಂಡವರೆ ಬಲುಗಳ್ಳರು. ಹೀಗಾಗಿ ಆತ ಹಸಿವೆಗಾಗಿ ನಮ್ಮ ಮನೆಗೆ ಬಂದಾತ. ನಾವು ಬಲುಗಳ್ಳರು ಎಂಬುದು ಬಸವಣ್ಣನವರ ಆಶಯ.
ಹೊನ್ನಿಂಗೆ ಬಂದಿಲ್ಲದ, ಹೆಣ್ಣಿಂಗೆ ಬಂದಿಲ್ಲದ , ಆಶನಕ್ಕೆ- ವಸನಕ್ಕೆ ಬಂದಿಲ್ಲದ ಭಕ್ತಿಯ ಪಥವ ತೋರಲು ಬಂದ ಬಸವಣ್ಣನವರ ಹುಟ್ಟು ಹಬ್ಬದ ದಿನವೆ ಅಕ್ಷಯ ತೃತಿ ಎಂಬ ದಿನ ಬಂದಿರುವುದು ಕಾಕತಾಳೀಯ. ಕನಿಷ್ಠ ಪಕ್ಷ ಬಸವಾದಿ ಶರಣರ ಆಶಯಗಳನ್ನು ಹೇಳುವ , ಅನುಸರಿಸುವ ಜನಗಳಾದರೂ ಅಕ್ಷಯ ತೃತೀಯ ಎಂಬ ವಿಶೇಷ ದಿನದಂದು  ಪುರೋಹಿತರು ನಂಬಿಸಿದ ಮೌಢ್ಯದ ಎದುರು ಈಜಬೇಕಿದೆ. ನಮ್ಮ ರಾಜ್ಯದಲ್ಲಿಯೆ ನಿನ್ನೆಯ ದಿನ 3900 ಕೋಟಿ ಮೌಲ್ಯದ ಚಿನ್ಹ ಮಾರಾಟವಾಗಿರುವುದು ನೋಡಿದರೆ ನಾವು ಎತ್ತ ಹೊರಟಿದ್ದೇವೆ ? ಎಂಬುದು ಮನದಟ್ಟಾಗುತ್ತದೆ. ಹೊನ್ನಿನೊಳಗೆ ಒಂದೊರೆಯ ಎಂಬ ಬಸವಣ್ಣನವರ ಮಾತು ಒತ್ತಟ್ಟಿಗಿರಲಿ, ಈ ದಿನ ಖರೀದಿಸಿದ ಬಂಗಾರ ಮುಂದಿನ ವರ್ಷದಷ್ಟೊತ್ತಿಗೆ ದುಪ್ಪಟ್ಟು ಆಗುತ್ತದೆ ಎಂಬುದೆ ಮೂರ್ಖತನವಲ್ಲವೆ ? ವ್ಯಾಪಾರಿಗಳು ಹಾಗೂ ಜೋತಿಷ್ಯಿಗಳು ಕೂಡಿ ಮಾಡಿದ ಆಟಕ್ಕೆ ಭಾರತೀಯ ಮನಸ್ಸುಗಳು ಪಿಗ್ಗಿ ಬಿದ್ದಿರುವುದು ಕಾಣುತ್ತೇವೆ. ಪಂಚಾಂಗವೆಂಬ ಗಣಿತವಲ್ಲದ, ವಿಜ್ಞಾನವಲ್ಲದ ಅರೆ ಬರೆ ಅಜ್ಞಾನದ ಹಿಂದೆ ಹೋಗುತ್ತಿದ್ದೇವೆ. ಪ್ರಜ್ಞಾವಂತ ಬಸವಣ್ಣನವರ ನಾಡಿನ ನಾವೆಲ್ಲ ವ್ಯಾಪಾರಿಗಳ ಹಾಗೂ ಜೋತಿಷ್ಯಿಗಳ ಕೌಲು ಕೂಟಕ್ಕೆ ಬಲಿಯಾಗಿರುವುದು ಎಷ್ಟು ಸರಿ ? ಎಂದು ನಮ್ಮನ್ನೆ ನಾವು ಕೇಳಿಕೊಳ್ಳಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...