Homeಕರೋನಾ ತಲ್ಲಣಕೊರೊನಾ ಜೊತೆಗೆ ದೇಶದಲ್ಲಿ ಆತಂಕಕ್ಕೆ ಕಾರಣವಾದ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು

ಕೊರೊನಾ ಜೊತೆಗೆ ದೇಶದಲ್ಲಿ ಆತಂಕಕ್ಕೆ ಕಾರಣವಾದ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು

- Advertisement -
- Advertisement -

ಇಡೀ ದೇಶವೇ ಕೊರೊನಾ 2ನೇ ಅಲೆ ವಿರುದ್ಧ ಹೋರಾಡುತ್ತಿರುವಾಗಲೇ, ಡೆಲ್ಟಾ ಪ್ಲಸ್‌ ರೂಪಾಂತರಿ ಪ್ರಕರಣಗಳು ಆತಂಕಕ್ಕೆ ಕಾರಣವಾಗಿವೆ. ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿವೆ.

ಕೋವಿಡ್ ಸಾಂಕ್ರಾಮಿಕ ಡೆಲ್ಟಾ ರೂಪಾಂತರವು ‘ಡೆಲ್ಟಾ ಪ್ಲಸ್ ಅಥವಾ ಎವೈ.1(AY.1) ರೂಪಾಂತರವಾಗಿ ಪರಿವರ್ತನೆಗೊಂಡಿದೆ. ಇದು ಬಹಳ ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಹೊಸ ರೂಪಾಂತರದಿಂದಾಗಿ ಕೊರೊನಾ ರೋಗದ ತೀವ್ರತೆಯ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಈವರೆಗೆ 21 ಡೆಲ್ಟಾ ಪ್ಲಸ್ ರೂಪಾಂತರಿ ಕೇಸ್​ಗಳು ಕಾಣಿಸಿಕೊಂಡಿವೆ ಎಂದು ರಾಜ್ಯದ ಆರೋಗ್ಯ ಸಚಿವ ರಾಜೇಶ್​ ಟೋಪೆ ಹೇಳಿದ್ದಾರೆ. ಇವುಗಳಲ್ಲಿ 9 ಪ್ರಕರಣಗಳು ರತ್ನಗಿರಿಯಲ್ಲಿ, 7 ಪ್ರಕರಣಗಳು ಜಲ್ಗೋನ್‌ನಲ್ಲಿ, 2 ಪ್ರಕರಣಗಳು ಮುಂಬೈನಲ್ಲಿ ಮತ್ತು ಸಿಂದುದರ್ಗ್​​, ಥಾಣೆ ಮತ್ತು ಪಾಲ್ಗಾರ್​ ಜಿಲ್ಲೆಗಳಲ್ಲಿ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ ಎಂದು ಟೋಪೆ  ತಿಳಿಸಿದ್ದಾರೆ.

21 ಡೆಲ್ಟಾ ಪ್ಲಸ್ ರೂಪಾಂತರಿ ಕೇಸ್​ಗಳು ಪತ್ತೆಯಾಗಿರುವ ಹಿನ್ನೆಲ್ಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ 100 ಸ್ಯಾಂಪಲ್‌ಗಳನ್ನು ಪಡೆದು ಪರೀಕ್ಷೆಗೆ ಕಳುಹಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಕಳೆದ ಮೇ 15 ರಿಂದ 7,500 ಸ್ಯಾಂಪಲ್​ಗಳನ್ನು ಸಂಗ್ರಹಿಸಲಾಗಿದ್ದು, ಅವುಗಳಲ್ಲಿ 21 ಕೇಸ್​​ಗಳಲ್ಲಿ ಡೆಲ್ಟಾ ಪ್ಲಸ್​ ವೈರಸ್​​ ಕಂಡು ಬಂದಿದೆ. ಸೋಂಕಿತರ ವ್ಯಾಕ್ಸಿನೇಷನ್​ ಸ್ಥಿತಿ ಮತ್ತು ಅವರ ಟ್ರಾವೆಲ್​ ಹಿಸ್ಟರಿಯನ್ನು ಕಲೆ ಹಾಕಲಾಗಿದೆ ಎಂದು ರಾಜೇಶ್​ ಟೋಪೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಕೇರಳದ ಪಲಕ್ಕಾಡ್​​​​ ಮತ್ತು ಪತನಮಿತ್ತ ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇರಳ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಈ ಜಿಲ್ಲೆಗಳಲ್ಲಿ ಸೋಂಕನ್ನು ನಿಯಂತ್ರಿಸಲು ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತನಮಿತ್ತ ಜಿಲ್ಲೆಯ ಕಡಪರಾ ಪಂಚಾಯತ್ ಮೂಲದ 4 ವರ್ಷದ ಬಾಲಕನಲ್ಲಿ, ಪಲಕ್ಕಾಡ್​ನಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಮಧ್ಯಪ್ರದೇಶದ ಭೂಪಾಲ್​ನ 65 ವರ್ಷದ ಮಹಿಳೆಯಲ್ಲಿ ಮೊದಲ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್ ಪ್ರಕರಣ ಪತ್ತೆಯಾಗಿತ್ತು. ಕೊರೊನಾ ಸೋಂಕಿನಿಂದ ಗುಣಮುಖರಾಗಿ ಹೋಂ ಐಸೋಲೇಷನ್‌ನಲ್ಲಿದ್ದ, ಎರಡು ಡೋಸ್ ವ್ಯಾಕ್ಸಿನ್​ ಪಡೆದಿದ್ದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಜೂನ್​ 17ರಂದು ಮಹಿಳೆಗೆ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್​ ಇರುವುದು ದೃಢಪಟ್ಟಿತ್ತು. ಆದರೆ ಆ ಸೋಂಕಿತೆ ಮಾಹಿತಿ ನೀಡಲು ನಿರಾಕರಿಸಿದರು ಎಂದು ಮಧ್ಯಪ್ರದೇಶದ ವೈದ್ಯಕೀಯ ಶೈಕ್ಷಣಿಕ ಸಚಿವ ವಿಶ್ವಾಸ್ ಸಾರಂಗ್​​ ತಿಳಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...