Homeಚಳವಳಿಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

- Advertisement -
- Advertisement -

ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ನಮ್ಮ ಪ್ರಮುಖ ಅಜೆಂಡಾ ‘ಪೂರ್ಣ ರಾಜ್ಯತ್ವ’ವನ್ನು ಮರುಸ್ಥಾಪಿಸುವುದೆ ಆಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಅವರು ಸೋಮವಾರ ಹೇಳಿದ್ದಾರೆ. 2019 ರ ಆಗಸ್ಟ್‌ ತಿಂಗಳಲ್ಲಿ ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದು ಮಾಡಿ ರಾಜ್ಯವನ್ನು ವಿಭಜನೆ ಮಾಡಿದ ನಂತರ ಒಕ್ಕೂಟ ಸರ್ಕಾರವು ನಡೆಸುತ್ತಿರುವ ಮೊದಲ ಸಭೆಯಾಗಿದೆ ಇದು.

ರಾಜ್ಯತ್ವವನ್ನು ಮರುಪಡೆಯುವುದೆ ಪ್ರಮುಖ ಗುರಿ ಎಂದು ಗುಲಾಮ್ ನಬಿ ಹೇಳಿದ್ದಾರಾದರೂ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಸಭೆಯಲ್ಲಿ ಒತ್ತಾಯಿಸುತ್ತಾರೆಯೆ ಎಂದು ಸ್ಪಷ್ಟಪಡಿಸಿಲ್ಲ.

“ಸಭೆಯಲ್ಲಿ ಎಲ್ಲಕ್ಕಿಂತ ಮುಖ್ಯ ಬೇಡಿಕೆ ರಾಜ್ಯತ್ವದ್ದಾಗಿದೆ. ಸಭೆಯಲ್ಲಿ ಅದು ನಮ್ಮ ಪ್ರಮುಖ ಅಜೆಂಡಾವಾಗಿದೆ. ಈ ಬಗ್ಗೆ ಸದನದಲ್ಲೂ ಭರವಸೆ ನೀಡಲಾಯಿತು. ನಮ್ಮ ಬೇಡಿಕೆ ಪೂರ್ಣ ಪ್ರಮಾಣದ ರಾಜ್ಯತ್ವವೆ ಹೊರತು ಲೆಫ್ಟಿನೆಂಟ್‌ ಗವರ್ನರ್‌ ರಾಜ್ಯತ್ವವಲ್ಲ” ಎಂದು ಗುಲಾಮ್‌ ನಬಿ ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

370 ನೇ ವಿಧಿ ಮರು ಸ್ಥಾಪನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾನು ಜಮ್ಮು ಕಾಶ್ಮೀರದ ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚಿಸುತ್ತಿದ್ದೇನೆ. ಅದರ ನಂತರ ನಮ್ಮ ಪಕ್ಷದ ಅಧ್ಯಕ್ಷೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ನೇರವಾಗಿ ಅಥವಾ ಪರೋಕ್ಷವಾಗಿ ಇದರಲ್ಲಿ ಭಾಗಿಯಾಗಿದ್ದ ಸಹೋದ್ಯೋಗಿಗಳಿಂದ ಮಾರ್ಗದರ್ಶನ ಪಡೆಯುತ್ತೇನೆ. ಆದ್ದರಿಂದ ಈ ಬಗ್ಗೆ ತೀರಾ ಮುಂಚೆಯೆ ಹೇಳುವುದು ಸರಿಯಲ್ಲ. ಆದರೆ ಪೂರ್ಣ ರಾಜ್ಯತ್ವವೆ ಸಭೆಯ ಪ್ರಮುಖ ಆಜೆಂಡಾವಾಗಿರಲಿದೆ. ಸಮಾಲೋಚನೆಗಳು ಮತ್ತು ಚರ್ಚೆಗಳ ನಂತರ ನಾವು ನಮ್ಮ ನಿಲುವನ್ನು, ನೀತಿಯನ್ನು ರೂಪಿಸುತ್ತೇವೆ” ಎಂದು ಗುಲಾಮ್ ನಬಿ ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಬಗ್ಗೆ ಪಕ್ಷದ ನಿಲುವಿಗೆ ಅಂತಿಮ ಆಕಾರ ನೀಡಲು ಕಾಂಗ್ರೆಸ್ಸಿನ ‘ಜಮ್ಮು ಕಾಶ್ಮೀರ ನೀತಿ ಯೋಜನಾ ಗುಂಪು’ ಮಂಗಳವಾರ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ. ಈ ಗುಂಪಿನಲ್ಲಿ ಗುಲಾಮ್ ನಬಿ ಅವರಲ್ಲದೆ, ಮನಮೋಹನ್ ಸಿಂಗ್, ಕರಣ್ ಸಿಂಗ್, ಪಿ.ಚಿದಂಬರಂ, ಎಐಸಿಸಿ ಉಸ್ತುವಾರಿ ರಜನಿ ಪಾಟೀಲ್, ತಾರಿಕ್ ಹಮೀದ್ ಕರ್ರಾ ಮತ್ತು ಗುಲಾಮ್ ಅಹ್ಮದ್ ಮಿರ್ ಕೂಡಾ ಇದ್ದಾರೆ.

ಸಭೆಯನ್ನು ಭೌತಿಕವಾಗಿ ನಡೆಸುವುದಕ್ಕಾಗಿ ಒಕ್ಕೂಟ ಸರ್ಕಾರವನ್ನು ಅವರು ಶ್ಲಾಘಿಸಿದ್ದಾರೆ. ಈ ಸಭೆಯಲ್ಲಿ ನಾವು ಮುಕ್ತವಾಗಿ ಚರ್ಚಿಸಲು ಅವಕಾಶ ಸಿಗುತ್ತದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿಯ ಸಭೆಗೆ ಕಾಂಗ್ರೆಸ್‌ನಿಂದ ಗುಲಾಮ್ ನಬಿ ಅವರ ಹೊರತಾಗಿ ಪಕ್ಷದ ಮತ್ತೊಬ್ಬ ಮುಖಂಡ ಗುಲಾಮ್ ಅಹ್ಮದ್ ಮಿರ್ ಅವರನ್ನೂ ಆಹ್ವಾನಿಸಲಾಗಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ 370 ನೇ ವಿಧಿಯನ್ನು ರದ್ದುಪಡಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಒಕ್ಕೂಟ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದರು.

ಈ ನಡುವೆ ಜಮ್ಮು ಕಾಶ್ಮೀರದ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕರ್ ಒಕ್ಕೂಟವು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಗುರುವಾರ ನಡೆಯುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದೆ.

“ಮೆಹಬೂಬಾ ಮುಫ್ತಿ, ಯೂಸುಫ್‌ ತರಿಗಾಮಿ ಮತ್ತು ನಾನು ಪ್ರಧಾನಿ ಕರೆದ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ನಮ್ಮ ಅಜೆಂಡಾವನ್ನು ಪ್ರಧಾನಿ ಮತ್ತು ಗೃಹ ಸಚಿವರ ಮುಂದೆ ಇಡಬೇಕೆಂದು ನಾವು ಭಾವಿಸುತ್ತೇವೆ” ಎಂದು ಡಾ. ಅಬ್ದುಲ್ಲಾ ಇಂದಿನ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಪ್ರಕರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ 2 ಕೋಟಿ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...