Homeಕರೋನಾ ತಲ್ಲಣಪ್ರಧಾನಿಗಳ ಕಣ್ಣೀರು ದೇಶದ ಜನರ ಕಣ್ಣೀರನ್ನು ಒರೆಸುವುದಿಲ್ಲ: ರಾಹುಲ್ ಗಾಂಧಿ

ಪ್ರಧಾನಿಗಳ ಕಣ್ಣೀರು ದೇಶದ ಜನರ ಕಣ್ಣೀರನ್ನು ಒರೆಸುವುದಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೇಯ ಅಲೆಯ ಸಂದರ್ಭದಲ್ಲಿ ಸಂಭವಿಸಿದ 90% ಸಾವುಗಳನ್ನು ಸರ್ಕಾರ ತಡೆಯಬಹುದಿತ್ತು. ಪ್ರಧಾನಿಯವರ ಕಣ್ಣೀರಿನಿಂದ ದೇಶದ ಜನರ ಕಣ್ಣೀರನ್ನು ಒರೆಸಲು ಸಾಧ್ಯವಿಲ್ಲ. ಅವರ ಕಣ್ಣೀರಿನಿಂದ ಸಾವುಗಳನ್ನು ತಡೆಗಟ್ಟಲಾಗಲಿಲ್ಲ. ಆದರೆ ಸಕಾಲಕ್ಕೆ ಆಕ್ಸಿಜನ್ ಸಿಕ್ಕಿದರೆ ಸಾವುಗಳನ್ನು ತಡೆಗಟ್ಟಬಹುದಿತ್ತು. ಪ್ರಧಾನಿಗಳು ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದ ಭರಾಟೆಯಲ್ಲಿ ಆಕ್ಸಿಜನ್ ಕೊರತೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಇದರ ಪರಿಣಾಮ ದೇಶದಲ್ಲಿ ಸಾವಿರಾರು ಜನರು ವೈದ್ಯಕೀಯ ಆಮ್ಮಜನಕದ ಕೊರತೆಯಿಂದ ಪರದಾಡುವಂತಾಯಿತು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ “ಸರ್ಕಾರದ ಕೊರೊನಾ ಸಾಂಕ್ರಾಮಿಕದ ನಿರ್ವಹಣೆಯ ಕುರಿತು ಶ್ವೇತಪತ್ರವನ್ನು ಹೊರಡಿಸುತ್ತಿದ್ದೇನೆ. ಕೊರೋನಾ ಮೂರನೇ ಅಲೆಯು ಶೀಘ್ರದಲ್ಲಿಯೇ ಭಾರತದಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊರೊನಾ 3ನೇ ಅಲೆ ವಿರುದ್ಧ ಹೋರಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಸಹಾಯವಾಗಲಿ ಎಂದು ಈ ಶ್ವೇತಪತ್ರ ಹೊರಡಿಸಿದ್ದೇನೆ ಎಂದರು.

ಕೆಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯಿಂದ 4 ಲಕ್ಷ ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸುತ್ತಿದೆ. ಆದರೆ ಸರ್ಕಾರದ ಬಳಿ ಕೊರೋನಾದಿಂದ ಮೃತಪಟ್ಟ ಕುಟುಂಬಗಳ ವ್ಯಕ್ತಿಗಳಿಗೆ ಪರಿಹಾರ ನೀಡಲು ಹಣವಿಲ್ಲ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕದಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡು ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಅಂತಹ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ರಾಹುಲ್ ಗಾಂಧಿ ಕೆಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೋವಿಡ್ ಕಾರಣದಿಂದ ಲಕ್ಷಾಂತರ ಜನ ಕಿರು ಉದ್ಯಮಿಗಳು, ಚಿಲ್ಲರೆ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಹಣ್ಣು ತರಕಾರಿ ಮಾರುವವರ ಬದುಕು ಬೀದಿಗೆ ಬಿದ್ದಿದೆ. ಕೆಂದ್ರ ಸರ್ಕಾರ ಇವರೆಲ್ಲರಿಗೆ ನೇರವಾಗಿ ನಗದು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಾವು ಹೊರಡಿಸಿರುವ ಶ್ವೇತಪತ್ರ ಕೊರೋನಾ ಸಾಂಕ್ರಾಮಿಕದ 3ನೇ ಅಲೆಯನ್ನು ಎದುರಿಸಲು ಸರ್ಕಾರ ಮಾಡಿಕೊಳ್ಳಬೇಕಾದ ಸಿದ್ಧತೆಯ ನೀಲನಕ್ಷೆಯಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ಧೇಶವಿಲ್ಲ. ತಜ್ಞರೊಂದಿಗಿನ ಸಮಾಲೋಚನೆಯ ನಂತರ ಈ ಶ್ವೇತಪತ್ರವನ್ನು ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕವನ್ನು ಎದುರಿಸಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳಿಂದಲೇ ಇದು ಸಾಬೀತಾಗಿದೆ. ಎರಡನೇ ಅಲೆಯ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳು ಮತ್ತೆ ಮರುಕಳಿಸಬಾರದೆಂಬ ಕಾರಣಕ್ಕೆ ಶ್ವೇತಪತ್ರ ಹೊರಡಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.


ಇದನ್ನೂ ಓದಿ : ಪಂಜಾಬ್ ಕಾಂಗ್ರೆಸ್‌ನಲ್ಲಿ ಬಗೆಹರಿಯದ ಭಿನ್ನಮತ – ಹೈಕಮಾಂಡ್ ಅಂಗಳಕ್ಕೆ ಸಮಸ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...