Homeಮುಖಪುಟಒಂದು whistle blowers ಪಡೆ ಹುಟ್ಟು ಹಾಕೋಣ

ಒಂದು whistle blowers ಪಡೆ ಹುಟ್ಟು ಹಾಕೋಣ

- Advertisement -
- Advertisement -
  • ದೇವನೂರ ಮಹಾದೇವ |

ಈಗ ಚುನಾವಣೆ ನಮ್ಮ ಮುಂದಿದೆ. ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ದೊಡ್ಡದೊಡ್ಡ ನಾಯಕರು ಆಡುವ ಮಾತುಗಳನ್ನು ಕೇಳಿದರೆ ಚುನಾವಣೆ ಅಂದರೆ ಅದು ನಾಡು ಕಟ್ಟುವ ಕೆಲಸ ಅಂದುಕೊಂಡಿಲ್ಲ, ಬದಲಾಗಿ ರಣರಂಗ ಅಂದ್ಕೊಂಡಿದ್ದಾರೆ. ಅದಕ್ಕಾಗಿ ಠೇಂಕಾರದ ಮಾತಾಡ್ತಾರೆ. ಜೊತೆಗೆ – ಜಾದೂ ಭಾಷೇಲಿ ಮಾತಾಡ್ತಾರೆ, ಹರಾಜು ಹಾಕುವ ಭಾಷೇಲಿ ಮಾತಾಡ್ತಾರೆ. ಒಟ್ಟಿನಲ್ಲಿ ಇವರೆಲ್ಲ ಮರಳಲ್ಲಿ ಮನೆ ಕಟ್ಟುತ್ತಿರುವವರಂತೆ ಕಾಣಿಸ್ತಾರೆ.

ಒಂದೇ ಉದಾಹರಣೆ ಸಾಕು, ಬಿಜೆಪಿ ಪದೇ ಪದೇ ಹೇಳ್ತಾ ಇದೆ- “ನಾವು ಕಾಂಗ್ರೆಸ್‍ಮುಕ್ತ ಕರ್ನಾಟಕ ಮಾಡ್ತೇವೆ” ಅಂತ. ಇದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಕೂಡ ಹೇಳ್ತಾ ಇದೆ- ‘ನಾವು ಬಿಜೆಪಿಮುಕ್ತ ಕರ್ನಾಟಕ ಮಾಡ್ತೇವೆ’ ಅಂತ. ಇವರು ಏನನ್ನು ಮುಕ್ತ ಮಾಡ್ತಾ ಇದ್ದಾರೆ? ತಾನು ಕೂತ ಮರದ ಕೊಂಬೆಯನ್ನೇ ಕತ್ತರಿಸುವವನ ಮೂರ್ಖತನವಲ್ಲವೆ ಇದು? ಜನತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ವಿಧ್ವಂಸಕ ಕೃತ್ಯವಲ್ಲವೆ ಇದು? – ಇದು ಹೊಣೆಗೇಡಿ ರಾಜಕಾರಣ.

ನಾಡಿಗೆ ತುರ್ತಾಗಿ ಬೇಕಾಗಿರುವುದು ಬರಮುಕ್ತ ಕರ್ನಾಟಕ, ನಿರುದ್ಯೋಗ ಮುಕ್ತ ಕರ್ನಾಟಕ. ನಾವು ಈ ಹೊಣೆಗೇಡಿ ರಾಜಕಾರಣಕ್ಕೆ ಇದನ್ನು ನೆನಪಿಸಬೇಕಾಗಿದೆ.

ಈ ಹೊಣೆಗೇಡಿ ರಾಜಕಾರಣದ ಜೊತೆಗೆ ಅಪ್ರಬುದ್ಧ ರಾಜಕಾರಣವೂ ವಿಜೃಂಭಿಸುತ್ತಿದೆ. ಉದಾಹರಣೆಗೆ ‘ವಿಶ್ವೇಶ್ವರಯ್ಯ ಹೆಸರು ಉಚ್ಚಾರಣೆ ಮಾಡೋ ಕೆಲವರಿಗೆ ಬರೋಲ್ಲ’ ಅಂತ ಇವರು ಹೇಳ್ತಾರೆ, ‘ಇವರಿಗೆ ಬಳ್ಳಾರಿ ಹೆಸರು ಉಚ್ಚಾರಣೆ ಮಾಡೋಕೆ ಬರೋಲ್ಲ’ ಅಂತ ಅವರು ಹೇಳ್ತಾರೆ! ಇಂಥವೇ ಮಾತುಗಳು. ನನಗೂ ಉಚ್ಚಾರಣೆ ಬರಲ್ಲಪ್ಪ, ಏನೀಗ? ಇದೇನು ಘನಂದಾರಿ ಚರ್ಚೆಯೆ? ಇಂಥವರಿಗೆ ಏನೆಂದು ಹೇಳಬೇಕು? ‘ನಿಮಗೆಲ್ಲ ವಯಸ್ಸಾಗಿದೆ, ನಿಜ. ಆದರೆ ನೀವು ಪ್ರೈಮರಿ ಶಾಲೆಯಲ್ಲಿ ಇರಬೇಕಾದವರು’ ಎಂದು ಹೇಳಬೇಕಾಗಿದೆ. ಮಾಧ್ಯಮಗಳು ಇಂಥ ಕ್ಷುಲ್ಲಕವನ್ನೆಲ್ಲಾ ಚರ್ಚಿಸಬಾರದು, ದಯವಿಟ್ಟು.

ಮೊನ್ನೆ ಮೊನ್ನೆ ತಾನೇ ಮೈಸೂರಿನಲ್ಲಿ – ‘ಉದ್ಯೋಗಕ್ಕಾಗಿ ಯುವಜನರು’ ಸಂಘಟನೆಯವರು ಪ್ರವಾಸದಲ್ಲಿದ್ದ ನಮ್ಮ ಪ್ರಧಾನಿಗೆ ಒಂದು ಪ್ರಶ್ನೆ ಕೇಳಿದರು- ‘ಕಳೆದ ಲೋಕಸಭಾ ಚುನಾವಣೆಯಲ್ಲಿ ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂದು ಭರವಸೆ ನೀಡಿದ್ದಿರಿ. ಕಿಂಚಿತ್ತೂ ಈಡೇರಲಿಲ್ಲ. ಈ ಬಗ್ಗೆ ಮಾತಾಡಿ’ ಅಂತ. ಇದಕ್ಕೆ ಉತ್ತರಿಸಬೇಕಾದ್ದು ಮಾತು ಕೊಟ್ಟ ಪ್ರಧಾನಿಯವರ ಹೊಣೆಗಾರಿಕೆ. ಆದರೆ ಅವರು ಉತ್ತರಿಸಲಿಲ್ಲ. ಬದಲಾಗಿ, ಮುಂದಿನ ಸಭೆಯಲ್ಲಿ ಅವರು ಆಡಿದ ಮಾತುಗಳು ಏನು ಗೊತ್ತೆ?- ‘ನಾವು ಕಾಮ್‍ಧಾರಿಗಳು, ಅವರು (ಅಂದರೆ ವಿರೋಧ ಪಕ್ಷದವರು) ನಾಮ್‍ಧಾರಿಗಳು’ ಅಂತ! ನುಣುಚಿಕೊಳ್ಳುವ ಇದು ದ್ರೋಹವಲ್ಲವೆ? ಇದು ಮಹಾದ್ರೋಹ. ಇವರು ನಾಡನ್ನು ಕಟ್ಟುತ್ತಿದ್ದಾರೋ ಅಥವ ಪದಗಳನ್ನು ಕಟ್ಟುತ್ತಿದ್ದಾರೋ? ಈ ರಾಜಕಾರಣ ನೋಡುತ್ತಿದ್ದರೆ ಜಿಗುಪ್ಸೆಯಾಗುತ್ತದೆ. ಭಯವೂ ಆಗುತ್ತದೆ.

ಕೆ.ಎಸ್.ಪುಟ್ಟಣ್ಣಯ್ಯ

ಇನ್ನೊಂದು ರಾಜಕಾರಣದ ಮಾತಿನ ಠೇಂಕಾರ; “ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ಭ್ರಷ್ಟರನ್ನೆಲ್ಲಾ ಜೈಲಿಗೆ ಅಟ್ಟುತ್ತೇವೆ”. ಈ ಮಾತಿಗೆ ನಮ್ಮ ಕೆಎಸ್ ಪುಟ್ಟಣ್ಣಯ್ಯ ಹೇಳ್ತಾ ಇದ್ದರು; “ವಿಧಾನಸೌಧದ ಬಾಗಿಲಿಗೆ ಒಂದು ‘ಭ್ರಷ್ಟರ ತಡೆ ಮಿಷಿನ್’ ಇಟ್ಟುಬಿಡೋಣ. ಭ್ರಷ್ಟರು ಬಂದರೆ ಆ ಬಾಗಿಲು ಆಟೋಮ್ಯಾಟಿಕ್ ಮುಚ್ಕೋಬೇಕು – ಅಂಥದ್ದು. ಆ ಮಿಷಿನ್ನೂ ಲಂಚ ಈಸ್ಕಂಡು ಒಳಿಕೆ ಬಿಡ್ದೇ ಇದ್ರೆ – ವಿಧಾನ ಸೌಧದ ಒಳೀಕೆ ಎಷ್ಟು ಜನರಪ್ಪ ಹೋಗೌರು?” ಅಂತಿದ್ದರು. ಇದು ರಾಜಕಾರಣದ ಇಂದಿನ ಪರಿಸ್ಥಿತಿ. ವ್ಯವಸ್ಥೇನೆ ಭ್ರಷ್ಟಗೊಂಡಿದೆ.

ಇಂಥ ದುರಂತ ರಾಜಕಾರಣದ ಸಂದರ್ಭದಲ್ಲಿ- ಸ್ವರಾಜ್ ಇಂಡಿಯಾ ತನ್ನ ಪ್ರಣಾಳಿಕೆ ಬಿಡುಗಡೆ ಮಾಡ್ತಾ ಇದೆ. ‘ಕೆಲವರಿಗೆ ಅಲ್ಲ; ಸಮುದಾಯಕ್ಕೆ ಎಲ್ಲಾ’ ಎಂಬ ಆಶಯದ ಸಸಿ ನೆಡುತ್ತಿದೆ. ಈ ಸ್ವರಾಜ್ ಪ್ರಣಾಳಿಕೆಗೆ ಕಾಪಿರೈಟ್ ಇಲ್ಲ. ಯಾರೇ ಪ್ರಕಟಿಸಬಹುದು. ದಯವಿಟ್ಟು ಚರ್ಚಿಸಿ, ಟೀಕೆ ಮಾಡಿ, ಸಲಹೆ, ಸೂಚನೆ, ಟಿಪ್ಪಣಿ ನೀಡಿ. ಇದು ಮುಕ್ತವಾಗಿದೆ.

ಕೊನೆಯದಾಗಿ, ನಾಡಿನ ಜಾಗೃತ ಪ್ರಜ್ಞೆಗೆ ಒಂದು ವಿನಂತಿ ಮಾಡುವೆ. ಅದೇನೆಂದರೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರಣಾಳಿಕೆಯ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ನೀಡುವ ಭರವಸೆಗಳು- ಇವುಗಳನ್ನೆಲ್ಲಾ ನೆನಪಿಸುವ ಒಂದು ತಿhisಣಟe bಟoತಿeಡಿs ಪಡೆಯನ್ನು ಹುಟ್ಟು ಹಾಕಬೇಕಾಗಿದೆ. ರಾಜ್ಯಕ್ಕೆ ಹತ್ತು ಜನ ಸಾಕು. ಜಿಲ್ಲೆಗೆ ಮೂರು ಜನ. ರಾಜಕೀಯ ಪಕ್ಷಗಳ ಪ್ರಣಾಳಿಕೆಗಳ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ತಿಂಗಳಿಗೊಮ್ಮೆ ಅವರವರ ಮೂತಿಗೆ ಹಿಡಿಯುವ ಒಂದು ಜಾಗರೂಕ ಪಡೆ ಅತ್ಯಗತ್ಯವಾಗಿದೆ. ಇದರಿಂದ ಹೊಣೆಗೇಡಿ ರಾಜಕಾರಣಕ್ಕೆ ಸ್ವಲ್ಪವಾದರೂ ಹೊಣೆಗಾರಿಕೆ ಬರಬಹುದು. ರಾಜಕಾರಣಕ್ಕೆ ಮಾನಮರ್ಯಾದೆ ತಂದುಕೊಡುವ ದಿಕ್ಕಲ್ಲಿ ಇದು ಮೊದಲ ಹೆಜ್ಜೆಯಾಗಲೂಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...