Homeಮುಖಪುಟಮೋದಿ ಮೆಚ್ಚಿಸಿ, ಕುರ್ಚಿ ಉಳಿಸಿಕೊಳ್ಳಲು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ರೂ. ಸುರಿಯುತ್ತಿರುವ ಯಡಿಯೂರಪ್ಪ: ಆರೋಪ

ಮೋದಿ ಮೆಚ್ಚಿಸಿ, ಕುರ್ಚಿ ಉಳಿಸಿಕೊಳ್ಳಲು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ರೂ. ಸುರಿಯುತ್ತಿರುವ ಯಡಿಯೂರಪ್ಪ: ಆರೋಪ

- Advertisement -
- Advertisement -

ಪ್ರಧಾನಿ ಮೋದಿಯವರನ್ನು ಮೆಚ್ಚಿಸಿ, ತಮ್ಮ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿಂದಿ ಪತ್ರಿಕೆ ಜಾಹೀರಾತುಗಳಿಗೆ ಕೋಟ್ಯಾಂತರ ರೂಪಾಯಿ ಸುರಿಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕೊರೊನಾ ಉಚಿತ ಲಸಿಕೆ ಅಭಿಯಾನದ ದಿನ ಜೂನ್ 21 ರಂದು ಕರ್ನಾಟಕದ ಕನ್ನಡ ಸೇರಿದಂತೆ ಹಲವು ಪತ್ರಿಕೆಗಳು ಸೇರಿದಂತೆ ದೆಹಲಿಯ ಹಿಂದಿ ಪತ್ರಿಕೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಹೀರಾತು ನೀಡಿದ್ದಾರೆ. ಕೊರೊನಾ ನಿರ್ವಹಣೆಯ ವಿಫಲತೆಯನ್ನು ಮುಚ್ಚಿಕೊಳ್ಳಲು ಈಗಾಗಲೇ ಕೋಟ್ಯಾಂತರ ರೂಪಾಯಿಯನ್ನು ಜಾಹೀರಾತುಗಳಿಗೆ ಸುರಿಯುತ್ತಿರುವ ಅವರು ಈಗ ಖುರ್ಚಿ ಉಳಿಸಿಕೊಳ್ಳಲು ಮತ್ತಷ್ಟು ಹಣ ಪೋಲು ಮಾಡುತ್ತಿದ್ದಾರೆ ಎಂದು ಆಪ್ ಆರೋಪಿಸಿದೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ದೈನಿಕ್ ಭಾಸ್ಕರ್‌, NBT ನವ ಭಾರತ ಟೈಮ್ಸ್‌, ದೈನಿಕ ಜಾಗರಣ, ಅಮರ್ ಉಜಾಲಾ ಪತ್ರಿಕೆಗಳಲ್ಲಿ ಹಿಂದೆ ಭಾಷೆಯಲ್ಲಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿ ಯಡಿಯೂರಪ್ಪನವರು ಪೂರ್ಣ ಪುಟದ ಜಾಹೀರಾತು ನೀಡಿದ್ದಾರೆ.

ಉಚಿತ ಲಸಿಕೆ ನೀಡಿರುವ ಒಕ್ಕೂಟ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದ್ದು, ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿ, ಹಿಂದೆ ಪತ್ರಿಕೆಗಳಲ್ಲಿ, ಹಿಂದಿ ಭಾಷೆಯಲ್ಲಿ ಜಾಹೀರಾತು ನೀಡಿದ್ದಾರೆ. ಇದು ಮೋದಿಯವರನ್ನು ಒಲೈಸಿಕೊಳ್ಳಲು ಬಿ.ಎಸ್.ಯಡಿಯೂರಪ್ಪ ಹೀಗೆ ಜಾಹೀರಾತುಗಳಿಗೆ ಹಣ ಸುರಿಯುತ್ತಿದ್ದಾರೆ ಎಂದು ಟೀಕೆಗಳು ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ‘ನಮ್ಮ ಮಕ್ಕಳ ಶಾಲಾ ಶುಲ್ಕವನ್ನು ಸಬ್ಸಿಡಿ ಮಾಡಲು ಹಣವಿಲ್ಲ. ಆದರೆ ದೆಹಲಿ ಆವೃತ್ತಿಯ ಹಿಂದಿ ಪತ್ರಿಕೆಗಳಲ್ಲಿ ಮೊದಲ ಪುಟದಲ್ಲಿ ಪೂರ್ಣ ಪ್ರಮಾಣದಲ್ಲಿ ಜಾಹೀರಾತುಗಳಿಗಾಗಿ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂತೋಷ ಪಡಿಸಿ, ಬಿ.ಎಸ್. ಯಡಿಯೂರಪ್ಪ ಅವರ ಕುರ್ಚಿ ಉಳಿಸಲು ಮಾತ್ರವೇ” ಎಂದು ಟೀಕಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಆಪ್ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, “ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬರವಣಿಗೆಯಲ್ಲಿ ಉತ್ತರ ನೀಡಿದೆ.. ಸಾವಿರಾರು ಕೋಟಿ ಖರ್ಚು ಮಾಡಿ ಪ್ರಚಾರ ಮಾಡಕೊಳ್ಳಲು ಇವರ ಬಳಿ ದುಡ್ಡಿದೆ. ಆದರೆ, ಕೊರೊನಾದಿಂದ ಸಂಕಷ್ಟಕ್ಕೆ ಒಳಗಾಗಿ, ಬೀದಿಪಾಲಾಗಿರುವ ಕುಟುಂಬಗಳಿಗೆ ಸಹಾಯ ಮಾಡಲು ದುಡ್ಡಿಲ್ಲ. ಕನ್ನಡಿಗರಿಗೆ ಯಾವುದೋ ಒಂದು ಯೋಜನೆ ಬಗ್ಗೆ ತಿಳಿಸಲು, ಲಸಿಕಾ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲು ಈ ಜಾಹೀರಾತು ನೀಡುತ್ತಿಲ್ಲ. ಹಿಂದಿ ಭಾಷೆಯಲ್ಲಿ ಇಂತಹ ಜಾಹೀರಾತು ನೀಡುತ್ತಿರುವುದು ಬೇರೆಯದೆ ಕಾರಣಕ್ಕೆ. ಇರುವ ದುಡ್ಡನ್ನು ಹಾಳು ಮಾಡುವ ಬದಲು ಕೊರೊನಾ ಪೀಡಿತರಿಗೆ ಆರ್ಥಿಕ ಸಹಾಯ ಮಾಡಲಿ. ನಮ್ಮ 25 ಮಂದಿ ಸಂಸದರಂತೆ ಯಡಿಯೂರಪ್ಪ ಕೂಡ ರಾಜ್ಯದ ಜನರಿಗೆ ಉಪಯೋಗವಾಗುವ ಕೆಲಸ ಮಾಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೆ ಕೂಡ ಕೊರೊನಾ ನಿರ್ವಹಣೆಯ ವಿಫಲತೆಯನ್ನು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಪೂರ್ಣಪುಣದ ಜಾಹೀರಾತುಗಳು ಮತ್ತು ಪ್ರಾಯೋಜಿತ ಲೇಖನಗಳನ್ನು ಬರೆಸಿತ್ತು.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಾಯಿ, ತಾಯ್ನುಡಿ ಮತ್ತು ತಾಯ್ನಾಡು; ಈ ಮೂರೂ ಸಹ ಅತ್ಯಮೂಲ್ಯವಾದವು. ಆದರೆ ಮನುವಾದಿ ರಾಜಕಾರಣಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎನ್ನುವುದಕ್ಕೆ ಈ ಹಿಂದಿ ಜಾಹೀರಾತು ಸಾಕ್ಶಿ. ಕನ್ನಡಿಗರ ಹಣದಿಂದ ಈ ರೀತಿ ಹಿಂದಿಯಲ್ಲಿ ಜಾಹೀರಾತು ನೀಡಿರುವ ಯಡಿಯೂರಪ್ಪನವರ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...