HomeUncategorizedTRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

TRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

- Advertisement -
- Advertisement -

ಟಿಆರ್‌ಪಿ ಹಗರಣದಲ್ಲಿ ಮುಂಬೈ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಎರಡನೇ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಈ ಚಾರ್ಜ್‌ಶೀಟ್‌‌‌ನಲ್ಲಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.

“ಇತರರ ಜೊತೆಗೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿಯ ಮಾತೃ ಸಂಸ್ಥೆಯಾದ ಎಆರ್‌‌ಜಿ ಔಟ್‌ಲೆಯರ್‌ ಮೀಡಿಯಾವನ್ನು ಚಾರ್ಜ್‌‌ಶೀಟ್‌‌ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ” ಎಂದು ಅರ್ನಾಬ್‌ ಗೋಸ್ವಾಮಿಯ ವಕೀಲರು ಹೇಳಿದ್ದಾರೆ.

ಟಿಆರ್‌ಪಿ ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ಗುಪ್ತಚರ ಘಟಕ (ಸಿಐಯು)ವು ಈ ಆರೋಪಪಟ್ಟಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಇದನ್ನೂ ಓದಿ: ರೇಟಿಂಗ್ ಹೆಚ್ಚಿಸಲು ಅರ್ನಾಬ್ 12,000 ಡಾಲರ್ ಮತ್ತು 40 ಲಕ್ಷ ರೂ ಪಾವತಿಸಿದ್ದಾರೆ: ಪಾರ್ಥೋ ದಾಸ್‌ಗುಪ್ತಾ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ರೇಟಿಂಗ್ ಏಜೆನ್ಸಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್), ಹನ್ಸಾ ರಿಸರ್ಚ್ ಗ್ರೂಪ್ (ಎಚ್‌ಆರ್‌ಜಿ) ಮೂಲಕ ಕೆಲವು ಟೆಲಿವಿಷನ್ ಚಾನೆಲ್‌ಗಳು ಟಿಆರ್‌ಪಿ ಸಂಖ್ಯೆಯನ್ನು ತಿರುಚುತ್ತಿದೆ ಎಂದು ಆರೋಪಿಸಿತ್ತು. ಇದರ ನಂತರ ಟಿಆರ್‌ಪಿ ಹಗರಣ ಬೆಳಕಿಗೆ ಬಂದಿತ್ತು.

ಟಿಆರ್‌ಪಿ
ಅರ್ನಾಬ್‌ ಗೋಸ್ವಾಮಿ ಮತ್ತು ಪಾರ್ಥೋ ದಾಸ್‌ಗುಪ್ತಾ

ಈ ಹಗರಣದಲ್ಲಿ ಅರ್ನಾಬ್‌ ಗೋಸ್ವಾಮಿ, ಬಾರ್ಕ್‌ನ ಮಾಜಿ ಮುಖ್ಯ ನಿರ್ವಹಣಾಧಿಕಾರಿ ಪಾರ್ಥೋ ದಾಸ್‌ಗುಪ್ತಾ ಸೇರಿದಂತೆ ಮುಂಬೈ ಪೊಲೀಸರು ಒಟ್ಟು 15 ಜನರನ್ನು ಬಂಧಿಸಿತ್ತು. ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿ, ಮುಂಬೈನ ಸ್ಥಳೀಯ ಚಾನೆಲ್‌‌‌ಗಳಾದ ಬಾಕ್ಸ್‌ ಸಿನೆಮಾ ಹಾಗೂ ಫಕ್ತ್‌ ಮರಾಠಿ ಚಾನೆಲ್‌ಗಳು ಈ ನಕಲಿ ಟಿಆರ್‌ಪಿ ಹಗರಣದಲ್ಲಿ ಭಾಗಿಯಾವೆ ಎಂದು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ಟಿಆರ್‌ಪಿಯ ಅಂಕಿ ಅಂಶಗಳನ್ನು ಸಂಗ್ರಹಿಸಲು ಬೇಕಾಗಿ ಕೆಲವೊಂದು ಮನೆಗಳಿಗೆ ಮೀಟರ್‌ಗಳನ್ನು ಅಳವಡಿಸಲಾಗುತ್ತದೆ. ಈ ಮೀಟರ್‌ ಅಳವಡಿಸುವ ಗುತ್ತಿಗೆಯನ್ನು ‘ಬಾರ್ಕ್‌‌’ ಹನ್ಸಾ ಎಂಬ ಸಂಸ್ಥೆಗೆ ನೀಡಿತ್ತು. ಆದರೆ ಹನ್ಸಾವು ಕೆಲವು ನಿರ್ದಿಷ್ಟ ವಾಹಿನಿಯನ್ನು ಮಾತ್ರ ಆನ್‌ ಮಾಡಿ ಇಡುವಂತೆ ಆ ಮನೆಗಳಿಗೆ ಹಣ ನೀಡಿತ್ತು. ತಮಗೆ ಹಣ ನೀಡುತ್ತಿರುವುದನ್ನು ಈ ವೀಕ್ಷಕರು ಮ್ಯಾಜಿಸ್ಟ್ರೇಟ್‌ ಮುಂದೆ ಒಪ್ಪಿಕೊಂಡಿದ್ದಾರೆ ಮುಂಬೈ ಪೊಲೀಸರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.

ಅಲ್ಲದೆ ಟಿಆರ್‌ಪಿ ತಿರುಚುವಿಕೆಯು ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತ ಅವರಿಗೆ ತಿಳಿದಿತ್ತು ಎಂದು ಆರೋಪಿಸಲಾಗಿದ್ದು, ಅದಕ್ಕಾಗಿ ಅವರ ಬಂಧನ ಕೂಡಾ ನಡೆದಿತ್ತು. ಟಿಆರ್‌ಪಿ ಹಗರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಬಾರ್ಕ್ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಕೂಡಾ ಸ್ಥಗಿತಗೊಳಿಸಿತ್ತು.

ಹೆಚ್ಚು ಟಿಆರ್‌ಪಿಯ ಟಿವಿ ಚಾನೆಲುಗಳೆಂದರೆ ಅದನ್ನು ಹೆಚ್ಚು ವೀಕ್ಷಕರು ವೀಕ್ಷಿಸುತ್ತಾರೆ ಎಂದರ್ಥ. ಹಾಗಾಗಿ ಹೆಚ್ಚು ಟಿಎಆರ್‌ಪಿ ಇರುವ ಚಾನೆಲುಗಳಿಗೆ ಹೆಚ್ಚು ಹೆಚ್ಚು ಜಾಹಿರಾತು ಬರುತ್ತದೆ. ಇದರಿಂದಾಗಿ ಚಾನೆಲ್‌ನ ಆದಾಯವು ಹೆಚ್ಚಾಗುತ್ತದೆ.

ಇದನ್ನೂ ಓದಿ: TRP ತಿರುಚಿದ ಆರೋಪ; ರಿಪಬ್ಲಿಕ್ ಸೇರಿ 3 ಚಾನೆಲ್‌ಗಳ ಮೇಲೆ ತನಿಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...