Homeಮುಖಪುಟಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

ಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

- Advertisement -
- Advertisement -

ಇಂದು ಸಂಜೆ NCP ಯ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ತಮ್ಮ ನಿವಾಸದಲ್ಲಿ 15 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಮಂಗಳವಾರ ನವದೆಹಲಿಯ ಪವಾರ್ ನಿವಾಸದಲ್ಲಿ ಆಮ್ ಆದ್ಮಿ, ಶಿವಸೇನೆ, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿ ಚರ್ಚೆ ನಡೆಸಿದ್ದಾರೆ.

ಈ ಸಭೆ ಶರದ್ ಪವಾರ್ ಮತ್ತು ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್  ಭೇಟಿಯ ಬೆನ್ನಲ್ಲೇ ನಡೆದಿದೆ. ನಿನ್ನೆ ಪ್ರಶಾಂತ್ ಕಿಶೋರ್ ಎರಡನೇ ಬಾರಿಗೆ ಶರದ್ ಪವಾರ್ ಅವರನ್ನು ಭೇಟಿಯಾಗಿ ರಾಜಕೀಯ ಚರ್ಚೆಗಳನ್ನು ನಡೆಸಿದ್ದರು. ಆದರೆ ಶರದ್ ಪವಾರ್ ಮತ್ತು ತಮ್ಮ ನಡುವಿನ ಚರ್ಚೆಯ ವಿಷಯವನ್ನು ಕುರಿತು ಪ್ರಶಾಂತ್ ಕಿಶೋರ್ ಇದುವರೆಗೆ ಹೆಚ್ಚಿನ ಮಾಹಿತಿಯನ್ನು ಹೊರಗೆಡವುತ್ತಿಲ್ಲ. ಆದರೆ ಒಂದು ವಾರದ ಅಂತರದಲ್ಲಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು 2 ಸಾರಿ ಭೇಟಿಯಾಗಿದ್ದಾರೆ. ಇದರ ಹಿಂದೆ ತೃತೀಯ ರಂಗದ ಲೆಕ್ಕಾಚಾರಗಳಿವೆ ಎಂದು ಅನೇಕ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ಆದರೆ ಪ್ರಶಾಂತ್ ಕಿಶೋರ್ ಮಾತ್ರ ಶರದ್ ಪವಾರ್ ಭೇಟಿಯ ಹಿಂದೆ ಯಾವುದೇ ರಾಜಕೀಯ ಲೆಕ್ಕಾಚಾರಗಳಿಲ್ಲ. ತೃತೀಯ ಚತುರ್ಥ ರಂಗಗಳ ರಚನೆಯ ಉದ್ಧೇಶವೂ ಇಲ್ಲ ಎಂದು ಹೆಳುತ್ತಲೆ ಬಂದಿದ್ದಾರೆ. ತೃತೀಯ, ಚತುರ್ಥ ರಂಗಗಳಿಂದ,  2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವುದು ಸಾಧ್ಯವಿಲ್ಲ. ಏನಿದ್ದರೂ ಬಿಜೆಪಿಗೆ ವಿರುದ್ಧವಾಗಿ ಎಲ್ಲಾ ಪಕ್ಷಗಳೂ ಒಗ್ಗೂಡಿ ಚುನಾವಣೆ ಎದುರಿಸಬೇಕು ಎಂದಿದ್ದಾರೆ.

ಶರದ್ ಪವಾರ್ ಅವರೊಂದಿಗಿನ ಭೇಟಿಯಲ್ಲಿ ತೃತೀಯ ರಂಗದ ಚರ್ಚೆಯಾಗಿಲ್ಲ. ಯಾವ ತಂತ್ರಗಳಿಂದ ಬಿಜೆಪಿಯನ್ನು ಕಟ್ಟಿಹಾಕಬಹುದು ಎಂದು ಅಗತ್ಯವಾಗಿ ಚರ್ಚಿಸಿದ್ದೇವೆ. ಆದರೆ ಯಾವುದೇ ರಾಜಕೀಯ ಪಕ್ಷಗಳ ಒಕ್ಕೂಟಗಳ ರಚನೆ ವಿಷಯ ಸದ್ಯಕ್ಕೆ ತಮ್ಮ ಮುಂದೆ ಇಲ್ಲ ಎಂದು ಕೂಡ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಹೇಳಿಕೆಗಳ ನಡುವೆಯೂ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ. ಕೇಂದ್ರದ ಮಾಜಿ ಸಚಿವ ಯಶವಂತ್‌ ಸಿನ್ಹಾ, ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ, ಶಿವಸೇನೆಯ ಸಂಜಯ್ ರಾವತ್, ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಓಮರ್ ಅಬ್ದುಲ್ಲಾ, ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಗುಪ್ತಾ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಈ ಸಭೆಯು ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆಯ ಒಂದು ಕಾರ್ಯಕ್ರಮವಾಗಿದೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ದೇಶದ ಆರ್ಥಿಕತೆ, ಕೊರೋನಾ ವಿರುದ್ಧದ ಹೋರಾಟದ ಕುರಿತು ಚರ್ಚೆ ನಡೆಸಲು ಸೇರಿದ್ದೇವೆ ಎಂದು ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿರುವ ಅನೇಕ ರಾಜಕೀಯರು ತಾವು ತಮ್ಮ ಪಕ್ಷದ ಪ್ರತಿನಿಧಿಗಳಾಗಿ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ಎಂದು ತಿಳಿಸಿದ್ದಾರೆ. ತಮ್ಮ ವಯಕ್ತಿಕ ಸ್ನೇಹದ ಕಾರಣಕ್ಕೆ ಸಮಾನ ಮನಸ್ಕ ವ್ಯಕ್ತಿಗಳು ಸೇರಿ ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆ ಆಯೋಜಿಸಿದ ವಿಚಾರ ವಿನಿಮಯದಲ್ಲಿ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ಸಭೆಗೆ ಆಹ್ವಾನಿತರಾಗಿದ್ದ ಡಿಎಂಕೆಯ ನಾಯಕ ಎ ರಾಜಾ ಅವರು ಸಭೆಯ ಅಜೆಂಡಾ ಕುರಿತು ಸ್ಪಷ್ಟತೆಯಿಲ್ಲದ ಕಾರಣ ಸಭೆಯಲ್ಲಿ ಭಾಗವಹಿಸಿಲ್ಲ.

ಇದನ್ನೂ ಓದಿ : ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ತೃತೀಯ ರಂಗದ ರಚನೆ ನಮ್ಮ ಮುಂದೆ ಇಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿರುವುದು ನಿಜವೇ ಆದರೆ ಇಂದು ವಿವಿಧ ಪಕ್ಷಗಳ ರಾಜಕೀಯ ನಾಯಕರು ಯಾವಕಾರಣಕ್ಕೆ ಸಭೆ ಸೇರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಒಂದು ವೇಳೆ ತೃತೀಯ ರಂಗದ ರಚನೆಯ ಕುರಿತಾದ ಚರ್ಚೆ ನಡೆಯುತ್ತಿರುವುದು ನಿಜವಾದರೆ ದೇಶದ ಬಹು ಮುಖ್ಯ ವಿರೋಧ ಪಕ್ಷಗಳಾದ ಡಿಎಂಕೆ, ಸಮಾಜವಾದಿ ಪಾರ್ಟಿ, CPI, RJD, BSP, TRS  ಮುಂತಾದ ಪಕ್ಷಗಳ ನಾಯಕರು ಸಭೆಗೆ ಹಾಜರಿರಲಿಲ್ಲ. ಜೊತೆಗೆ ಪ್ರಶಾಂತ್ ಕಿಶೋರ್ ತೃತೀಯ ರಂಗದ ಬದಲಾಗಿ ಸಂಯಕ್ತ ವಿರೋಧ ಪಕ್ಷಗಳ ಒಕ್ಕೂಟ ರಚನೆಯ ಕುರಿತು ಒತ್ತು ನೀಡುತ್ತಿದ್ದಾರೆ. ಆದರೆ ದೇಶದ ದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಇತರ ವಿರೋಧ ಪಕ್ಷಗಳ ಜೊತೆಗಿನ ಮಾತುಕತೆಯ ಪ್ರಸ್ತಾಪಕ್ಕೆ ಇಂಗಿತವನ್ನು ಇದುವರೆಗೆ ವ್ಯಕ್ತಪಡಿಸಿಲ್ಲ. ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳ ಪ್ರಬಲ ಶಕ್ತಿಯನ್ನು ಕಟ್ಟುವ ಶರದ್ ಪವಾರ್ ಅವರ ಪ್ರಯತ್ನಕ್ಕೆ ಹಿನ್ನಡೆಯಾಗುತ್ತಿದೆ ಎಂದು NCP ಯ ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಾಧ್ಯತೆಗಳೊಂದರ ಚರ್ಚೆಯನ್ನು ಹುಟ್ಟುಹಾಕಿವೆ. ಆದರೆ ಇದುವರೆಗೆ ಅನೇಕ ಸಾರಿ ದೇಶದಲ್ಲಿ ತೃತೀಯ ರಂಗದ ರಚನೆಯ ಚರ್ಚೆ ಅನೇಕಬಾರಿ ನಡೆದಿದೆ. 2019, 2014 ಹೀಗೆ ಹಿಂದಿನ ಲೋಕಸಭೆ ಚುನಾವಣೆಗಳ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ತೃತೀಯ ರಂಗದ ರಚನೆಯ ಪ್ರಯತ್ನವನ್ನು ನಡೆಸಿದ್ದಾರೆ. ಅದರೆ ತೃತೀಯ ರಂಗದ ರಾಷ್ಟ್ರವ್ಯಾಪಿ ರಾಜಕೀಯ ಸಂಘಟನೆ ಇದುವರೆಗೆ ಸಾಧ್ಯವಾಗಿಲ್ಲ.

ಇನ್ನೊಂದು ಕಡೆ 2019 ರ ಲೋಕಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್‌ ಪಕ್ಷದ ಅನೇಕ ನಾಯಕರುಗಳು ಕೂಡ ಸಂಯುಕ್ತ ವಿರೊಧ ಪಕ್ಷಗಳ ಒಕ್ಕೂಟದ ರಚನೆಯ ಅಗತ್ಯತೆ ಕುರಿತು ಮಾತನಾಡಿದ್ದರು. ಆದರೆ ಇದುವರೆಗೆ ಕಾಂಗ್ರೆಸ್‌ನ ಉನ್ನತ ನಾಯಕತ್ವ ಬಿಜೆಪಿ ವಿರುದ್ಧದ ವಿರೊಧ ಪಕ್ಷಗಳ ಪ್ರಬಲ ಸಂಘಟನೆಯ ಕಡೆ ಒಲವು ತೋರಿಲ್ಲ.

ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳ ನಡುವಿನ ಹೊಂದಾಣಿಕೆಯ ಕೊರತೆಗೆ ನಾಯಕತ್ವದ ವಿಚಾರ ಕೂಡ ಕಾರಣ ಎಂದು ಹೇಳಲಾಗುತ್ತಿದೆ. ಒಂದು ವೇಳೆ ವಿರೋಧ ಪಕ್ಷಗಳ ಒಕ್ಕೂಟ ರಚನೆಯಾದರೆ ಅದು ಕಾಂಗ್ರೆಸ್‌ ನೇತೃತ್ವದಲ್ಲಿಯೇ ನಡೆಯಬೇಕು ಎಂದು ಕಾಂಗ್ರೆಸ್‌ನ ಉನ್ನತ ನಾಯಕತ್ವ ಪಟ್ಟು ಹಿಡಿದಿರುವುದು ಕೂಡ ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಒಕ್ಕೂಟದ ರಚನೆಗೆ ಹಿನ್ನಡೆಯನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಲೇ ಕೆಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸೇತರ ತೃತಿಯ ರಂಗದ ರಚನೆಯ ಕಡೆಗೆ ಒಲವು ತೋರಿಸಿದ್ದಾರೆ. ಆದರೆ ಕಾಂಗ್ರೆಸ್ ನೇತೃತ್ವದ UPA ಒಕ್ಕೂಟದ ಭಾಗವಾಗಿರುವ ಶರದ್ ಪವಾರ್ ಕಾಂಗ್ರೇಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ಒಂದೇ ವೇದಿಕೆಗೆ ತರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ತೃತೀಯ ರಂಗವೋ, ವಿರೋಧಪಕ್ಷಗಳ ಒಕ್ಕೂಟವೋ ಅಥವಾ ಸಮಾನ ಮನಸ್ಕ ನಾಯಕರ ಸಂವಾದವೋ ಒಟ್ಟಿನಲ್ಲಿ ಶರದ್ ಪವಾರ್ ಮಾತ್ರ ರಾಷ್ಟ್ರ ರಾಜಕಾರಣದಲ್ಲಿ  ಒಂದಷ್ಟು ಬಿಸಿಬಿಸಿ ರಾಜಕೀಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದ್ದಾರೆ.

 -ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...