Homeಮುಖಪುಟಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

ಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

- Advertisement -
- Advertisement -

ಇಂದು ಸಂಜೆ NCP ಯ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ತಮ್ಮ ನಿವಾಸದಲ್ಲಿ 15 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಮಂಗಳವಾರ ನವದೆಹಲಿಯ ಪವಾರ್ ನಿವಾಸದಲ್ಲಿ ಆಮ್ ಆದ್ಮಿ, ಶಿವಸೇನೆ, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿ ಚರ್ಚೆ ನಡೆಸಿದ್ದಾರೆ.

ಈ ಸಭೆ ಶರದ್ ಪವಾರ್ ಮತ್ತು ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್  ಭೇಟಿಯ ಬೆನ್ನಲ್ಲೇ ನಡೆದಿದೆ. ನಿನ್ನೆ ಪ್ರಶಾಂತ್ ಕಿಶೋರ್ ಎರಡನೇ ಬಾರಿಗೆ ಶರದ್ ಪವಾರ್ ಅವರನ್ನು ಭೇಟಿಯಾಗಿ ರಾಜಕೀಯ ಚರ್ಚೆಗಳನ್ನು ನಡೆಸಿದ್ದರು. ಆದರೆ ಶರದ್ ಪವಾರ್ ಮತ್ತು ತಮ್ಮ ನಡುವಿನ ಚರ್ಚೆಯ ವಿಷಯವನ್ನು ಕುರಿತು ಪ್ರಶಾಂತ್ ಕಿಶೋರ್ ಇದುವರೆಗೆ ಹೆಚ್ಚಿನ ಮಾಹಿತಿಯನ್ನು ಹೊರಗೆಡವುತ್ತಿಲ್ಲ. ಆದರೆ ಒಂದು ವಾರದ ಅಂತರದಲ್ಲಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು 2 ಸಾರಿ ಭೇಟಿಯಾಗಿದ್ದಾರೆ. ಇದರ ಹಿಂದೆ ತೃತೀಯ ರಂಗದ ಲೆಕ್ಕಾಚಾರಗಳಿವೆ ಎಂದು ಅನೇಕ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ಆದರೆ ಪ್ರಶಾಂತ್ ಕಿಶೋರ್ ಮಾತ್ರ ಶರದ್ ಪವಾರ್ ಭೇಟಿಯ ಹಿಂದೆ ಯಾವುದೇ ರಾಜಕೀಯ ಲೆಕ್ಕಾಚಾರಗಳಿಲ್ಲ. ತೃತೀಯ ಚತುರ್ಥ ರಂಗಗಳ ರಚನೆಯ ಉದ್ಧೇಶವೂ ಇಲ್ಲ ಎಂದು ಹೆಳುತ್ತಲೆ ಬಂದಿದ್ದಾರೆ. ತೃತೀಯ, ಚತುರ್ಥ ರಂಗಗಳಿಂದ,  2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವುದು ಸಾಧ್ಯವಿಲ್ಲ. ಏನಿದ್ದರೂ ಬಿಜೆಪಿಗೆ ವಿರುದ್ಧವಾಗಿ ಎಲ್ಲಾ ಪಕ್ಷಗಳೂ ಒಗ್ಗೂಡಿ ಚುನಾವಣೆ ಎದುರಿಸಬೇಕು ಎಂದಿದ್ದಾರೆ.

ಶರದ್ ಪವಾರ್ ಅವರೊಂದಿಗಿನ ಭೇಟಿಯಲ್ಲಿ ತೃತೀಯ ರಂಗದ ಚರ್ಚೆಯಾಗಿಲ್ಲ. ಯಾವ ತಂತ್ರಗಳಿಂದ ಬಿಜೆಪಿಯನ್ನು ಕಟ್ಟಿಹಾಕಬಹುದು ಎಂದು ಅಗತ್ಯವಾಗಿ ಚರ್ಚಿಸಿದ್ದೇವೆ. ಆದರೆ ಯಾವುದೇ ರಾಜಕೀಯ ಪಕ್ಷಗಳ ಒಕ್ಕೂಟಗಳ ರಚನೆ ವಿಷಯ ಸದ್ಯಕ್ಕೆ ತಮ್ಮ ಮುಂದೆ ಇಲ್ಲ ಎಂದು ಕೂಡ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಹೇಳಿಕೆಗಳ ನಡುವೆಯೂ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ. ಕೇಂದ್ರದ ಮಾಜಿ ಸಚಿವ ಯಶವಂತ್‌ ಸಿನ್ಹಾ, ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ, ಶಿವಸೇನೆಯ ಸಂಜಯ್ ರಾವತ್, ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಓಮರ್ ಅಬ್ದುಲ್ಲಾ, ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಗುಪ್ತಾ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಈ ಸಭೆಯು ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆಯ ಒಂದು ಕಾರ್ಯಕ್ರಮವಾಗಿದೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ದೇಶದ ಆರ್ಥಿಕತೆ, ಕೊರೋನಾ ವಿರುದ್ಧದ ಹೋರಾಟದ ಕುರಿತು ಚರ್ಚೆ ನಡೆಸಲು ಸೇರಿದ್ದೇವೆ ಎಂದು ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿರುವ ಅನೇಕ ರಾಜಕೀಯರು ತಾವು ತಮ್ಮ ಪಕ್ಷದ ಪ್ರತಿನಿಧಿಗಳಾಗಿ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ಎಂದು ತಿಳಿಸಿದ್ದಾರೆ. ತಮ್ಮ ವಯಕ್ತಿಕ ಸ್ನೇಹದ ಕಾರಣಕ್ಕೆ ಸಮಾನ ಮನಸ್ಕ ವ್ಯಕ್ತಿಗಳು ಸೇರಿ ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆ ಆಯೋಜಿಸಿದ ವಿಚಾರ ವಿನಿಮಯದಲ್ಲಿ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ಸಭೆಗೆ ಆಹ್ವಾನಿತರಾಗಿದ್ದ ಡಿಎಂಕೆಯ ನಾಯಕ ಎ ರಾಜಾ ಅವರು ಸಭೆಯ ಅಜೆಂಡಾ ಕುರಿತು ಸ್ಪಷ್ಟತೆಯಿಲ್ಲದ ಕಾರಣ ಸಭೆಯಲ್ಲಿ ಭಾಗವಹಿಸಿಲ್ಲ.

ಇದನ್ನೂ ಓದಿ : ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ತೃತೀಯ ರಂಗದ ರಚನೆ ನಮ್ಮ ಮುಂದೆ ಇಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿರುವುದು ನಿಜವೇ ಆದರೆ ಇಂದು ವಿವಿಧ ಪಕ್ಷಗಳ ರಾಜಕೀಯ ನಾಯಕರು ಯಾವಕಾರಣಕ್ಕೆ ಸಭೆ ಸೇರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಒಂದು ವೇಳೆ ತೃತೀಯ ರಂಗದ ರಚನೆಯ ಕುರಿತಾದ ಚರ್ಚೆ ನಡೆಯುತ್ತಿರುವುದು ನಿಜವಾದರೆ ದೇಶದ ಬಹು ಮುಖ್ಯ ವಿರೋಧ ಪಕ್ಷಗಳಾದ ಡಿಎಂಕೆ, ಸಮಾಜವಾದಿ ಪಾರ್ಟಿ, CPI, RJD, BSP, TRS  ಮುಂತಾದ ಪಕ್ಷಗಳ ನಾಯಕರು ಸಭೆಗೆ ಹಾಜರಿರಲಿಲ್ಲ. ಜೊತೆಗೆ ಪ್ರಶಾಂತ್ ಕಿಶೋರ್ ತೃತೀಯ ರಂಗದ ಬದಲಾಗಿ ಸಂಯಕ್ತ ವಿರೋಧ ಪಕ್ಷಗಳ ಒಕ್ಕೂಟ ರಚನೆಯ ಕುರಿತು ಒತ್ತು ನೀಡುತ್ತಿದ್ದಾರೆ. ಆದರೆ ದೇಶದ ದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಇತರ ವಿರೋಧ ಪಕ್ಷಗಳ ಜೊತೆಗಿನ ಮಾತುಕತೆಯ ಪ್ರಸ್ತಾಪಕ್ಕೆ ಇಂಗಿತವನ್ನು ಇದುವರೆಗೆ ವ್ಯಕ್ತಪಡಿಸಿಲ್ಲ. ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳ ಪ್ರಬಲ ಶಕ್ತಿಯನ್ನು ಕಟ್ಟುವ ಶರದ್ ಪವಾರ್ ಅವರ ಪ್ರಯತ್ನಕ್ಕೆ ಹಿನ್ನಡೆಯಾಗುತ್ತಿದೆ ಎಂದು NCP ಯ ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಾಧ್ಯತೆಗಳೊಂದರ ಚರ್ಚೆಯನ್ನು ಹುಟ್ಟುಹಾಕಿವೆ. ಆದರೆ ಇದುವರೆಗೆ ಅನೇಕ ಸಾರಿ ದೇಶದಲ್ಲಿ ತೃತೀಯ ರಂಗದ ರಚನೆಯ ಚರ್ಚೆ ಅನೇಕಬಾರಿ ನಡೆದಿದೆ. 2019, 2014 ಹೀಗೆ ಹಿಂದಿನ ಲೋಕಸಭೆ ಚುನಾವಣೆಗಳ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ತೃತೀಯ ರಂಗದ ರಚನೆಯ ಪ್ರಯತ್ನವನ್ನು ನಡೆಸಿದ್ದಾರೆ. ಅದರೆ ತೃತೀಯ ರಂಗದ ರಾಷ್ಟ್ರವ್ಯಾಪಿ ರಾಜಕೀಯ ಸಂಘಟನೆ ಇದುವರೆಗೆ ಸಾಧ್ಯವಾಗಿಲ್ಲ.

ಇನ್ನೊಂದು ಕಡೆ 2019 ರ ಲೋಕಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್‌ ಪಕ್ಷದ ಅನೇಕ ನಾಯಕರುಗಳು ಕೂಡ ಸಂಯುಕ್ತ ವಿರೊಧ ಪಕ್ಷಗಳ ಒಕ್ಕೂಟದ ರಚನೆಯ ಅಗತ್ಯತೆ ಕುರಿತು ಮಾತನಾಡಿದ್ದರು. ಆದರೆ ಇದುವರೆಗೆ ಕಾಂಗ್ರೆಸ್‌ನ ಉನ್ನತ ನಾಯಕತ್ವ ಬಿಜೆಪಿ ವಿರುದ್ಧದ ವಿರೊಧ ಪಕ್ಷಗಳ ಪ್ರಬಲ ಸಂಘಟನೆಯ ಕಡೆ ಒಲವು ತೋರಿಲ್ಲ.

ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳ ನಡುವಿನ ಹೊಂದಾಣಿಕೆಯ ಕೊರತೆಗೆ ನಾಯಕತ್ವದ ವಿಚಾರ ಕೂಡ ಕಾರಣ ಎಂದು ಹೇಳಲಾಗುತ್ತಿದೆ. ಒಂದು ವೇಳೆ ವಿರೋಧ ಪಕ್ಷಗಳ ಒಕ್ಕೂಟ ರಚನೆಯಾದರೆ ಅದು ಕಾಂಗ್ರೆಸ್‌ ನೇತೃತ್ವದಲ್ಲಿಯೇ ನಡೆಯಬೇಕು ಎಂದು ಕಾಂಗ್ರೆಸ್‌ನ ಉನ್ನತ ನಾಯಕತ್ವ ಪಟ್ಟು ಹಿಡಿದಿರುವುದು ಕೂಡ ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಒಕ್ಕೂಟದ ರಚನೆಗೆ ಹಿನ್ನಡೆಯನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಲೇ ಕೆಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸೇತರ ತೃತಿಯ ರಂಗದ ರಚನೆಯ ಕಡೆಗೆ ಒಲವು ತೋರಿಸಿದ್ದಾರೆ. ಆದರೆ ಕಾಂಗ್ರೆಸ್ ನೇತೃತ್ವದ UPA ಒಕ್ಕೂಟದ ಭಾಗವಾಗಿರುವ ಶರದ್ ಪವಾರ್ ಕಾಂಗ್ರೇಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ಒಂದೇ ವೇದಿಕೆಗೆ ತರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ತೃತೀಯ ರಂಗವೋ, ವಿರೋಧಪಕ್ಷಗಳ ಒಕ್ಕೂಟವೋ ಅಥವಾ ಸಮಾನ ಮನಸ್ಕ ನಾಯಕರ ಸಂವಾದವೋ ಒಟ್ಟಿನಲ್ಲಿ ಶರದ್ ಪವಾರ್ ಮಾತ್ರ ರಾಷ್ಟ್ರ ರಾಜಕಾರಣದಲ್ಲಿ  ಒಂದಷ್ಟು ಬಿಸಿಬಿಸಿ ರಾಜಕೀಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದ್ದಾರೆ.

 -ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...