Homeಚಳವಳಿಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಒಂದು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ನ್ಯಾಯಾಲಯವು ಮಂಗಳವಾರ ಖುಲಾಸೆಗೊಳಿಸಿದೆ. 2019 ರಲ್ಲಿ ಅಸ್ಸಾಂನಲ್ಲಿ ನಡೆದ ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಅವರ ವಿರುದ್ದ ಪ್ರಕರಣಗಳು ದಾಖಲಾಗಿದ್ದವು. ಆದರೆ ಅವರು ಜೈಲಿನಲ್ಲಿದ್ದುಕೊಂಡೆ ಇತ್ತೀಚೆಗೆ ಅಸ್ಸಾಂನಲ್ಲಿ ನಡೆದ ಚುನಾವಣೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಎನ್‌ಐಎ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದು, ಒಂದು ಐಪಿಸಿ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ (ಯುಎಪಿಎ) ಯ ಹಲವಾರು ವಿಭಾಗಗಳ ಅಡಿಯಲ್ಲಿ ದಿಬ್ರುಗಡದ ಚಾಬುವಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇನ್ನುಂದು ಗುವಾಹಟಿಯ ಚಾಂದಮರಿಯಲ್ಲಿ ಪ್ರಕರಣದಲ್ಲಿ ದಾಖಲಾಗಿತ್ತು. ಪ್ರಸ್ತುತ ಚಾಬುವಾ ಪ್ರಕರಣವನ್ನು ಖುಲಾಸೆಗೊಳಿಸಲಾಗಿದ್ದು, ಮತ್ತೊಂದು ಪ್ರಕರಣ ಮುಂದುವರಿಯಲಿದೆ.

ಇದನ್ನೂ ಓದಿ: ಪರಿಸರ ಚಳವಳಿ, ಸಿಎಎ ವಿರೋಧಿ ಹೋರಾಟಗಳ ಗಟ್ಟಿ ದನಿ ಅಖಿಲ್ ಗೊಗೋಯ್

ಅಪರಾಧ ಪಿತೂರಿ, ದೇಶದ್ರೋಹ, ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ರಾಷ್ಟ್ರೀಯ ಸಮಗ್ರತೆಗೆ ವಿರುದ್ಧವಾದ ಪ್ರತಿಪಾದನೆಗಳು ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ಇತ್ಯಾದಿ ಪ್ರಕರಣಗಳು ಅವರ ಮೇಲೆ ದಾಖಲಾಗಿದ್ದವು.

“ಚಾಬುವಾ ಪ್ರಕರಣದ ವಿಚಾರಣೆ ಮುಗಿದಿದೆ. ಅಖಿಲ್ ಗೊಗೊಯ್ ಮತ್ತು ಇತರ ಇಬ್ಬರು ತಪ್ಪು ಮಾಡಿದ್ದಾರೆ ಎಂದು ಸಾಬೀತುಪಡಿಸಲು ಎನ್‌ಐಎ ವಿಫಲವಾದ ಕಾರಣ ಅವರನ್ನು ಪ್ರಕರಣದಿಂದ ಖುಲಾಸೆ ಮಾಡಲಾಗಿದೆ” ಎಂದು ಗೊಗೊಯಿ ಪರ ವಕೀಲ ಕೃಷ್ಣ ಅಖಿಲ್ ಗೊಗೊಯ್‌‌ ಪತ್ರಕರ್ತರಿಗೆ ತಿಳಿಸಿದ್ದಾರೆ.

ಅಸ್ಸಾಮಿನ ಹೆಸರಾಂತ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (KMSS)ಯ ನಾಯಕರಾದ ಅಖಿಲ್ ಗೊಗೋಯ್ ಅವರನ್ನು ಜೊರ್‌ಹಾಟ್‌ನಲ್ಲಿ 2019ರ ಡಿಸೆಂಬರ್ 12ರ ಸಂಜೆ ಬಂಧಿಸಲಾಗಿತ್ತು. ಆಗಿನಿಂದ ಅವರು ಸೆರೆವಾಸ ಅನುಭವಿಸುತ್ತಲೆ ಇದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...