Homeಮುಖಪುಟಬಿಜೆಪಿಯ ಮೌನದಿಂದ ನೋವಾಗುತ್ತಿದೆ: ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್

ಬಿಜೆಪಿಯ ಮೌನದಿಂದ ನೋವಾಗುತ್ತಿದೆ: ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್

- Advertisement -
- Advertisement -

ತಮ್ಮ ಪಕ್ಷದೊಳಗಿನ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿರುವಾಗ ಬಿಜೆಪಿಯು ಮೌನವಹಿಸಿದೆ. ಬಿಜೆಪಿಯ ಮೌನದಿಂದ ನನಗೆ ನೋವಾಗುತ್ತಿದೆ ಎಂದು ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಿಜೆಪಿಯೊಂದಿಗಿನ ಸಂಬಂಧವು ಏಕಪಕ್ಷೀಯವಾಗಿರಲು ಸಾಧ್ಯವಿಲ್ಲ. ಹೀಗೆ ನನ್ನನ್ನು ಮೂಲೆಗೆ ತಳ್ಳುವ ಪ್ರಯತ್ನ ನಡೆದರೆ, ಮುಂದಿನ ರಾಜಕೀಯ ಹೆಜ್ಜೆಗಳ ಬಗ್ಗೆ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸುತ್ತೇನೆ ಎಂದು ಮಂಗಳವಾರ ಹೇಳಿದ್ದಾರೆ.

ಚಿರಾಗ್ ಪಾಸ್ವಾನ್ ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ, ’ನನ್ನ ತಂದೆ ರಾಮ್ ವಿಲಾಸ್ ಪಾಸ್ವಾನ್ ಮತ್ತು ನಾನು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಬಂಡೆಯಂತೆ ನಿಂತು ಬೆಂಬಲ ನೀಡಿದ್ದೇವೆ. ಆದರೆ, ಈ ಕಷ್ಟದ ಸಮಯದಲ್ಲಿ ಬಿಜೆಪಿಯ ಹಸ್ತಕ್ಷೇಪವನ್ನು ಬಯಸಿದಾಗ ಅದು ಸಿಗಲಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಪ್ರಧಾನಿ ಮೋದಿ ಅವರ ಮೇಲಿ ನಂಬಿಕೆ ಇದೆ ಎಂದಿರುವ ಪಾಸ್ವಾನ್, “ಆದರೆ ನೀವು ಮೂಲೆ ಗುಂಪು ಮಾಡಿದರೇ, ಒತ್ತಡಕ್ಕೆ ತಳ್ಳಿ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿದರೆ, ಎಲ್‌ಜೆಪಿ ತನ್ನ ಜೊತೆಗೆ ಯಾರು ನಿಂತರು, ಯಾರು ನಿಲ್ಲಲಿಲ್ಲ ಎಂಬ ಆಧಾರದಲ್ಲಿ ಅದರ ಭವಿಷ್ಯದ ಬಗ್ಗೆ ಯೋಚಿಸುತ್ತದೆ” ಎಂದು ಹೇಳಿದ್ದಾರೆ.

“ಬಿಜೆಪಿ ಮಧ್ಯಸ್ಥಿಕೆ ವಹಿಸಿ ಪಕ್ಷದ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ. ಆದರೆ, ಅವರ ಮೌನದಿಂದ ಖಂಡಿತವಾಗಿಯೂ ನೋವುಂಟಾಗಿದೆ” ಎಂದು ಹೇಳಿದ್ದಾರೆ. ಲೋಕ ಜನಶಕ್ತಿ ಪಕ್ಷದ ಬಿಕ್ಕಟ್ಟು ಪ್ರಾದೇಶಿಕ ಪಕ್ಷದ ಆಂತರಿಕ ವಿಷಯವಾಗಿದೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷವು ತಮ್ಮ ಪಕ್ಷವನ್ನು ವಿಭಜಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ. ಇಂತಹ ಕೆಲಸ ಮಾಡಿರುವ ಇತಿಹಾಸವನ್ನು ಅವರ ಪಕ್ಷ ಹೊಂದಿದೆ ಎಂದು ಚಿರಾಗ್ ಪಾಸ್ವಾನ್ ಆರೋಪಿಸಿದ್ದಾರೆ.

ಲೋಕ ಜನಶಕ್ತಿ ಪಕ್ಷದ ನಿಯಂತ್ರಣಕ್ಕಾಗಿ ನಡೆಯುತ್ತಿರುವ ಜಗಳದ ಮಧ್ಯೆ, ಮುಂದಿನ ತಿಂಗಳು ತನ್ನ ತಂದೆಯ ಜನ್ಮ ದಿನವಾದ ಜುಲೈ 5 ರಂದು ಹಾಜಿಪುರದಿಂದ ‘ಆಶೀರ್ವಾದ್ ಯಾತ್ರೆ’ ಆರಂಭಿಸಲು ನಿರ್ಧರಿಸಲಾಗಿದೆ. “ಆಶೀರ್ವಾದ ಯಾತ್ರೆ ಬಿಹಾರದ ಎಲ್ಲಾ ಜಿಲ್ಲೆಗಳ ಮೂಲಕ ಹಾದುಹೋಗಲಿದೆ.ನನ್ನ ತಂದೆ ಮತ್ತು ಚಿಕ್ಕಪ್ಪ ಇನ್ನು ನನ್ನೊಂದಿಗೆ ಇಲ್ಲ. ನಮಗೆ ಜನರಿಂದ ಹೆಚ್ಚಿನ ಪ್ರೀತಿ ಮತ್ತು ಆಶೀರ್ವಾದ ಬೇಕಾಗುತ್ತದೆ” ಎಂದು ಚಿರಾಗ್ ಪಾಸ್ವಾನ್ ಹೇಳಿದ್ದರು.


ಇದನ್ನೂ ಓದಿ: ಮೋದಿ ಮೆಚ್ಚಿಸಿ, ಕುರ್ಚಿ ಉಳಿಸಿಕೊಳ್ಳಲು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ರೂ. ಸುರಿಯುತ್ತಿರುವ ಯಡಿಯೂರಪ್ಪ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...