Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...