Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...