Homeಮುಖಪುಟಸುದ್ದಿ ಮೇಲಿನ ನಂಬಿಕೆ - 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

ಸುದ್ದಿ ಮೇಲಿನ ನಂಬಿಕೆ – 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

- Advertisement -
- Advertisement -

ಸುದ್ದಿಗಳ ಮೇಲಿನ ನಂಬಿಕೆ ಜಾಗತಿಕವಾಗಿ ಸರಾಸರಿ ಬೆಳೆದಿದೆ ಎಂದು 2021 ರ ಡಿಜಿಟಲ್ ನ್ಯೂಸ್ ವರದಿಯ ಭಾಗವಾಗಿ 46 ದೇಶಗಳಲ್ಲಿ ನಡೆಸಿದ ಸಮೀಕ್ಷೆ ತಿಳಿಸಿದೆ. ಆದರೆ ಈ ಪಟ್ಟಿಯಲ್ಲಿ ಭಾರತ 31 ನೇ ಸ್ಥಾನದಲ್ಲಿದೆ ಎಂದು ತಿಳಿದು ಬಂದಿದೆ. ರಾಯಿಟರ್ಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸ್ಟಡಿ ಆಫ್ ಜರ್ನಲಿಸಂ ಮತ್ತು ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂ ಸಹಯೋಗದೊಂದಿಗೆ ಈ ಸಮೀಕ್ಷಯನ್ನು ನಡೆಸಿತ್ತು.

ವಿವಿಧ ದೇಶಗಳಲ್ಲಿ ಸುದ್ದಿಗಳನ್ನು ಹೇಗೆ ಬಳಸುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಮಾಡಲಾಗಿರುವ 46 ದೇಶಗಳ ಮಾಧ್ಯಮ ಮಾರುಕಟ್ಟೆಯ ಆನ್‌ಲೈನ್ ಸಮೀಕ್ಷೆಯನ್ನು ಇದು ಆಧರಿಸಿದೆ. ಈ ವರ್ಷದ ವರದಿಯು ಸುದ್ದಿಯಲ್ಲಿನ ನಂಬಿಕೆ, ಸುದ್ದಿ ಪ್ರಕಾಶಕರ ಮೇಲೆ ಸಾಂಕ್ರಾಮಿಕ ಪ್ರೇರಿತ ಆರ್ಥಿಕ ಒತ್ತಡ, ತಪ್ಪು ಮಾಹಿತಿ ಮತ್ತು ಕೊರೊನಾ ಹಾಗೂ ಸಾರ್ವಜನಿಕರಲ್ಲಿ ಡಿಜಿಟಲ್ ಸುದ್ದಿ ಬಳಕೆಯ ಇತರ ಅಂಶಗಳನ್ನು ಕೇಂದ್ರೀಕರಿಸಿದೆ.

ಭಾರತವು ಪ್ರಬಲ ಮೊಬೈಲ್ ಕೇಂದ್ರಿತ ಮಾಧ್ಯಮ ಮಾರುಕಟ್ಟೆಗಳಲ್ಲಿ ಒಂದಾಗಿದೆ. ದೇಶದ 73% ರಷ್ಟು ಜನರು ಸ್ಮಾರ್ಟ್‌ಫೋನ್‌ಗಳ ಮೂಲಕ ಸುದ್ದಿಗಳನ್ನು ನೋಡುತ್ತಾರೆ ಎಂದು ಸಮೀಕ್ಷೆಯು ಹೇಳಿದೆ. ಒಟ್ಟಾರೆಯಾಗಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ 82% ಜನರ ಸುದ್ದಿ ಮೂಲ ಆನ್‌ಲೈನ್ ಆಗಿದೆ, ಇದರಲ್ಲಿ ಸಾಮಾಜಿಕ ಜಾಲತಾಣದಲೇ 63% ಸಾಮಾಜಿಕ ಮಾಧ್ಯಮಗಳ ಮೂಲಕವೆ ಸುದ್ದಿಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ‘ಗಾಂಪರ ಗುರು’, ರಾಜ್ಯ ಬಿಜೆಪಿ ಗಾಂಪರ ಗುಂಪು!: ಕಾಂಗ್ರೆಸ್ ಲೇವಡಿ

ವಾಟ್ಸಾಪ್ ಮತ್ತು ಯೂಟ್ಯೂಬ್‌ ಉನ್ನತ ಸಾಮಾಜಿಕ ಜಾಲತಾಣದ ಪ್ಲಾಟ್‌ಫಾರ್ಮ್‌ಗಳಾಗಿದ್ದು, ಈ ಪ್ಲ್ಯಾಟ್‌ಫಾರ್ಮ್‌ಗಳಲ್ಲಿ ಅತಿರೇಕದ ತಪ್ಪು ಮಾಹಿತಿ ಸಿಗುತ್ತಿದೆ ಎಂಬ ಕಳವಳಗಳ ನಡುವೆಯು 53% ಜನರು ತಮ್ಮ ಸುದ್ದಿಯನ್ನು ಪಡೆಯುತ್ತಾರೆ ಸಮೀಕ್ಷೆ ಹೇಳಿದೆ.

46 ದೇಶಗಳ ಒಟ್ಟು ಮಾದರಿಗಳಲ್ಲಿ 44% ಜನರು ಹೆಚ್ಚಿನ ಸಮಯ ಸುದ್ದಿಯನ್ನು ನಂಬುತ್ತಾರೆ. ಆದರೆ ಭಾರತದಲ್ಲಿ 38% ಜನರು ಒಟ್ಟಾರೆ ಸುದ್ದಿಯನ್ನು ನಂಬಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಫಿನ್‌‌ಲ್ಯಾಂಡ್‌‌ನ 65% ರಷ್ಟು ಜನರು ಸುದ್ದಿಗಳನ್ನು ನಂಬುತ್ತಾರೆ ಎಂದು ತಿಳಿದು ಬಂದಿದ್ದು, ಈ ಮೂಲಕ ಇದು ಮೊದಲ ಸ್ಥಾನದಲ್ಲಿ ಇದೆ. ಆದರೆ ಅಮೆರಿಕಾ ಅತ್ಯಂತ ಕಡಿಮೆ ಮಟ್ಟದ ನಂಬಿಕೆಯನ್ನು ಹೊಂದಿದೆ. ಅಮೆರಿಕಾದಲ್ಲಿ ಕೇವಲ 29% ಜನರು ಸುದ್ದಿಗಳನ್ನು ನಂಬುತ್ತಾರೆ.

ಭಾರತದಲ್ಲಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರು ಮುಖ್ಯವಾಗಿ ಇಂಗ್ಲಿಷ್ ಮಾತನಾಡುವವರು, ಆನ್‌ಲೈನ್ ಸುದ್ದಿ ಬಳಕೆದಾರರು, ಹೆಚ್ಚು ಶ್ರೀಮಂತರು, ಕಿರಿಯರು, ವಿದ್ಯಾವಂತರು ಮತ್ತು ನಗರದಲ್ಲಿ ವಾಸಿಸುವವರಾಗಿದ್ದಾರೆ. ಇವರು ದೇಶದ ಮಾಧ್ಯಮ ಮಾರುಕಟ್ಟೆಯ ಒಂದು ಸಣ್ಣ ಭಾಗವನ್ನಷ್ಟೇ ಪ್ರತಿನಿಧಿಸುತ್ತಾರೆ. ಈ ಸಂಶೋಧನೆಗಳನ್ನು ರಾಷ್ಟ್ರವನ್ನು ಪ್ರತಿನಿಧಿಸುವಂತೆ ಪರಿಗಣಿಸಬಾರರದು ಎಂದು ಸಮೀಕ್ಷೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸಂಸದೆ ನವನೀತ್ ಕೌರ್‌ ಜಾತಿ ಪ್ರಮಾಣ ಪತ್ರ ರದ್ದತಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...