Homeಮುಖಪುಟಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

- Advertisement -
- Advertisement -

ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಮಥುರಾದಲ್ಲಿನ ಈದ್ಗಾ ಮಸೀದಿ ತೆರವುಗೊಳಿಸಬೇಕು ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಮಸೀದಿಯ ನಿರ್ವಹಣಾ ಸಮಿತಿಯು ತಾವೇ ಈದ್ಗಾ ಮಸೀದಿಯನ್ನು ನೆಲಸಮ ಮಾಡಲು ಒಪ್ಪಿದರೇ ದೇವಾಲಯದ ಆವರಣದಲ್ಲಿರುವ ಭೂಮಿಗಿಂತ ಬೇರೆ ಕಡೆ ಹೆಚ್ಚಿನ ಭೂಮಿಯನ್ನು ನೀಡುತ್ತೇವೆ ಎಂದು ಹಿಂದೂ ಸಂಘಟನೆಯೊಂದು ಮಥುರಾ ನ್ಯಾಯಾಲಯಕ್ಕೆ ತಿಳಿಸಿದೆ.

ಮಥುರಾ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯಕ್ಕೆ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ಆಂದೋಲನ ಸಮಿತಿ ಸಲ್ಲಿಸಿರುವ ಅರ್ಜಿಯಲ್ಲಿ ಮಸೀದಿಯನ್ನು ಕೆಡವಿದರೇ, ನೆಲಸಮ  ಮಾಡಿದರೇ, ಮಸೀದಿ ನಿರ್ವಹಣಾ ಸಮಿತಿಗೆ ದೇವಾಲಯ ಇರುವ ಪಟ್ಟಣ ಬಿಟ್ಟು, ಹೊರ ಭಾಗದಲ್ಲಿ ಮಸೀದಿ ನಿರ್ಮಿಸಲು ಹೆಚ್ಚಿನ ಭೂಮಿ ನೀಡುವುದಾಗಿ ತಿಳಿಸಿದೆ.

ಮಸೀದಿಯ ನಿರ್ವಹಣಾ ಸಮಿತಿಯು ಅಸ್ತಿತ್ವದಲ್ಲಿರುವ ಶಾಹಿ ಮಸೀದಿ ಈದ್ಗಾವನ್ನು ಸ್ವಯಂಪ್ರೇರಣೆಯಿಂದ ನೆಲಸಮಗೊಳಿಸಿ, ಭೂಮಿಯನ್ನು ಕೃಷ್ಣ ಜನ್ಮಭೂಮಿ ಮುಕ್ತಿ ಆಂದೋಲನ ಸಮಿತಿಗೆ ಒಪ್ಪಿಸಿದರೆ, ಮಸೀದಿ ಇರುವ ಜಾಗಕ್ಕಿಂತ ದೊಡ್ಡದಾದ ಭೂಮಿಯನ್ನು ನೀಡಲಾಗುವುದು ಎಂದು ಸಮಿತಿ ಅಧ್ಯಕ್ಷ ವಕೀಲ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಹಿರಿಯ ಸಿವಿಲ್ ನ್ಯಾಯಾಧೀಶರು ರಜೆಯಲ್ಲಿದ್ದ ಕಾರಣ ಅರ್ಜಿಯನ್ನು ಸಿವಿಲ್ ನ್ಯಾಯಾಧೀಶ II ಅನುಪಮ್ ಸಿಂಗ್ ಅವರಿಗೆ ಸಲ್ಲಿಸಲಾಗಿದೆ.

ದೇವಾಲಯದ ಸಮೀಪದಿಂದ ಮಸೀದಿಯನ್ನು ತೆರವುಗೊಳಿಸುವಂತೆ ನ್ಯಾಯಾಲಯವನ್ನು ಕೋರಿ ಹಿಂದೂ ಸಂಘಟನೆಯ ಪರ ವಕೀಲರು ಸಲ್ಲಿಸಿದ್ದ ಅರ್ಜಿ 2020 ರ ಡಿಸೆಂಬರ್‌ನಿಂದ ನ್ಯಾಯಾಲಯದಲ್ಲಿ ಬಾಕಿ ಇದೆ. ಈಗ ಸಮಿತಿಯು ಸಂಧಾನಕ್ಕೆ ಪ್ರಯತ್ನಿಸುತ್ತಿದೆ.

ಭಗವಾನ್ ಶ್ರೀ ಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದಲ್ಲಿ 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. ಮಸೀದಿಯನ್ನು ತೆರವುಗೊಳಿಸಬೇಕೆಂದು ಕೋರಿ ಮಥುರಾದಲ್ಲಿ ವಿವಿಧ ಸಿವಿಲ್ ನ್ಯಾಯಾಲಯಗಳಲ್ಲಿ ಹಲವಾರು ಅರ್ಜಿಗಳು ಮತ್ತು ಮನವಿಗಳು ಬಾಕಿ ಉಳಿದಿವೆ. ಮಥುರಾದ ಸಿವಿಲ್ ನ್ಯಾಯಾಲಯ ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಕೆಲವು ಅರ್ಜಿಗಳನ್ನು ವಜಾಗೊಳಿಸಿತ್ತು.


ಇದನ್ನೂ ಓದಿ: ಮಾನನಷ್ಟ ಪ್ರಕರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ 2 ಕೋಟಿ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...