Homeಕರೋನಾ ತಲ್ಲಣಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ...

ಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ ದಿಢೀರ್ ಇಳಿಕೆ!

ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ.

- Advertisement -
- Advertisement -

ಭಾರತದಲ್ಲಿ ಜೂನ್ 21 ರ ಸೋಮವಾರದಿಂದ ಲಸಿಕೆ ಅಭಿಯಾನಕ್ಕೆ ತೀವ್ರ ವೇಗವನ್ನು ನೀಡಲಾಗಿತ್ತು. ವ್ಯಾಪಕ ವ್ಯಾಕ್ಸಿನೇಶನ್ ಪ್ರಕ್ರಿಯೆಯ ಮೂಲಕ ಕೊರೋನಾ ವಿರುದ್ಧದ ಹೋರಾಟಕ್ಕೆ ವೇಗವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಹಾಗೇ ಜೂನ್‌ 21 ರ ಸೋಮವಾರ ದೇಶಾದ್ಯಂತ 88 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ಒಂದು ದಿನದಲ್ಲಿ ಅತಿಹೆಚ್ಚು ವ್ಯಾಕ್ಸಿನೇಶನ್‌ ನೀಡಿದ ದಾಖಲೆಯೂ ನಿರ್ಮಾಣವಾಗಿತ್ತು. ಜೂನ್ 21 ರಂದು ಗರಿಷ್ಠ ಮಟ್ಟ ತಲುಪಿದ್ದ ವ್ಯಾಕ್ಸಿನೇಶನ್ ಪ್ರಕ್ರಿಯೆ ಮಂಗಳವಾರದ ಹೊತ್ತಿಗೆ ಮತ್ತೆ ಕುಸಿತಗೊಂಡಿದೆ. ಮಂಗಳವಾರ ದೇಶದಲ್ಲಿ 54.22 ಲಕ್ಷ ಡೋಸ್‌ಗಳಷ್ಟು ಮಾತ್ರ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿನ ದಿಢೀರ್ ಕುಸಿತ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ದೊಡ್ಡ ಮಟ್ಟದ ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ದೀರ್ಘಾವಧಿಯವರೆಗೆ ಕಾಯ್ದುಕೊಂಡು ಹೋಗುವುದು ಸಾಧ್ಯವೇ ಎಂಬ ಅನುಮಾನ ಹುಟ್ಟತೊಡಗಿದೆ. ನಮ್ಮ ಲಸಿಕೆ ಅಭಿಯಾನ ಅರಂಭಿಕ ಶೂರತ್ವ ಮಾತ್ರವೇ ಅಥವಾ ನಿಯಮಿತವಾಗಿ ದೊಡ್ಡ ಮಟ್ಟದಲ್ಲಿ ವ್ಯಾಕ್ಸೀನ್‌ಗಳನ್ನು ನಿಡುವಷ್ಟು ಉತ್ಪಾದನೆ ದೇಶದಲ್ಲಿ ಇದೆಯೆ ಎಂಬ ಪ್ರಶ್ನೆಯನ್ನು ಅನೇಕರು ಎತ್ತಿದ್ದಾರೆ.

ಜೊತೆಗೆ ಜೂನ್ 21 ರ ಸೋಮವಾರದ ಅತಿ ಹೆಚ್ಚು ಮ್ಯಾಜಿಕ್ ನಂಬರ್‌ಗಳನ್ನು ತಲುಪಲು ರಾಜ್ಯ ಸರ್ಕಾರಗಳು ಈ ಹಿಂದಿನ ಅನೇಕ ದಿನಗಳ ಕಾಲ ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ದಾಸ್ತಾನು ಮಾಡಿದ್ದವು ಎಂಬ ಆರೋಪಗಳು ಕೂಡ ಕೇಳಿಬಂದಿದೆ. ಸೋಮವಾರ ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಲಾದ ಮೊದಲ 10 ರಾಜ್ಯಗಳಲ್ಲಿ ಬಿಜೆಪಿ ಆಡಳಿತದ ರಾಜ್ಯಗಳೇ ಇವೆ. ಜೂನ್ 21 ರಂದು ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರದ ಹೊತ್ತಿಗೆ ಲಸಿಕೆ ಅಭಿಯಾನ ಸೋಮವಾರದ ಅರ್ಧದಷ್ಟಕ್ಕೆ ಬಂದಿದೆ.

2021ರ ಅಂತ್ಯಕ್ಕೆ ದೇಶದಲ್ಲಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಕೆಂದ್ರ ಸರ್ಕಾರ ಇಟ್ಟುಕೊಂಡಿದೆ. ಮತ್ತು ಅದೇ ಗುರಿಯನ್ನು ಸಾಧಿಸಲಿಕ್ಕೆ ರಾಜ್ಯಗಳ ಮೇಲೆಯೂ ಒತ್ತಡ ಹಾಕುತ್ತಿದೆ. ಕೇಂದ್ರ ಸರ್ಕಾರದ ವ್ಯಾಕ್ಸಿನೇಶನ್ ಗುರಿಯನ್ನು ತಲುಪಲು ದಿನ ನಿತ್ಯ ನಿಯಮಿತವಾಗಿ 97 ಲಕ್ಷ ಡೋಸ್ ವ್ಯಾಕ್ಸೀನ್‌ಗಳನ್ನು ನೀಡಬೇಕು. ಸಧ್ಯ ದೇಶದಲ್ಲಿ ಲಭ್ಯವಿರುವ ವ್ಯಾಕ್ಸಿನ್‌ ಪೂರೈಕೆಯನ್ನು ಗಮನಿಸಿದರೆ ವರ್ಷಾಂತ್ಯದ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸೀನ್‌ ನೀಡುವ ಕೇಂದ್ರ ಸರ್ಕಾರದ ಗುರಿ ಸಾಧಿಸುವುದು ಅನುಮಾನವಾಗಿ ಕಾಣುತ್ತಿದೆ.

ದೇಶದಲ್ಲಿ ದಿನನಿತ್ಯ ಅಗತ್ಯವಿರುವ ವ್ಯಾಕ್ಸಿನ್‌ಗಳನ್ನು ಪೂರೈಸುವ ಸಾಮರ್ಥ್ಯ ತನಗಿದೆ ಎಂದು ಕೇಂದ್ರ ಸರ್ಕಾರ ಪದೇ ಪದೇ ಹೇಳುತ್ತಲೇ ಬರುತ್ತಿದೆ. ಕೇಂದ್ರ ಸರ್ಕಾರ ದಿನಕ್ಕೆ 1 ಕೋಟಿ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಹೊಂದಿದೆ. ಸರ್ಕಾರಕ್ಕೆ ದಿನಕ್ಕೆ 1.25 ಕೋಟಿ ವ್ಯಾಕ್ಸಿನ್‌ಗಳನ್ನು ದಾಸ್ತಾನು ಮಾಡಿ ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನ್ಯಾಷನಲ್ ಅಡ್ವೈಸರಿ ಗ್ರೂಪ್ ಆನ್ ಇಮ್ಯುನೈಸೇಶನ್ (NTAGI) ಅಧ್ಯಕ್ಷ  ಡಾ. ಎನ್‌.ಕೆ. ಅರೋರಾ ಹೇಳುತ್ತಾರೆ. ಆದರೆ ಇದುವರೆಗೆ ಡಾ. ಅರೋರಾ ಅವರ ಮಾತನ್ನು ಸಾಬೀತು ಪಡಿಸುವ ಅಂಕಿ ಅಂಶಗಳು ಎಲ್ಲೂ ಲಭ್ಯವಾಗಿಲ್ಲ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ನಾವು ಮುಂದಿನ 15 ದಿನಗಳ ವ್ಯಾಕ್ಸಿನ್‌ ಬೇಡಿಕೆಯನ್ನು ಮುಂಚಿತವಾಗಿ ನೀಡುವಂತೆ ರಾಜ್ಯಗಳಿಗೆ ಕೇಳಿದ್ದೇವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸುತ್ತಾರೆ.

ಮಂಗಳವಾರದ ರಾಜ್ಯವಾರು ವ್ಯಾಕ್ಸಿನೇಶನ್ ಅಂಕಿ ಅಂಶವನ್ನು ನೋಡಿದರೆ ಅತ್ಯಂತ ಕಳವಳಕಾರಿಯಾಗಿದೆ. ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ. ಹಾಗೇ ಸೋಮವಾರ ತೆರೆಯಲಾಗಿದ್ದ ಬಹುತೇಕ ವ್ಯಾಕ್ಸೀನೇಷನ್ ಸೆಂಟರ್ ಗಳನ್ನು ಮುಚ್ಚಲಾಗಿದೆ. ಹಾಗೇ ಹಿಂದೆ ಮಧ್ಯ ಪ್ರದೇಶದಲ್ಲಿ ನಿತ್ಯ 5000 ಕ್ಕಿಂತ ಕಡಿಮೆ ವ್ಯಾಕ್ಸೀನ್‌ಗಳನ್ನು ನೀಡಿದ ಉದಾಹರಣೆಗಳಿಲ್ಲ. ಆದರೆ ಜೂನ್ 20ರ ಭಾನುವಾರ ಮಾತ್ರ ಮಧ್ಯ ಪ್ರದೇಶದಲ್ಲಿ ಕೇವಲ  692 ಡೋಸ್ ವ್ಯಾಕ್ಸೀನ್‌ಗಳನ್ನು ನೀಡಲಾಗಿತ್ತು. ಮಧ್ಯ ಪ್ರದೇಶದ ಇದುವರೆಗಿನ ಅತಿಹೆಚ್ಚು ವ್ಯಾಕ್ಸೀನ್‌ಗಳನ್ನು ನೀಡಿದ ದಾಖಲೆ 5 ಲಕ್ಷ ಡೊಸ್‌ಗಳಾಗಿತ್ತು. ಅದು ಜೂನ್ 14 ರಂದು. ವ್ಯಾಕ್ಸೀನೇಶನ್ ಪ್ರಕ್ರಿಯೆಯಲ್ಲಿನ ನಾಟಕೀಯ ಏರಿಕೆ-ಇಳಿಕೆಗಳು ಮಧ್ಯಪ್ರದೇಶ ಸರ್ಕಾರದತ್ತ ಬೊಟ್ಟು ಮಾಡುವಂತೆ ಮಾಡಿವೆ. ರಾಜ್ಯ ಸರ್ಕಾರ ದಿನನಿತ್ಯ ವ್ಯಾಕ್ಸಿನ್‌ಗಳನ್ನು ನೀಡದೇ ಸಂಗ್ರಹಿಸಿಟ್ಟು ಜೂನ್ 21 ರಂದು ಅತಿ ಹೆಚ್ಚು ವ್ಯಾಕ್ಸೀನ್ ವಿತರಿಸುವ ನಾಟಕವಾಡಿದೆ ಎಂದು ಅನೇಕ ನಾಯಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ : ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಕರ್ನಾಟಕದಲ್ಲಿಯೂ ಮಂಗಳವಾರದ ಹೊತ್ತಿಗೆ ವ್ಯಾಕ್ಸಿನೇಶನ್‌ ನಂಬರ್‌ಗಳು ಗಣನೀಯವಾಗಿ ಇಳಿಮುಖವಾಗಿದೆ. ಸೋಮವಾರ 11 ಲಕ್ಷ ಡೋಸ್‌ಗಳಷ್ಟು ವ್ಯಾಕ್ಸೀನ್ ನೀಡಲಾಗಿದ್ದರೆ ಮಂಗಳವಾರ ಜೂನ್ 22 ರಂದು ಈ ಸಂಖ್ಯೆ 3.8 ಲಕ್ಷಕ್ಕೆ ಬಂದು ತಲುಪಿದೆ. ಮಧ್ಯ ಪ್ರದೇಶ, ಕರ್ನಾಟಕ, ಹರಿಯಾಣಗಳಲ್ಲಿ ಮಂಗಳವಾರ ನಾಟಕೀಯ ರೀತಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ಇದು ದೇಶದ ವ್ಯಾಕ್ಸೀನೇಶನ್ ಅಂಕಿ ಅಂಶದ ಕುಸಿತಕ್ಕೂ ಕಾರಣವಾಗಿದೆ.

ಉತ್ತರ ಪ್ರದೇಶ ರಾಜ್ಯವೊಂದರಲ್ಲಿ ಮಾತ್ರ ಸೋಮವಾರಕ್ಕಿಂತ ಮಂಗಳವಾರ ಹೆಚ್ಚು ವ್ಯಾಕ್ಸೀನ್ ಡೋಸ್‌ಗಳನ್ನು ನೀಡಲಾಗಿದೆ. ಸೋಮವಾರ ಸುಮಾರು 7ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಲಾಗಿದ್ದರೆ ಮಂಗಳವಾರ 8 ಲಕ್ಷ ವ್ಯಾಕ್ಸಿನ್‌ ಡೋಸ್‌ಗಳನ್ನು ನೀಡಲಾಗಿದೆ.

ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಮಂಗಳವಾರದ ದಿಢೀರ್ ಇಳಿಕೆಯ ಕುರಿತು ವಿವಿಧ ರಾಜಕೀಯ ಪಕ್ಷದ ನಾಯಕರು ಪ್ರತಿಕ್ರಿಯಿಸಿದ್ದು ಕೇಂದ್ರ ಸರ್ಕಾರ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯಿಲ್ಲ ಎಂದು ಆರೋಪಿಸಿದ್ದಾರೆ. ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಸಚಿವ ಪಿ. ಚಿದಂಬರಂ ಪ್ರತಿಕ್ರಿಯಿಸಿ, “ಸೋಮವಾರದ ವ್ಯಾಕ್ಸಿನೇಶನ್ ದಾಖಲೆಯ ಹಿಂದಿನ ಸತ್ಯ ಮಂಗಳವಾರ ಬಹಿರಂಗಗೊಂಡಿದೆ. ಭಾನುವಾರ ವ್ಯಾಕ್ಸಿನೇಶನ್ ನಿಲ್ಲಿಸಿ, ಸೋಮವಾರ ವಿಶ್ವದಾಖಲೆ ಮಾಡಿ, ಮತ್ತೆ ಮಂಗಳವಾರ ಹಿಂದಿನ ಸ್ಥಿತಿಗೆ ತಲುಪುವುದು. ಇದೇ ಕೇಂದ್ರ ಸರ್ಕಾರದ ವ್ಯಾಕ್ಸೀನ್ ನೀತಿ” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಹೋರಾಟಗಾರ ಯೋಗೆಂದ್ರ ಯಾದವ್ ಅವರು ಜೂನ್ 18 ರಿಂದ ಜೂನ್ 22ರ ವರೆಗಿನ ರಾಜ್ಯವಾರು ವ್ಯಾಕ್ಸಿನೇಶನ್ ಕುರಿತು ಅಂಕಿ ಸಂಖ್ಯೆಗಳ ಸಮೇತ ತೋರಿಸಿ ವ್ಯಾಕ್ಸಿನೇಶನ್ ಅನ್ನು ಒಂದು ದಿನದ ಇವೆಂಟ್‌ ಆಗಿ ನಡೆಸುವ ಕೆಲಸವನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೂಢಿಯಾಗಿಸಿಕೊಂಡಿವೆ ಎಂದು ಅಂಕಿ ಅಂಶಗಳ ಸಮೇತ ಟ್ವೀಟ್ ಮಾಡಿದ್ದಾರೆ.

ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಮಂಗಳವಾರದದ ವ್ಯಾಕ್ಸಿನೇಶನ್ ನಂಬರ್‌ಗಳ ಇಳಿಕೆ ಕುರಿತು ತೀವ್ರವಾಗಿ ಪ್ರತಿಕ್ರಿಯಿಸಿದ್ದು ಲಸಿಕೆ ಅಭಿಯಾನವನ್ನು ಪ್ರಚಾರ ಆಂದೋಲನವಾಗಿ ನಡೆಸುವುದನ್ನು ಬಿಟ್ಟು ದೇಶದಲ್ಲಿ ನಿತ್ಯ ಕನಿಷ್ಠ 80 ಲಕ್ಷ ವ್ಯಾಕ್ಸಿನ್‌ಗಳನ್ನು ನಿಯಮಿತವಾಗಿ ನೀಡುವಂತೆ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ವ್ಯಾಕ್ಸಿನ್‌ ನೀತಿಯಲ್ಲಿನ ಪಾರದರ್ಶಕತೆಯ ಕೊರತೆ, ಅಸಮರ್ಪಕ ಯೋಜನೆ, ಪೂರೈಕೆಯಲ್ಲಿನ ವ್ಯತ್ಯಗಳ ಕಾರಣದಿಂದ 2021 ಅಂತ್ಯಕ್ಕೆ ದೇಶದ ಜನರನ್ನು ವ್ಯಾಕ್ಸಿನೇಟ್ ಮಾಡುವ ಕೇಂದ್ರ ಸರ್ಕಾರದ ಗುರಿಯ ಸಾಧನೆ ಮಂಕಾಗತೊಡಗಿದೆ. ಒಂದು ವೇಳೆ ಕೇಂದ್ರ ಸರ್ಕಾರ ಈ ವರ್ಷಾಂತ್ಯಕ್ಕೆ ದೇಶದ ಎಲ್ಲಾ ಜನರಿಗೆ ಲಸಿಕೆ ಕೊಡುವ ನಿಜವಾದ ಪ್ರಯತ್ನಗಳನ್ನು ಮಾಡುತ್ತಿರುವುದೇ ಆದರೆ ದಿನನಿತ್ಯದ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ನಿತ್ಯ ಇಷ್ಟು ಏರಿಳಿಕೆಗಳು ಹೇಗೆ ಸಾಧ್ಯ ಎಂಬ ಪ್ರಶ್ನೆ ಯಕ್ಷ ಪ್ರಶ್ನೆಯಾಗಿಯೇ ಉಳಿಯುತ್ತದೆ.

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆ ಇಳಿಮುಖವಾಗುತ್ತಿರುವ ಹೊತ್ತಿನಲ್ಲಿಯೇ ಹೊಸದಾದ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಕಾಣಿಸಿಕೊಂಡು ದೇಶದಲ್ಲಿ ಆತಂಕವನ್ನು ಹುಟ್ಟಿಸಿದೆ. ಈಗ ಸಧ್ಯ ಕೊರೋನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ದೇಶದ ಮುಂದಿರುವ ಏಕೈಕ ಅಸ್ತ್ರ ವ್ಯಾಕ್ಸಿನೇಶನ್. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕವಾಗಿ ವ್ಯಾಕ್ಸಿನೇಶನ್ ಪ್ರಯತ್ನವನ್ನು ಕೈಗೊಂಡರೆ ಮಾತ್ರ ದೇಶ ಕೊರೋನಾ ವಿರುದ್ಧ ಹೋರಾಡಲು ಸಾಧ್ಯ.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...