Homeಕರೋನಾ ತಲ್ಲಣಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ...

ಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ ದಿಢೀರ್ ಇಳಿಕೆ!

ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ.

- Advertisement -
- Advertisement -

ಭಾರತದಲ್ಲಿ ಜೂನ್ 21 ರ ಸೋಮವಾರದಿಂದ ಲಸಿಕೆ ಅಭಿಯಾನಕ್ಕೆ ತೀವ್ರ ವೇಗವನ್ನು ನೀಡಲಾಗಿತ್ತು. ವ್ಯಾಪಕ ವ್ಯಾಕ್ಸಿನೇಶನ್ ಪ್ರಕ್ರಿಯೆಯ ಮೂಲಕ ಕೊರೋನಾ ವಿರುದ್ಧದ ಹೋರಾಟಕ್ಕೆ ವೇಗವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಹಾಗೇ ಜೂನ್‌ 21 ರ ಸೋಮವಾರ ದೇಶಾದ್ಯಂತ 88 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ಒಂದು ದಿನದಲ್ಲಿ ಅತಿಹೆಚ್ಚು ವ್ಯಾಕ್ಸಿನೇಶನ್‌ ನೀಡಿದ ದಾಖಲೆಯೂ ನಿರ್ಮಾಣವಾಗಿತ್ತು. ಜೂನ್ 21 ರಂದು ಗರಿಷ್ಠ ಮಟ್ಟ ತಲುಪಿದ್ದ ವ್ಯಾಕ್ಸಿನೇಶನ್ ಪ್ರಕ್ರಿಯೆ ಮಂಗಳವಾರದ ಹೊತ್ತಿಗೆ ಮತ್ತೆ ಕುಸಿತಗೊಂಡಿದೆ. ಮಂಗಳವಾರ ದೇಶದಲ್ಲಿ 54.22 ಲಕ್ಷ ಡೋಸ್‌ಗಳಷ್ಟು ಮಾತ್ರ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿನ ದಿಢೀರ್ ಕುಸಿತ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ದೊಡ್ಡ ಮಟ್ಟದ ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ದೀರ್ಘಾವಧಿಯವರೆಗೆ ಕಾಯ್ದುಕೊಂಡು ಹೋಗುವುದು ಸಾಧ್ಯವೇ ಎಂಬ ಅನುಮಾನ ಹುಟ್ಟತೊಡಗಿದೆ. ನಮ್ಮ ಲಸಿಕೆ ಅಭಿಯಾನ ಅರಂಭಿಕ ಶೂರತ್ವ ಮಾತ್ರವೇ ಅಥವಾ ನಿಯಮಿತವಾಗಿ ದೊಡ್ಡ ಮಟ್ಟದಲ್ಲಿ ವ್ಯಾಕ್ಸೀನ್‌ಗಳನ್ನು ನಿಡುವಷ್ಟು ಉತ್ಪಾದನೆ ದೇಶದಲ್ಲಿ ಇದೆಯೆ ಎಂಬ ಪ್ರಶ್ನೆಯನ್ನು ಅನೇಕರು ಎತ್ತಿದ್ದಾರೆ.

ಜೊತೆಗೆ ಜೂನ್ 21 ರ ಸೋಮವಾರದ ಅತಿ ಹೆಚ್ಚು ಮ್ಯಾಜಿಕ್ ನಂಬರ್‌ಗಳನ್ನು ತಲುಪಲು ರಾಜ್ಯ ಸರ್ಕಾರಗಳು ಈ ಹಿಂದಿನ ಅನೇಕ ದಿನಗಳ ಕಾಲ ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ದಾಸ್ತಾನು ಮಾಡಿದ್ದವು ಎಂಬ ಆರೋಪಗಳು ಕೂಡ ಕೇಳಿಬಂದಿದೆ. ಸೋಮವಾರ ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಲಾದ ಮೊದಲ 10 ರಾಜ್ಯಗಳಲ್ಲಿ ಬಿಜೆಪಿ ಆಡಳಿತದ ರಾಜ್ಯಗಳೇ ಇವೆ. ಜೂನ್ 21 ರಂದು ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರದ ಹೊತ್ತಿಗೆ ಲಸಿಕೆ ಅಭಿಯಾನ ಸೋಮವಾರದ ಅರ್ಧದಷ್ಟಕ್ಕೆ ಬಂದಿದೆ.

2021ರ ಅಂತ್ಯಕ್ಕೆ ದೇಶದಲ್ಲಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಕೆಂದ್ರ ಸರ್ಕಾರ ಇಟ್ಟುಕೊಂಡಿದೆ. ಮತ್ತು ಅದೇ ಗುರಿಯನ್ನು ಸಾಧಿಸಲಿಕ್ಕೆ ರಾಜ್ಯಗಳ ಮೇಲೆಯೂ ಒತ್ತಡ ಹಾಕುತ್ತಿದೆ. ಕೇಂದ್ರ ಸರ್ಕಾರದ ವ್ಯಾಕ್ಸಿನೇಶನ್ ಗುರಿಯನ್ನು ತಲುಪಲು ದಿನ ನಿತ್ಯ ನಿಯಮಿತವಾಗಿ 97 ಲಕ್ಷ ಡೋಸ್ ವ್ಯಾಕ್ಸೀನ್‌ಗಳನ್ನು ನೀಡಬೇಕು. ಸಧ್ಯ ದೇಶದಲ್ಲಿ ಲಭ್ಯವಿರುವ ವ್ಯಾಕ್ಸಿನ್‌ ಪೂರೈಕೆಯನ್ನು ಗಮನಿಸಿದರೆ ವರ್ಷಾಂತ್ಯದ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸೀನ್‌ ನೀಡುವ ಕೇಂದ್ರ ಸರ್ಕಾರದ ಗುರಿ ಸಾಧಿಸುವುದು ಅನುಮಾನವಾಗಿ ಕಾಣುತ್ತಿದೆ.

ದೇಶದಲ್ಲಿ ದಿನನಿತ್ಯ ಅಗತ್ಯವಿರುವ ವ್ಯಾಕ್ಸಿನ್‌ಗಳನ್ನು ಪೂರೈಸುವ ಸಾಮರ್ಥ್ಯ ತನಗಿದೆ ಎಂದು ಕೇಂದ್ರ ಸರ್ಕಾರ ಪದೇ ಪದೇ ಹೇಳುತ್ತಲೇ ಬರುತ್ತಿದೆ. ಕೇಂದ್ರ ಸರ್ಕಾರ ದಿನಕ್ಕೆ 1 ಕೋಟಿ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಹೊಂದಿದೆ. ಸರ್ಕಾರಕ್ಕೆ ದಿನಕ್ಕೆ 1.25 ಕೋಟಿ ವ್ಯಾಕ್ಸಿನ್‌ಗಳನ್ನು ದಾಸ್ತಾನು ಮಾಡಿ ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನ್ಯಾಷನಲ್ ಅಡ್ವೈಸರಿ ಗ್ರೂಪ್ ಆನ್ ಇಮ್ಯುನೈಸೇಶನ್ (NTAGI) ಅಧ್ಯಕ್ಷ  ಡಾ. ಎನ್‌.ಕೆ. ಅರೋರಾ ಹೇಳುತ್ತಾರೆ. ಆದರೆ ಇದುವರೆಗೆ ಡಾ. ಅರೋರಾ ಅವರ ಮಾತನ್ನು ಸಾಬೀತು ಪಡಿಸುವ ಅಂಕಿ ಅಂಶಗಳು ಎಲ್ಲೂ ಲಭ್ಯವಾಗಿಲ್ಲ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ನಾವು ಮುಂದಿನ 15 ದಿನಗಳ ವ್ಯಾಕ್ಸಿನ್‌ ಬೇಡಿಕೆಯನ್ನು ಮುಂಚಿತವಾಗಿ ನೀಡುವಂತೆ ರಾಜ್ಯಗಳಿಗೆ ಕೇಳಿದ್ದೇವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸುತ್ತಾರೆ.

ಮಂಗಳವಾರದ ರಾಜ್ಯವಾರು ವ್ಯಾಕ್ಸಿನೇಶನ್ ಅಂಕಿ ಅಂಶವನ್ನು ನೋಡಿದರೆ ಅತ್ಯಂತ ಕಳವಳಕಾರಿಯಾಗಿದೆ. ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ. ಹಾಗೇ ಸೋಮವಾರ ತೆರೆಯಲಾಗಿದ್ದ ಬಹುತೇಕ ವ್ಯಾಕ್ಸೀನೇಷನ್ ಸೆಂಟರ್ ಗಳನ್ನು ಮುಚ್ಚಲಾಗಿದೆ. ಹಾಗೇ ಹಿಂದೆ ಮಧ್ಯ ಪ್ರದೇಶದಲ್ಲಿ ನಿತ್ಯ 5000 ಕ್ಕಿಂತ ಕಡಿಮೆ ವ್ಯಾಕ್ಸೀನ್‌ಗಳನ್ನು ನೀಡಿದ ಉದಾಹರಣೆಗಳಿಲ್ಲ. ಆದರೆ ಜೂನ್ 20ರ ಭಾನುವಾರ ಮಾತ್ರ ಮಧ್ಯ ಪ್ರದೇಶದಲ್ಲಿ ಕೇವಲ  692 ಡೋಸ್ ವ್ಯಾಕ್ಸೀನ್‌ಗಳನ್ನು ನೀಡಲಾಗಿತ್ತು. ಮಧ್ಯ ಪ್ರದೇಶದ ಇದುವರೆಗಿನ ಅತಿಹೆಚ್ಚು ವ್ಯಾಕ್ಸೀನ್‌ಗಳನ್ನು ನೀಡಿದ ದಾಖಲೆ 5 ಲಕ್ಷ ಡೊಸ್‌ಗಳಾಗಿತ್ತು. ಅದು ಜೂನ್ 14 ರಂದು. ವ್ಯಾಕ್ಸೀನೇಶನ್ ಪ್ರಕ್ರಿಯೆಯಲ್ಲಿನ ನಾಟಕೀಯ ಏರಿಕೆ-ಇಳಿಕೆಗಳು ಮಧ್ಯಪ್ರದೇಶ ಸರ್ಕಾರದತ್ತ ಬೊಟ್ಟು ಮಾಡುವಂತೆ ಮಾಡಿವೆ. ರಾಜ್ಯ ಸರ್ಕಾರ ದಿನನಿತ್ಯ ವ್ಯಾಕ್ಸಿನ್‌ಗಳನ್ನು ನೀಡದೇ ಸಂಗ್ರಹಿಸಿಟ್ಟು ಜೂನ್ 21 ರಂದು ಅತಿ ಹೆಚ್ಚು ವ್ಯಾಕ್ಸೀನ್ ವಿತರಿಸುವ ನಾಟಕವಾಡಿದೆ ಎಂದು ಅನೇಕ ನಾಯಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ : ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಕರ್ನಾಟಕದಲ್ಲಿಯೂ ಮಂಗಳವಾರದ ಹೊತ್ತಿಗೆ ವ್ಯಾಕ್ಸಿನೇಶನ್‌ ನಂಬರ್‌ಗಳು ಗಣನೀಯವಾಗಿ ಇಳಿಮುಖವಾಗಿದೆ. ಸೋಮವಾರ 11 ಲಕ್ಷ ಡೋಸ್‌ಗಳಷ್ಟು ವ್ಯಾಕ್ಸೀನ್ ನೀಡಲಾಗಿದ್ದರೆ ಮಂಗಳವಾರ ಜೂನ್ 22 ರಂದು ಈ ಸಂಖ್ಯೆ 3.8 ಲಕ್ಷಕ್ಕೆ ಬಂದು ತಲುಪಿದೆ. ಮಧ್ಯ ಪ್ರದೇಶ, ಕರ್ನಾಟಕ, ಹರಿಯಾಣಗಳಲ್ಲಿ ಮಂಗಳವಾರ ನಾಟಕೀಯ ರೀತಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ಇದು ದೇಶದ ವ್ಯಾಕ್ಸೀನೇಶನ್ ಅಂಕಿ ಅಂಶದ ಕುಸಿತಕ್ಕೂ ಕಾರಣವಾಗಿದೆ.

ಉತ್ತರ ಪ್ರದೇಶ ರಾಜ್ಯವೊಂದರಲ್ಲಿ ಮಾತ್ರ ಸೋಮವಾರಕ್ಕಿಂತ ಮಂಗಳವಾರ ಹೆಚ್ಚು ವ್ಯಾಕ್ಸೀನ್ ಡೋಸ್‌ಗಳನ್ನು ನೀಡಲಾಗಿದೆ. ಸೋಮವಾರ ಸುಮಾರು 7ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಲಾಗಿದ್ದರೆ ಮಂಗಳವಾರ 8 ಲಕ್ಷ ವ್ಯಾಕ್ಸಿನ್‌ ಡೋಸ್‌ಗಳನ್ನು ನೀಡಲಾಗಿದೆ.

ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಮಂಗಳವಾರದ ದಿಢೀರ್ ಇಳಿಕೆಯ ಕುರಿತು ವಿವಿಧ ರಾಜಕೀಯ ಪಕ್ಷದ ನಾಯಕರು ಪ್ರತಿಕ್ರಿಯಿಸಿದ್ದು ಕೇಂದ್ರ ಸರ್ಕಾರ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯಿಲ್ಲ ಎಂದು ಆರೋಪಿಸಿದ್ದಾರೆ. ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಸಚಿವ ಪಿ. ಚಿದಂಬರಂ ಪ್ರತಿಕ್ರಿಯಿಸಿ, “ಸೋಮವಾರದ ವ್ಯಾಕ್ಸಿನೇಶನ್ ದಾಖಲೆಯ ಹಿಂದಿನ ಸತ್ಯ ಮಂಗಳವಾರ ಬಹಿರಂಗಗೊಂಡಿದೆ. ಭಾನುವಾರ ವ್ಯಾಕ್ಸಿನೇಶನ್ ನಿಲ್ಲಿಸಿ, ಸೋಮವಾರ ವಿಶ್ವದಾಖಲೆ ಮಾಡಿ, ಮತ್ತೆ ಮಂಗಳವಾರ ಹಿಂದಿನ ಸ್ಥಿತಿಗೆ ತಲುಪುವುದು. ಇದೇ ಕೇಂದ್ರ ಸರ್ಕಾರದ ವ್ಯಾಕ್ಸೀನ್ ನೀತಿ” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಹೋರಾಟಗಾರ ಯೋಗೆಂದ್ರ ಯಾದವ್ ಅವರು ಜೂನ್ 18 ರಿಂದ ಜೂನ್ 22ರ ವರೆಗಿನ ರಾಜ್ಯವಾರು ವ್ಯಾಕ್ಸಿನೇಶನ್ ಕುರಿತು ಅಂಕಿ ಸಂಖ್ಯೆಗಳ ಸಮೇತ ತೋರಿಸಿ ವ್ಯಾಕ್ಸಿನೇಶನ್ ಅನ್ನು ಒಂದು ದಿನದ ಇವೆಂಟ್‌ ಆಗಿ ನಡೆಸುವ ಕೆಲಸವನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೂಢಿಯಾಗಿಸಿಕೊಂಡಿವೆ ಎಂದು ಅಂಕಿ ಅಂಶಗಳ ಸಮೇತ ಟ್ವೀಟ್ ಮಾಡಿದ್ದಾರೆ.

ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಮಂಗಳವಾರದದ ವ್ಯಾಕ್ಸಿನೇಶನ್ ನಂಬರ್‌ಗಳ ಇಳಿಕೆ ಕುರಿತು ತೀವ್ರವಾಗಿ ಪ್ರತಿಕ್ರಿಯಿಸಿದ್ದು ಲಸಿಕೆ ಅಭಿಯಾನವನ್ನು ಪ್ರಚಾರ ಆಂದೋಲನವಾಗಿ ನಡೆಸುವುದನ್ನು ಬಿಟ್ಟು ದೇಶದಲ್ಲಿ ನಿತ್ಯ ಕನಿಷ್ಠ 80 ಲಕ್ಷ ವ್ಯಾಕ್ಸಿನ್‌ಗಳನ್ನು ನಿಯಮಿತವಾಗಿ ನೀಡುವಂತೆ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ವ್ಯಾಕ್ಸಿನ್‌ ನೀತಿಯಲ್ಲಿನ ಪಾರದರ್ಶಕತೆಯ ಕೊರತೆ, ಅಸಮರ್ಪಕ ಯೋಜನೆ, ಪೂರೈಕೆಯಲ್ಲಿನ ವ್ಯತ್ಯಗಳ ಕಾರಣದಿಂದ 2021 ಅಂತ್ಯಕ್ಕೆ ದೇಶದ ಜನರನ್ನು ವ್ಯಾಕ್ಸಿನೇಟ್ ಮಾಡುವ ಕೇಂದ್ರ ಸರ್ಕಾರದ ಗುರಿಯ ಸಾಧನೆ ಮಂಕಾಗತೊಡಗಿದೆ. ಒಂದು ವೇಳೆ ಕೇಂದ್ರ ಸರ್ಕಾರ ಈ ವರ್ಷಾಂತ್ಯಕ್ಕೆ ದೇಶದ ಎಲ್ಲಾ ಜನರಿಗೆ ಲಸಿಕೆ ಕೊಡುವ ನಿಜವಾದ ಪ್ರಯತ್ನಗಳನ್ನು ಮಾಡುತ್ತಿರುವುದೇ ಆದರೆ ದಿನನಿತ್ಯದ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ನಿತ್ಯ ಇಷ್ಟು ಏರಿಳಿಕೆಗಳು ಹೇಗೆ ಸಾಧ್ಯ ಎಂಬ ಪ್ರಶ್ನೆ ಯಕ್ಷ ಪ್ರಶ್ನೆಯಾಗಿಯೇ ಉಳಿಯುತ್ತದೆ.

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆ ಇಳಿಮುಖವಾಗುತ್ತಿರುವ ಹೊತ್ತಿನಲ್ಲಿಯೇ ಹೊಸದಾದ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಕಾಣಿಸಿಕೊಂಡು ದೇಶದಲ್ಲಿ ಆತಂಕವನ್ನು ಹುಟ್ಟಿಸಿದೆ. ಈಗ ಸಧ್ಯ ಕೊರೋನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ದೇಶದ ಮುಂದಿರುವ ಏಕೈಕ ಅಸ್ತ್ರ ವ್ಯಾಕ್ಸಿನೇಶನ್. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕವಾಗಿ ವ್ಯಾಕ್ಸಿನೇಶನ್ ಪ್ರಯತ್ನವನ್ನು ಕೈಗೊಂಡರೆ ಮಾತ್ರ ದೇಶ ಕೊರೋನಾ ವಿರುದ್ಧ ಹೋರಾಡಲು ಸಾಧ್ಯ.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...