Homeಕರ್ನಾಟಕಜಾರಕಿಹೊಳಿ ಲೈಂಗಿಕ ಸಿಡಿ ಹಗರಣ: ಬಂಧನದ ಭೀತಿಯಲ್ಲಿ ಅತ್ಯಾಚಾರ ಸಂತ್ರಸ್ತೆ!

ಜಾರಕಿಹೊಳಿ ಲೈಂಗಿಕ ಸಿಡಿ ಹಗರಣ: ಬಂಧನದ ಭೀತಿಯಲ್ಲಿ ಅತ್ಯಾಚಾರ ಸಂತ್ರಸ್ತೆ!

ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯ ಬಂಧನ ಇನ್ನೂ ಆಗಿಲ್ಲ

- Advertisement -
- Advertisement -

ರಾಜ್ಯ ರಾಜಕಾರಣವನ್ನು ಅಲ್ಲೋಲ ಕಲ್ಲೋಲ ಮಾಡಿದ್ದ ಲೈಂಗಿಕ ಹಗರಣದಲ್ಲಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ದ ಅತ್ಯಾಚಾರ ಆರೋಪ ಹೊರಿಸಿದ್ದ ಸಂತ್ರಸ್ತೆ ಯುವತಿಗೆ ಬಂಧನದ ಭೀತಿ ಎದುರಾಗಿದೆ. ಯುವತಿಯ ವಿರುದ್ದ ರಮೇಶ್‌ ಜಾರಕಿಹೊಳಿ ದೂರು ನೀಡಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಯುವತಿಯ ಪರ ವಕೀಲರು ಹೈಕೋಟ್‌ಗೆ ಹೇಳಿಕೆ ನೀಡಿದ್ದಾರೆ.

ರಮೇಶ್‌ ಜಾರಕಿಹೊಳಿ ವಿರುದ್ದ ಕೂಡಾ ಸಂತ್ರಸ್ತ ಯುವತಿ ದೂರು ನೀಡಿದ್ದರು. ಅತ್ಯಾಚಾರದ ಆರೋಪ ಹೊರಿಸಿದ್ದರು. ಪೊಲೀಸರು ಅವರನ್ನು ಇದುವರೆಗೂ ಬಂಧಿಸಿಲ್ಲ. ಆದರೆ, ಜಾರಕಿಹೊಳಿ ನೀಡಿದ ದೂರಿನಂತೆ ಯುವತಿಯನ್ನು ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ ಯುವತಿಯನ್ನು ಬಂಧಿಸದಂತೆ ಎಸ್‌ಐಟಿ ಪೊಲೀಸರಿಗೆ ನಿರ್ದೇಶಿಸುವಂತೆ ಹೈಕೋರ್ಟ್‌ಗೆ ಯುವತಿ ಪರ ವಕೀಲರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಿಡಿ ಕೇಸ್: FIR ದಾಖಲಿಸದ ಕಮಲ್ ಪಂತ್ ವಿರುದ್ಧ ಖಾಸಗಿ ದೂರು ನೀಡಿದ ಜನಾಧಿಕಾರ ಸಂಘರ್ಷ ಪರಿಷತ್

ಯುವತಿಯ ಪರವಾಗಿ ವಕೀಲರು, ಸಿಆರ್‌ಪಿಸಿ 482 ರದ್ದು ಮಾಡುವಂತೆ ಹೈಕೋರ್ಟ್‌‌ಗೆ ಕೋರಿದ್ದರು. ಆದರೆ ಸಿಆರ್‌ಪಿಸಿ 482 ಅಡಿ ಬಂಧಿಸದಂತೆ ಸೂಚಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಬಂಧಿಸದಂತೆ ಇರಲು ಪ್ರತ್ಯೆಕವಾಗಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಲಿ ಎಂದು ಹೈಕೋರ್ಟ್ ನ್ಯಾಯಮೂರ್ತಿ‌‌ ಸುನೀಲ್ ದತ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಖ್ಯಾತ ವಕೀಲೆ ಇಂದಿರಾ ಜೈಸಿಂಗ್‌ ಅವರು ಸಂತ್ರಸ್ತೆ ಯುವತಿಯ ಪರ ವಕಾಲತು ನಡೆಸಲು ಒಪ್ಪಿಕೊಂಡಿದ್ದಾರೆ. ಇನ್ನೊಂದು ಕಡೆ ಮಾಜಿ ಸಚಿವ, ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ ಪ್ರಕರಣವನ್ನು ಮುಗಿಸಲು ಮತ್ತು ತನಗೆ ಸಚಿವ ಸ್ಥಾನ ಕೊಡಿಸುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಫಡ್ನವಿಸ್ ಕರ್ನಾಟಕ ರಾಜಕೀಯದಲ್ಲಿ ತಾನು ತಲೆ ಹಾಕುವುದಿಲ್ಲ ಆದರೆ ತಮ್ಮ ಬೇಡಿಕೆಯನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಇಂದಿರಾ ಜೈಸಿಂಗ್ ವಕಾಲತ್ತು

ಪ್ರಕರಣ ಬೆಳಕಿಗೆ ಬಂದಿದ್ದ ಸಮಯದಲ್ಲಿ ವಿಡಿಯೊದಲ್ಲಿ ಇರುವುದು ತಾನಲ್ಲ ಎಂದು ಹೇಳಿದ್ದ ಜಾರಕಿಹೊಳಿ, ಇತ್ತೀಚೆಗೆ ಎಸ್‌ಐಟಿ ಮುಂದೆ ವಿಡಿಯೊದಲ್ಲಿ ಇರುವುದು ತಾನೆ ಎಂದು ಒಪ್ಪಿಕೊಂಡಿದ್ದರು. ಆದರೆ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಆರೋಪಿ ಜಾರಕಿಹೊಳಿಯನ್ನು ಇದುವರೆಗೂ ಬಂಧಿಸಿಲ್ಲ. ಇದು ಸಂತ್ರಸ್ತೆ ಯುವತಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದರು.

ಪ್ರಕರಣದ ಕುರಿತು ಕಾನೂನು ತಜ್ಞರು, “ಪ್ರಕರಣದ ತನಿಖೆ ಮುಂದುವರೆಯಬೇಕಾದರೆ, ಅತ್ಯಾಚಾರ ಆರೋಪಿಯ ವೈದ್ಯಕೀಯ ಸಾಕ್ಷ್ಯಗಳನ್ನು ಸಂಗ್ರಹಿಸುವ ಹಾಗೂ ಅತ್ಯಾಚಾರ ಆರೋಪಿಯ ಗಂಡಸುತನದ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿ ಆಗಲೇಬೇಕಿದೆ. ಈ ಕಾರಣದಿಂದ ತನಿಖಾಧಿಕಾರಿಯು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯರ ಮುಂದೆ ಹಾಜರು ಪಡಿಸಬೇಕಿರುತ್ತದೆ. ಆದರೆ ಪ್ರಕರಣವು ರಾಜ್ಯದ ಪ್ರಭಾವಿ ರಾಜಕೀಯ ನಾಯಕನ ವಿರುದ್ದವೇ ಇರುವುದರಿಂದ ಈ ಪ್ರಕ್ರಿಯೆ ನಡೆಯುತ್ತಿಲ್ಲ” ಎಂದು ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: ಲೈಂಗಿಕ ಸಿಡಿ ಹಗರಣ: ಅಡಕತ್ತರಿಯಲ್ಲಿ ತನಿಖೆ, ಸಚಿವ ಸ್ಥಾನದ ಆಸೆಯಲ್ಲಿ ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...