Homeಮುಖಪುಟವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

ವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

- Advertisement -
- Advertisement -

ವಂಚನೆ ಮಾಡಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಮಾಡಿದ ಆರ್ಥಿಕ ವಂಚನೆಯಿಂದಾಗಿ ನಷ್ಟ ಅನುಭವಿಸಿದ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ , 8,441 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವರ್ಗಾಯಿಸಿದೆ. ಇದುವರೆಗೆ ಒಟ್ಟು 9,371.17 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವರ್ಗಾಯಿಸಿದೆ.

ಪರಾರಿಯಾದ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ, 22,586 ಕೋಟಿ ವಂಚಿಸಿದ್ದಾರೆ. ಅದರಲ್ಲಿ 80.45% (, 18,170 ಕೋಟಿ)  ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂವರು ವಂಚಕರಿಂದ 18,170.02 ಕೋಟಿ ರೂಗಳ (ಬ್ಯಾಂಕುಗಳ ಒಟ್ಟು ನಷ್ಟದ 80.45%) ಆಸ್ತಿಯನ್ನು ಪಿಎಂಎಲ್‌ಎ ಅಡಿಯಲ್ಲಿ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಈ ಪೈಕಿ, ಒಂದು ಭಾಗ (9,371.17 ಕೋಟಿ ರೂ)ದ ಆಸ್ತಿಯನ್ನು ಸರ್ಕಾರಿ ಬ್ಯಾಂಕುಗಳು ಮತ್ತು ಸರ್ಕಾರಕ್ಕೆ ಇಡಿ ವರ್ಗಾಯಿಸಿದೆ.

ಇದನ್ನೂ ಓದಿ: ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಮುಂಬೈನ ವಿಶೇಷ ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಯ ಆದೇಶದ ಪ್ರಕಾರ ಸಂಸ್ಥೆಯು ಸುಮಾರು 6,600 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಎಸ್‌ಬಿಐ ನೇತೃತ್ವದ ಒಕ್ಕೂಟ ಬ್ಯಾಂಕುಗಳಿಗೆ ವರ್ಗಾಯಿಸಿದೆ ಎಂದು ತಿಳಿಸಿದೆ. ಷೇರುಗಳ ಮಾರಾಟದಿಂದ 800 ಕೋಟಿ ರೂ.ಗಳ ಹೆಚ್ಚಿನ ಹಣವು ಜೂನ್ 25 ರೊಳಗೆ ದೊರೆಯುತ್ತದೆ ಎಂದು ನಿರೀಕ್ಷಿಸಲಾಗಿರುವುದಾಗಿ ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಬಿಐ ನೇತೃತ್ವದ ಒಕ್ಕೂಟದ ಪರವಾಗಿ ಡಿಆರ್‌ಟಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಷೇರುಗಳನ್ನು 5,824.50 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಮೂವರು ಆರೋಪಿಗಳು ವಾಸಿಸುತ್ತಿರುವ ದೇಶಗಳಿಗೆ ಹಸ್ತಾಂತರದ ಮನವಿಗಳನ್ನು ಕಳುಹಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಜಯ್‌‌‌‌‌‌‌‌‌‌‌‌‌‌‌ ಮಲ್ಯ ಮತ್ತು‌‌‌‌‌‌‌‌‌‌‌‌ ನೀರವ್ ಮೋದಿ ಲಂಡನ್‌ನಲ್ಲಿ ವಾಸಿಸುತ್ತಿದ್ದರೆ, ಮೆಹುಲ್ ಚೋಕ್ಸಿ ಭಾರತದಿಂದ ಓಡಿಹೋದ ನಂತರ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಕಾಣಿಸಿಕೊಂಡಿದ್ದಾರೆ.

ಹಸ್ತಾಂತರ ಪ್ರಕ್ರಿಯೆ ಕುರಿತು ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯ ಅವರಿಗೆ ಅನುಮತಿ ನಿರಾಕರಿಸಲಾಗಿದ್ದು, ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಬಹುತೇಕ ಅಂತಿಮವಾಗಿದೆ. ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದು ಕೂಡ ಅಂತಿಮವಾಗಿದೆ. ಆದರೆ, ಮೆಹುಲ್ ಚೋಕ್ಸಿ ಮಾತ್ರ ಹಸ್ತಾಂತರ ಪ್ರಕ್ರಿಯೆ ಕುರಿತು ಆಂಟಿಗುವಾದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: TRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...