Homeಮುಖಪುಟವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

ವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

- Advertisement -
- Advertisement -

ವಂಚನೆ ಮಾಡಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಮಾಡಿದ ಆರ್ಥಿಕ ವಂಚನೆಯಿಂದಾಗಿ ನಷ್ಟ ಅನುಭವಿಸಿದ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ , 8,441 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವರ್ಗಾಯಿಸಿದೆ. ಇದುವರೆಗೆ ಒಟ್ಟು 9,371.17 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವರ್ಗಾಯಿಸಿದೆ.

ಪರಾರಿಯಾದ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ, 22,586 ಕೋಟಿ ವಂಚಿಸಿದ್ದಾರೆ. ಅದರಲ್ಲಿ 80.45% (, 18,170 ಕೋಟಿ)  ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂವರು ವಂಚಕರಿಂದ 18,170.02 ಕೋಟಿ ರೂಗಳ (ಬ್ಯಾಂಕುಗಳ ಒಟ್ಟು ನಷ್ಟದ 80.45%) ಆಸ್ತಿಯನ್ನು ಪಿಎಂಎಲ್‌ಎ ಅಡಿಯಲ್ಲಿ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಈ ಪೈಕಿ, ಒಂದು ಭಾಗ (9,371.17 ಕೋಟಿ ರೂ)ದ ಆಸ್ತಿಯನ್ನು ಸರ್ಕಾರಿ ಬ್ಯಾಂಕುಗಳು ಮತ್ತು ಸರ್ಕಾರಕ್ಕೆ ಇಡಿ ವರ್ಗಾಯಿಸಿದೆ.

ಇದನ್ನೂ ಓದಿ: ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಮುಂಬೈನ ವಿಶೇಷ ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಯ ಆದೇಶದ ಪ್ರಕಾರ ಸಂಸ್ಥೆಯು ಸುಮಾರು 6,600 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಎಸ್‌ಬಿಐ ನೇತೃತ್ವದ ಒಕ್ಕೂಟ ಬ್ಯಾಂಕುಗಳಿಗೆ ವರ್ಗಾಯಿಸಿದೆ ಎಂದು ತಿಳಿಸಿದೆ. ಷೇರುಗಳ ಮಾರಾಟದಿಂದ 800 ಕೋಟಿ ರೂ.ಗಳ ಹೆಚ್ಚಿನ ಹಣವು ಜೂನ್ 25 ರೊಳಗೆ ದೊರೆಯುತ್ತದೆ ಎಂದು ನಿರೀಕ್ಷಿಸಲಾಗಿರುವುದಾಗಿ ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಬಿಐ ನೇತೃತ್ವದ ಒಕ್ಕೂಟದ ಪರವಾಗಿ ಡಿಆರ್‌ಟಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಷೇರುಗಳನ್ನು 5,824.50 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಮೂವರು ಆರೋಪಿಗಳು ವಾಸಿಸುತ್ತಿರುವ ದೇಶಗಳಿಗೆ ಹಸ್ತಾಂತರದ ಮನವಿಗಳನ್ನು ಕಳುಹಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಜಯ್‌‌‌‌‌‌‌‌‌‌‌‌‌‌‌ ಮಲ್ಯ ಮತ್ತು‌‌‌‌‌‌‌‌‌‌‌‌ ನೀರವ್ ಮೋದಿ ಲಂಡನ್‌ನಲ್ಲಿ ವಾಸಿಸುತ್ತಿದ್ದರೆ, ಮೆಹುಲ್ ಚೋಕ್ಸಿ ಭಾರತದಿಂದ ಓಡಿಹೋದ ನಂತರ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಕಾಣಿಸಿಕೊಂಡಿದ್ದಾರೆ.

ಹಸ್ತಾಂತರ ಪ್ರಕ್ರಿಯೆ ಕುರಿತು ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯ ಅವರಿಗೆ ಅನುಮತಿ ನಿರಾಕರಿಸಲಾಗಿದ್ದು, ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಬಹುತೇಕ ಅಂತಿಮವಾಗಿದೆ. ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದು ಕೂಡ ಅಂತಿಮವಾಗಿದೆ. ಆದರೆ, ಮೆಹುಲ್ ಚೋಕ್ಸಿ ಮಾತ್ರ ಹಸ್ತಾಂತರ ಪ್ರಕ್ರಿಯೆ ಕುರಿತು ಆಂಟಿಗುವಾದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: TRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...