Homeಕರೋನಾ ತಲ್ಲಣಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್‌ ಮಾಹಿತಿ ನೀಡಿದ್ದಾರೆ.

- Advertisement -
- Advertisement -

ದೇಶದಲ್ಲಿ ಕೊರೊನಾ 2ನೇ ಅಲೆ ಸೃಷ್ಟಿಸಿರುವ ಸಂಕಷ್ಟದಿಂದ ಅಲ್ಪಸ್ವಲ್ಪ ಚೇತರಿಸಿಕೊಳ್ಳುತ್ತಿರುವ ನಡುವೇಯೇ ಡೆಲ್ಟಾ ಪ್ಲಸ್‌ ರೂಪಾಂತರಿ ಪ್ರಕರಣಗಳು ಆತಂಕಕ್ಕೆ ಕಾರಣವಾಗಿವೆ. ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿದ್ದವು. ಈಗ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಮೊದಲ ಪ್ರಕರಣ ಪತ್ತೆಯಾಗಿದೆ.

ಮಂಗಳವಾರದಿಂದ ಮೈಸೂರಿನಲ್ಲಿ ಕೊರೊನಾ ರೂಪಾಂತರ ಡೆಲ್ಟಾ ಪ್ಲಸ್ ವೈರಸ್ ಇರುವ ಕುರಿತು ಊಹಾಪೋಹಗಳು ಹರಿದಾಡುತ್ತಿದ್ದವು. ಮೈಸೂರಿನಲ್ಲೂ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣ ಪತ್ತೆಯಾಗಿದೆ ಎಂದು ಬುಧವಾರ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾದ ಡೆಲ್ಟಾ ಪ್ಲಸ್ ವೈರಸ್ ರಾಜ್ಯಕ್ಕೂ ಕಾಲಿಟ್ಟಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಸುಧಾಕರ್, “ಮೈಸೂರಿನಲ್ಲಿ ಒಂದು ಡೆಲ್ಟಾ ಪ್ಲಸ್ ಕೇಸ್ ಪತ್ತೆಯಾಗಿದೆ. ರೋಗಿಯನ್ನ ಐಸೋಲೇಟ್ ಮಾಡಲಾಗಿದೆ. ಅವರಿಗೆ ಯಾವುದೇ ರೋಗ ಲಕ್ಷಣ ಇಲ್ಲ. ಸೋಂಕಿತರ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕದಲ್ಲಿ ಇರುವವರಿಗೆ ಸೋಂಕು ಹರಡಿಲ್ಲ” ಎಂದು ಹೇಳಿದ್ದಾರೆ.

’ಈ ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಮಾಡಲು ನಿರ್ಧಾರ ಮಾಡಿದ್ದೇವೆ. ಡೆಲ್ಟಾ ಪ್ಲಸ್ ಬಗ್ಗೆ ನಿರಂತರವಾಗಿ ಗಮನಹರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಜೊತೆಗೆ ದೇಶದಲ್ಲಿ ಆತಂಕಕ್ಕೆ ಕಾರಣವಾದ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು

“ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಕಂಡುಬರುವ ಜಿಲ್ಲೆಗಳು ಮತ್ತು ಕ್ಲಸ್ಟರ್‌ಗಳಲ್ಲಿ ತಕ್ಷಣದ ನಿಯಂತ್ರಣ ಕ್ರಮಗಳು, ವರ್ಧಿತ ಪರೀಕ್ಷೆ, ಟ್ರ್ಯಾಕಿಂಗ್ ಮತ್ತು ವ್ಯಾಕ್ಸಿನೇಷನ್ ತೆಗೆದುಕೊಳ್ಳುವಂತೆ ಕೇಂದ್ರವು ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಅಲ್ಲದೆ, ಸೋಂಕಿತ ವ್ಯಕ್ತಿಗಳ ಮಾದರಿಗಳನ್ನು ತಕ್ಷಣವೇ INSACOG ನ ಗೊತ್ತುಪಡಿಸಿದ ಪ್ರಯೋಗಾಲಯಗಳಿಗೆ ಕಳುಹಿಸಲಾಗುವುದು. ಇದರಿಂದ ಕ್ಲಿನಿಕಲ್ ಸಾಂಕ್ರಾಮಿಕ ರೋಗ ಸಂಬಂಧಗಳನ್ನು ಮಾಡಬಹುದು” ಎಂದು ಸುಧಾಕರ್‌ ತಿಳಿಸಿದ್ದಾರೆ.

ಭಾರತ ಸೇರಿದಂತೆ ವಿಶ್ವದ 80 ದೇಶಗಳಲ್ಲಿ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ. ಒಂಬತ್ತು ದೇಶಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿದೆ. ಯುಎಸ್, ಯುಕೆ, ಪೋರ್ಚುಗಲ್, ಸ್ವಿಟ್ಜರ್ಲೆಂಡ್, ಜಪಾನ್, ಪೋಲೆಂಡ್, ನೇಪಾಳ, ಚೀನಾ ಮತ್ತು ರಷ್ಯಾ ದೇಶಗಳಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾಗಿದ್ದು ಇದು ಕಳವಳಕಾರಿ ಬೆಳವಣಿಗೆಯಾಗಿದೆ ಎನ್ನಲಾಗಿದೆ

ಪ್ರಸ್ತುತ ದೇಶದಲ್ಲಿ 40 ಕ್ಕೂ ಹೆಚ್ಚು ಡೆಲ್ಟಾ ಪ್ಲಸ್ ರೂಪಂತರಿ ಪ್ರಕರಣಗಳಿವೆ, ಇದನ್ನು ಒಕ್ಕೂಟ ಸರ್ಕಾರವು “ವೇರಿಯಂಟ್ ಆಫ್ ಕನ್ಸರ್ನ್” ಎಂದು ಕರೆದಿದೆ. ಇದು ಬಹಳ ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಹೊಸ ರೂಪಾಂತರದಿಂದಾಗಿ ಕೊರೊನಾ ರೋಗದ ತೀವ್ರತೆಯ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

’ಭಾರತೀಯ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಎರಡೂ ಡೆಲ್ಟಾ ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿವೆ. ಹೀಗಾಗಿ ಪ್ರತಿಯೊಬ್ಬರು ಶೀಘ್ರವಾಗಿ ಲಸಿಕೆ ಪಡೆಯುವುದು ಉತ್ತಮ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆದರೆ, ವಿಶ್ವ ಆರೊಗ್ಯ ಸಂಸ್ಥೆ (WHO) ಆಘಾತಕಾರಿ ವಿಷಯವೊಂದನ್ನು ಹೊರಹಾಕಿದೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿವೆ. ಮುಂದೆ ಹೊಸ ಹೊಸ ಕೊರೊನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...