Homeಮುಖಪುಟಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಕೇರಳದಲ್ಲಿ ಸೋಮವಾರದಿಂದ ಮಂಗಳವಾರದವರೆಗಿನ ಅವಧಿಯಲ್ಲಿ ವರದಕ್ಷಿಣೆ ಕಿರುಕುಳದಿಂದಾಗಿ ಮೂವರು ಯುವತಿಯರು ಸಾವಿಗೀಡಾಗಿದ್ದಾರೆ

- Advertisement -
- Advertisement -

ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಬುಧವಾರ ಹೇಳಿದ್ದಾರೆ.

ಕೇರಳದಲ್ಲಿ ಸೋಮವಾರದಿಂದ ಮಂಗಳವಾರದವರೆಗಿನ ಅವಧಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಮೂವರು ಯುವತಿಯರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಇದು ಕೇರಳದಾದ್ಯಂತ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ. ಪ್ರಕರಣಗಳ ತನಿಖೆಗಾಗಿ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ ಬೆಹ್ರಾ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಹರ್ಷಿತಾ ಅಟ್ಟಲೂರಿ ಅವರ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ.

ಇದನ್ನೂ ಓದಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಓಪನ್ ಸೊಸೈಟಿ ಪ್ರಶಸ್ತಿ

ಈ ಹಿನ್ನಲೆಯಲ್ಲಿ ಇಂದು ಸರಣಿ ಟ್ವೀಟ್ ಮಾಡಿರುವ ಪಿಣರಾಯಿ ವಿಜಯನ್‌, “ನ್ಯಾಯಯುತ ಸಮಾಜವೆಂದರೆ ಅದು ಮಹಿಳೆಯರು ಮತ್ತು ಪುರುಷರನ್ನು ಸಮಾನವಾಗಿ ಪರಿಗಣಿಸುತ್ತದೆ. ಕೌಟುಂಬಿಕ ದೌರ್ಜನ್ಯದ ಇತ್ತೀಚಿನ ಭಯಾನಕ ಘಟನೆಗಳ ಹಿನ್ನಲೆಯಲ್ಲಿ, ನ್ಯಾಯಯುತ ಸಮಾಜವನ್ನು ಕಟ್ಟಲು ಕೇರಳವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ. ಈ ಅನ್ಯಾಯವನ್ನು ಕೊನೆಗೊಳಿಸಲು ಸರ್ಕಾರ ಮತ್ತು ಜನರು ಒಟ್ಟಾಗಿ ನಿಲ್ಲುತ್ತಾರೆ” ಎಂದು ಹೇಳಿದ್ದಾರೆ.

“ಮಹಿಳೆಯರು ಕೀಳಲ್ಲ, ಅವರಿಗೆ ಸಮಾನ ಹಕ್ಕುಗಳಿವೆ ಎಂಬ ಸತ್ಯವನ್ನು ಪುರುಷರು ಒಪ್ಪಿಕೊಳ್ಳಬೇಕು. ಯುವ ಸಂಘಟನೆಗಳು ಜಾಗೃತಿ ಅಭಿಯಾನವನ್ನು ಪ್ರಾರಂಭಿಸಬೇಕಾಗಿದೆ. ಅಂತಹ ಪ್ರಗತಿಪರ ವರ್ತನೆಗಳನ್ನು ತಮ್ಮ ಮಕ್ಕಳಲ್ಲಿ ಬೆಳೆಸಲು ಪೋಷಕರು ಪ್ರಜ್ಞಾಪೂರ್ವಕ ಪ್ರಯತ್ನಗಳನ್ನು ಮಾಡಬೇಕು. ನಾವು ಹೊಸ ಸಂಸ್ಕೃತಿಯನ್ನು ಪೋಷಿಸಬೇಕು” ಎಂದು ಅವರು ಹೇಳಿದ್ದಾರೆ.

“ಸಮಾಜವು ಏನು ಯೋಚಿಸುತ್ತದೆ ಎಂದು ಹೆದರುವ ಬದಲು, ಕೌಟುಂಬಿಕ ದೌರ್ಜನ್ಯವನ್ನು ಎದುರಿಸುತ್ತಿರುವ ಮಹಿಳೆಯರು ಧ್ವನಿ ಎತ್ತಬೇಕಾಗಿದೆ. ಸರ್ಕಾರ ನಿಮ್ಮ ಪರವಾಗಿ ನಿಂತು ನಿಮ್ಮ ಹಕ್ಕುಗಳನ್ನು ರಕ್ಷಿಸುತ್ತದೆ. ನಾವು ಈಗಾಗಲೇ ಅಸ್ತಿತ್ವದಲ್ಲಿರುವ ಬೆಂಬಲ ವ್ಯವಸ್ಥೆಗಳನ್ನು ಬಲಪಡಿಸುತ್ತೇವೆ. ಮಹಿಳೆಯರಿಗೆ ಸಹಾಯ ಒದಗಿಸಲು ನವೀನ ಕ್ರಮಗಳನ್ನು ಪರಿಚಯಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

“ಮಹಿಳೆಯರ ಮೇಲಿನ ದೌರ್ಜನ್ಯದ ಮೇಲಿನ ದೂರುಗಳನ್ನು ಪರಿಹರಿಸಲು ಪ್ರತಿ ಜಿಲ್ಲೆಯಲ್ಲಿ ‘ಕೌಟುಂಬಿಕ ದೌರ್ಜನ್ಯ ಪರಿಹಾರ ಕೇಂದ್ರ’ವು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ತನ್ನ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ಸ್ವೀಕರಿಸಿದ ದೂರುಗಳನ್ನು ವಿಳಂಬವಿಲ್ಲದೆ ಪರಿಹರಿಸಲು ಡಿಜಿಪಿಗೆ ನಿರ್ದೇಶನ ನೀಡಲಾಗಿದೆ” ಎಂದು ಹೇಳಿದ್ದಾರೆ.

ಮಹಿಳೆಯರ ಮೇಲಿನ ಸೈಬರ್ ಅಪರಾಧಗಳನ್ನು ಪರಿಹರಿಸುವ ಆನ್‌ಲೈನ್ ಸೇವೆಯಾದ ‘ಅಪರಾಜಿತಾ’ ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಕೌಟುಂಬಿಕ ದೌರ್ಜನ್ಯಗಳ ಬಗ್ಗೆ ದೂರುಗಳನ್ನು ಸಲ್ಲಿಸಲು ಇಂದಿನಿಂದ ಬಳಸಬಹುದು ಎಂದು ಪಿಣರಾಯಿ ಹೇಳಿದ್ದಾರೆ. ಅಲ್ಲದೆ [email protected] ಗೆ ಈ ಮೇಲ್ ಅಥವಾ 9497996992 ಗೆ ಕರೆ ಮಾಡಬಹುದು ಎಂದು ಕೂಡಾ ಅವರು ಹೇಳಿದ್ದಾರೆ.

ವರದಕ್ಷಿಣೆ ಬಗ್ಗೆ ದೂರುಗಳನ್ನು ತನಿಖೆ ಮಾಡಲು ಮತ್ತು ಪರಿಹರಿಸಲು ರಾಜ್ಯ ನೋಡಲ್ ಅಧಿಕಾರಿಯನ್ನು ನಿಯೋಜಿಸಲಾಗಿದೆ ಎಂದಿರುವ ಮುಖ್ಯಮಂತ್ರಿ, “ಮಹಿಳಾ ಎಸ್‌ಐ ನೋಡಲ್ ಅಧಿಕಾರಿಗೆ ಸಹಾಯ ಮಾಡಲಿದ್ದಾರೆ. ದೂರುಗಳನ್ನು ದೂರವಾಣಿಯಲ್ಲಿ 9497999955 ಗೆ ಸಲ್ಲಿಸಬಹುದು. ಈ ಸೇವೆಗಳನ್ನು ಪರಿಣಾಮಕಾರಿಯಾಗಿ ಬಳಸಲು ಎಲ್ಲರಿಗೂ ಸೂಚಿಸಿ. ಸಾಮಾಜಿಕ ಕಳಂಕವನ್ನು ನಿಗ್ರಹಿಸೋಣ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...