Homeಕರ್ನಾಟಕಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

- Advertisement -
- Advertisement -

ಕೊರೊನಾ ಮೊದಲನೆ ಅಲೆಯ ಸಮಯದಲ್ಲಿ ಸೋಂಕು ಹರಡಲು ತಬ್ಲೀಘಿಗಳೇ ಕಾರಣ ಎಂಬ ಕಾರ್ಯಕ್ರಮವನ್ನು ಮಾಡಿದ್ದ ‘ನ್ಯೂಸ್‌ 18 ಕನ್ನಡ’ ಚಾನೆಲ್‌, ಇಂದು (ಬುಧವಾರ) ರಾತ್ರಿ 8:30-9:15 ರ ಒಳಗಾಗಿ ತನ್ನ ತಪ್ಪು ವರದಿಗಾಗಿ ಕ್ಷಮೆಯಾಚಿಸಲಿದೆ.

2020 ರ ಕೊರೊನಾ ಸಾಂಕ್ರಮಿಕ ಸಮಯದಲ್ಲಿ ತಬ್ಲೀಘಿ ಜಮಾತ್‌ ಅನ್ನು ಗುರಿಯಾಗಿಸಿ ಕೊಂಡಿದ್ದಕ್ಕೆ ಕನ್ನಡ ಚಾನೆಲ್‌ಗಳಾದ ‘ನ್ಯೂಸ್‌ 18 ಕನ್ನಡ’ ಮತ್ತು ‘ಸುವರ್ಣ ನ್ಯೂಸ್‌’ಗೆ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿದೆ. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿದೆ.

ಇದನ್ನೂ ಓದಿ: ANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

ಬೆಂಗಳೂರು ಮೂಲದ ‘ಹೇಟ್‌ ಸ್ಪೀಚ್‌ ಬೇಡ’ ಎಂಬ ದ್ವೇಷ ಭಾಷಣಗಳ ವಿರುದ್ದದ ಅಭಿಯಾವು NBSA ಗೆ ದೂರುಗಳನ್ನು ಸಲ್ಲಿಸಿ, ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ‘ನ್ಯೂಸ್‌ 18 ಕನ್ನಡ’ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ದೂರಿನ ವಿಚಾರಣೆ ನಡೆಸಿದ NBSA ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು, “… ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ ರೀತಿ ಹೆಚ್ಚು ಆಕ್ಷೇಪಾರ್ಹವಾಗಿತ್ತು. ಸುದ್ದಿ ವರದಿಯು ಶುದ್ಧ ಊಹಾಪೋಹವನ್ನು ಆಧರಿಸಿತ್ತು. ಕಾರ್ಯಕ್ರಮದ ಧ್ವನಿ, ವಸ್ತು, ಭಾಷೆ ಒರಟಾಗಿದ್ದು, ಪೂರ್ವಾಗ್ರಹ ಮತ್ತು ಅಗೌರವದಿಂದ ಕೂಡಿತ್ತು … ” ಎಂದು ಹೇಳಿದ್ದರು.

ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ NBSA  1 ಲಕ್ಷ ದಂಡ ವಿಧಿಸಿದೆ. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಎಂದು ಚಾನೆಲ್‌ಗೆ ನಿರ್ದೇಶನ ನೀಡಿದೆ. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಪ್ರಾಧಿಕಾರವು ಚಾನೆಲ್‌ ಅನ್ನು ಕೇಳಿದೆ. ಅದರಂತೆ ಚಾನೆಲ್‌ ಇಂದು ರಾತ್ರಿ ಕ್ಷಮೆ ಕೇಳಲಿದೆ.

ಇದನ್ನೂ ಓದಿ: ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

ಈ ಬಗ್ಗೆ ಮಾಹಿತಿ ನೀಡಿರುವ ‘ಹೇಟ್‌ ಸ್ಪೀಚ್‌‌ ಬೇಡ’ ಅಭಿಯಾನವು, “ನ್ಯೂಸ್ 18 ಕನ್ನಡವು ‘ವಿಷ’, ‘ನರಕ’, ‘ನಿಜಾಮುದ್ದೀನ್ ನಂಜು’ ಮುಂತಾದ ಪದಗಳನ್ನು ಬಳಸಿ, ತಬ್ಲಿಘಿ ಜಮಾಅತ್ ವಿರುದ್ಧ ಕೋಮು ಮತ್ತು ದ್ವೇಷದ ಪ್ರಸಾರಕ್ಕಾಗಿ, ನ್ಯೂಸ್ 18 ಕನ್ನಡಕ್ಕೆ ಕ್ಷಮೆಯಾಚನೆಯನ್ನು ಪ್ರಸಾರ ಮಾಡಲು ‘ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ’ (NBSA) ಆದೇಶಿಸಿದೆ. ಅಲ್ಲದೆ 1 ಲಕ್ಷ ದಂಡವನ್ನೂ ವಿಧಿಸಿದೆ. ಇವತ್ತು ರಾತ್ರಿ 8:30 PM – 9:15 PM ನಡುವೆ ನ್ಯೂಸ್‌ 18 ಕನ್ನಡ ವೀಕ್ಷಿಸಿ. NBSA ಆದೇಶದಂತೆ ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಕ್ಷಮೆಯಾಚನೆಯನ್ನು ಮಾಡುತ್ತದೆಯೇ ಎಂದು ನೋಡೋಣ” ಎಂದು ಹೇಳಿದೆ.

NBSA ನ್ಯೂಸ್‌ 18 ಕನ್ನಡ ಮಾತ್ರವಲ್ಲದೆ ಕನ್ನಡದ ಮತ್ತೊಂದು ಚಾನೆಲ್‌ ಆದ ‘ಸುವರ್ಣ ನ್ಯೂಸ್‌’ಗೆ ಕೂಡಾ ತಬ್ಲೀಘಿಗಳ ವಿರುದ್ದ ಕಾರ್ಯಕ್ರಮ ಮಾಡಿದ್ದಕ್ಕೆ 50 ಸಾವಿರ ದಂಡವನ್ನು ಹಾಕಿತ್ತು. ಜೊತೆಗೆ ಆದೇಶದಲ್ಲಿ, “ಕಾರ್ಯಕ್ರಮದಲ್ಲಿ ಕೊರೊನಾ ವೈರಸ್ ಹರಡುವಿಕೆಯ ಸಂಪೂರ್ಣ ಆಪಾದನೆಯನ್ನು ತಬ್ಲಿಘಿ ಜಮಾಅತ್‌ ಮೇಲೆ ಹಾಕಲಾಗಿದ್ದು, ಅದನ್ನು ನಿರ್ದಿಷ್ಟ ಸಮುದಾಯದ ವಿರುದ್ದ ತಿರುಗಿಸಲಾಗಿದೆ. ಜೊತೆಗೆ ಕಾರ್ಯಕ್ರಮಗಳ ಶೀರ್ಷಿಕೆಗಳು ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಕಪಟತೆಯನ್ನು ಹೊಂದಿವೆ.

ಈ ಕಾರ್ಯಕ್ರಮಗಳಲ್ಲಿ ಖಂಡಿತವಾಗಿಯೂ ಸಮತೋಲನ, ವಸ್ತುನಿಷ್ಠತೆ ಮತ್ತು ನಿಷ್ಪಕ್ಷಪಾತತೆಯ ಕೊರತೆಯಿದೆ. ಅಲ್ಲದೆ ಈ ಕಾರ್ಯಕ್ರಮಗಳು ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಬಹಿರಂಗವಾಗಿ ಪೂರ್ವಾಗ್ರಹ ಪೀಡಿತವಾಗಿದ್ದವು” ಎಂದು ಹೇಳಿತ್ತು.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...