Homeಕರ್ನಾಟಕಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

- Advertisement -
- Advertisement -

ಕೊರೊನಾ ಮೊದಲನೆ ಅಲೆಯ ಸಮಯದಲ್ಲಿ ಸೋಂಕು ಹರಡಲು ತಬ್ಲೀಘಿಗಳೇ ಕಾರಣ ಎಂಬ ಕಾರ್ಯಕ್ರಮವನ್ನು ಮಾಡಿದ್ದ ‘ನ್ಯೂಸ್‌ 18 ಕನ್ನಡ’ ಚಾನೆಲ್‌, ಇಂದು (ಬುಧವಾರ) ರಾತ್ರಿ 8:30-9:15 ರ ಒಳಗಾಗಿ ತನ್ನ ತಪ್ಪು ವರದಿಗಾಗಿ ಕ್ಷಮೆಯಾಚಿಸಲಿದೆ.

2020 ರ ಕೊರೊನಾ ಸಾಂಕ್ರಮಿಕ ಸಮಯದಲ್ಲಿ ತಬ್ಲೀಘಿ ಜಮಾತ್‌ ಅನ್ನು ಗುರಿಯಾಗಿಸಿ ಕೊಂಡಿದ್ದಕ್ಕೆ ಕನ್ನಡ ಚಾನೆಲ್‌ಗಳಾದ ‘ನ್ಯೂಸ್‌ 18 ಕನ್ನಡ’ ಮತ್ತು ‘ಸುವರ್ಣ ನ್ಯೂಸ್‌’ಗೆ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿದೆ. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿದೆ.

ಇದನ್ನೂ ಓದಿ: ANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

ಬೆಂಗಳೂರು ಮೂಲದ ‘ಹೇಟ್‌ ಸ್ಪೀಚ್‌ ಬೇಡ’ ಎಂಬ ದ್ವೇಷ ಭಾಷಣಗಳ ವಿರುದ್ದದ ಅಭಿಯಾವು NBSA ಗೆ ದೂರುಗಳನ್ನು ಸಲ್ಲಿಸಿ, ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ‘ನ್ಯೂಸ್‌ 18 ಕನ್ನಡ’ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ದೂರಿನ ವಿಚಾರಣೆ ನಡೆಸಿದ NBSA ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು, “… ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ ರೀತಿ ಹೆಚ್ಚು ಆಕ್ಷೇಪಾರ್ಹವಾಗಿತ್ತು. ಸುದ್ದಿ ವರದಿಯು ಶುದ್ಧ ಊಹಾಪೋಹವನ್ನು ಆಧರಿಸಿತ್ತು. ಕಾರ್ಯಕ್ರಮದ ಧ್ವನಿ, ವಸ್ತು, ಭಾಷೆ ಒರಟಾಗಿದ್ದು, ಪೂರ್ವಾಗ್ರಹ ಮತ್ತು ಅಗೌರವದಿಂದ ಕೂಡಿತ್ತು … ” ಎಂದು ಹೇಳಿದ್ದರು.

ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ NBSA  1 ಲಕ್ಷ ದಂಡ ವಿಧಿಸಿದೆ. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಎಂದು ಚಾನೆಲ್‌ಗೆ ನಿರ್ದೇಶನ ನೀಡಿದೆ. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಪ್ರಾಧಿಕಾರವು ಚಾನೆಲ್‌ ಅನ್ನು ಕೇಳಿದೆ. ಅದರಂತೆ ಚಾನೆಲ್‌ ಇಂದು ರಾತ್ರಿ ಕ್ಷಮೆ ಕೇಳಲಿದೆ.

ಇದನ್ನೂ ಓದಿ: ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

ಈ ಬಗ್ಗೆ ಮಾಹಿತಿ ನೀಡಿರುವ ‘ಹೇಟ್‌ ಸ್ಪೀಚ್‌‌ ಬೇಡ’ ಅಭಿಯಾನವು, “ನ್ಯೂಸ್ 18 ಕನ್ನಡವು ‘ವಿಷ’, ‘ನರಕ’, ‘ನಿಜಾಮುದ್ದೀನ್ ನಂಜು’ ಮುಂತಾದ ಪದಗಳನ್ನು ಬಳಸಿ, ತಬ್ಲಿಘಿ ಜಮಾಅತ್ ವಿರುದ್ಧ ಕೋಮು ಮತ್ತು ದ್ವೇಷದ ಪ್ರಸಾರಕ್ಕಾಗಿ, ನ್ಯೂಸ್ 18 ಕನ್ನಡಕ್ಕೆ ಕ್ಷಮೆಯಾಚನೆಯನ್ನು ಪ್ರಸಾರ ಮಾಡಲು ‘ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ’ (NBSA) ಆದೇಶಿಸಿದೆ. ಅಲ್ಲದೆ 1 ಲಕ್ಷ ದಂಡವನ್ನೂ ವಿಧಿಸಿದೆ. ಇವತ್ತು ರಾತ್ರಿ 8:30 PM – 9:15 PM ನಡುವೆ ನ್ಯೂಸ್‌ 18 ಕನ್ನಡ ವೀಕ್ಷಿಸಿ. NBSA ಆದೇಶದಂತೆ ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಕ್ಷಮೆಯಾಚನೆಯನ್ನು ಮಾಡುತ್ತದೆಯೇ ಎಂದು ನೋಡೋಣ” ಎಂದು ಹೇಳಿದೆ.

NBSA ನ್ಯೂಸ್‌ 18 ಕನ್ನಡ ಮಾತ್ರವಲ್ಲದೆ ಕನ್ನಡದ ಮತ್ತೊಂದು ಚಾನೆಲ್‌ ಆದ ‘ಸುವರ್ಣ ನ್ಯೂಸ್‌’ಗೆ ಕೂಡಾ ತಬ್ಲೀಘಿಗಳ ವಿರುದ್ದ ಕಾರ್ಯಕ್ರಮ ಮಾಡಿದ್ದಕ್ಕೆ 50 ಸಾವಿರ ದಂಡವನ್ನು ಹಾಕಿತ್ತು. ಜೊತೆಗೆ ಆದೇಶದಲ್ಲಿ, “ಕಾರ್ಯಕ್ರಮದಲ್ಲಿ ಕೊರೊನಾ ವೈರಸ್ ಹರಡುವಿಕೆಯ ಸಂಪೂರ್ಣ ಆಪಾದನೆಯನ್ನು ತಬ್ಲಿಘಿ ಜಮಾಅತ್‌ ಮೇಲೆ ಹಾಕಲಾಗಿದ್ದು, ಅದನ್ನು ನಿರ್ದಿಷ್ಟ ಸಮುದಾಯದ ವಿರುದ್ದ ತಿರುಗಿಸಲಾಗಿದೆ. ಜೊತೆಗೆ ಕಾರ್ಯಕ್ರಮಗಳ ಶೀರ್ಷಿಕೆಗಳು ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಕಪಟತೆಯನ್ನು ಹೊಂದಿವೆ.

ಈ ಕಾರ್ಯಕ್ರಮಗಳಲ್ಲಿ ಖಂಡಿತವಾಗಿಯೂ ಸಮತೋಲನ, ವಸ್ತುನಿಷ್ಠತೆ ಮತ್ತು ನಿಷ್ಪಕ್ಷಪಾತತೆಯ ಕೊರತೆಯಿದೆ. ಅಲ್ಲದೆ ಈ ಕಾರ್ಯಕ್ರಮಗಳು ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಬಹಿರಂಗವಾಗಿ ಪೂರ್ವಾಗ್ರಹ ಪೀಡಿತವಾಗಿದ್ದವು” ಎಂದು ಹೇಳಿತ್ತು.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...