Homeಕರೋನಾ ತಲ್ಲಣಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ಕಟ್ಟಡ ಕಾರ್ಮಿಕರಿಗೆ, ಆಟೋರಿಕ್ಷಾ ಚಾಲಕರಿಗೆ, ಹೂವು ಹಣ್ಣು ಬೆಳೆಗಾರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವನ್ನು ನೀಡುವ 1250 ಕೋಟಿ ರೂ ಮೊತ್ತದ ಲಾಕ್‌ಡೌನ್ ಪ್ಯಾಕೇಜನ್ನು ಘೋಷಿಸಿತ್ತು. ಸರ್ಕಾರ ಮೊದಲ ಹಂತದ ಪ್ಯಾಕೇಜ್ ಘೋಷಿಸಿ ತಿಂಗಳು ಕಳೆದರು ಬಹುತೇಕರಿಗೆ ಸರ್ಕಾರದ ಆರ್ಥಿಕ ನೆರವು ಇದುವರೆಗೆ ತಲುಪಿಲ್ಲ. ಸರ್ಕಾರ ಘೋಷಿಸಿದ 2000 ರೂಪಾಯಿಗಳ ಆರ್ಥಿಕ ನೆರವು ಕೆಲವರ ಖಾತೆ ಜಾಮ ಆಗಿದೆ. ಜಮಾ ಆದ ಹಣ ಜನರ ಕೈಗೆ ಸೇರದೇ ಕೇಂದ್ರ ಸರ್ಕಾರದ ಹಲವು ಸಾಲ ಯೋಜನೆಗಳ ಕಂತಿಗೆ ಕಡಿತವಾಗಿಬಿಟ್ಟಿದೆ. ಸರ್ಕಾರದ ಆರ್ಥಿಕ ನೆರವಿನ ನೀರಿಕ್ಷೆಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳು ಕೈಗೆ ಬಂದ ತುತ್ತು ಬಾಯಿಗೆ ಬರದೆ ಕಷ್ಟಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 1.9 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಬಹುತೇಕರು ಇನ್ನೂ ಸರ್ಕಾರದ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ 2000 ರೂಗಳನ್ನು ಜನರ ಖಾತೆಗೆ ಹಾಕುತ್ತಿದ್ದಂತೆಯೇ ವಿವಿಧ ಸಾಲಗಳ ಕಂತಿಗೆ ಸರ್ಕಾರದ ಹಣ ಕಡಿತವಾಗಿದೆ  ಎಂದು  ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಟಕ್ಕೆ ಗುರಿಯಾಗಿದ್ದೆ. ಸರ್ಕಾರ 2,000 ರೂಪಾಯಿಗಳ ಸಹಾಯವನ್ನು ಮಾಡುತ್ತದೆ ಎಂದು ಕೇಳಿ ಖುಷಿಯಾಯಿತು. ಸರ್ಕಾರ ಹಣ ಹಾಕಿದ ತಕ್ಷಣ ಬ್ಯಾಂಕ್‌ನವರು ಅದನ್ನು ಕಡಿತ ಮಾಡಿಕೊಂಡು ಬಿಟ್ಟರು. ಸರ್ಕಾರದ ಸಹಾಯ ಕೇವಲ ಹೆಸರಿಗಷ್ಟೆ ಸೀಮಿತವಾಯಿತು ಎಂದು ಬೀದಿಬದಿ ವ್ಯಾಪಾರಿ ನಾರಾಯಣ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬ್ಯಾಂಕ್ ಖಾತೆಗೆ ಹಣಬಂದಿರುವುದಾಗಿ ನನಗೆ ಎಸ್‌ಎಂಎಸ್‌ ಬಂತು. ಹಣ ಪಡೆದುಕೊಳ್ಳಲು ಬ್ಯಾಂಕ್‌ಗೆ ಹೋದರೆ ಸರ್ಕಾರ ಹಾಕಿದ ಹಣ ನಿಮ್ಮ ಪಿಎಂ ಸ್ವನಿಧಿ ಯೋಜನೆಯ ಸಾಲಕ್ಕೆ ಕಡಿತವಾಗಿದೆ ಎಂದು ಬ್ಯಾಂಕ್‌ನವರು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಕೇಂದ್ರ ಸರ್ಕಾರದ ಯೋಜನೆಗೆ ಕಡಿತವಾದರೆ ನಮ್ಮಂತಹ ಬೀದಿ ಬದಿ ವ್ಯಾಪಾರಿಗಳು ಏನು ಮಾಡಬೇಕು ಎಂದು ಮತ್ತೊಬ್ಬ ಬೀದಿ ಬದಿ ವ್ಯಾಪಾರಿ ಶಿವಪ್ರಸಾದ್ ಸರ್ಕಾರಕ್ಕೆ ಪ್ರಶ್ನೆಯನ್ನು ಕೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯವರು ಕಳೆದ ವರ್ಷ ಅತಿಹೆಚ್ಚು ಪಿಎಂ ಸ್ವ ನಿಧಿ ಯೋಜನೆಯನ್ನು ವ್ಯಾಪಕವಾಗಿ ಜನರಿಗೆ ತಲುಪಿಸಬೇಕು ಎಂಬ ಕಾರಣಕ್ಕೆ ಅನೇಕ ಬೀದಿ ಬದಿ ವ್ಯಾಪಾರಿಗಳಿಗೆ ಕೆಂದ್ರ ಸರ್ಕಾರದ ಯೋಜನೆಯ ಅಡಿಯಲ್ಲಿ ಸಾಲವನ್ನು ನೀಡಿದರು. ಈಗ ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿರಬೇಕಾದರೆ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ 2000 ರೂ. ಆರ್ಥಿಕ ನೆರವನ್ನು ನೀಡಿವುದಾಗಿ ಘೋಷಿಸಿದೆ. ಸರ್ಕಾರದ ನೆರವು ಬಹುತೇಕ ಬೀದಿ ಬದಿ ವ್ಯಾಪಾರಿಗಳಿಗೆ ಇದು ವರೆಗೆ ತಲುಪಿಲ್ಲ. ಸರ್ಕಾರ ನೆರವು ನೀಡುವಲ್ಲಿ ಕೂಡ ಬಿಪಿಎಲ್-ಎಪಿಲ್ ಗೊಂದಲ ಸೃಷ್ಟಿಯಾಗಿದೆ. ಕೇವಲ ಬೆರಳೆಣಿಕೆಯಷ್ಟು  ಬೀದಿ ಬದಿ ವ್ಯಾಪಾರಿಗಳ ಖಾತೆಗೆ ಹಣ ಜಮೆಯಾಗಿದೆ. ಜಮೆಯಾದ ಹಣವನ್ನು ಬ್ಯಾಂಕ್‌ಗಳು ಜನರಿಗೆ ತಿಳಿಸದೇ ಪಿಎಂ ಸ್ವಾಧೀನ ಯೋಜನೆಗೆ ಕಡಿತಗೊಳಿಸಿಕೊಂಡಿದ್ದಾರೆ ಎಂದು ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಕರ್ನಾಟಕದಲ್ಲಿ ಸುಮಾರು 95,000 ಜನ ಬೀದಿ ಬದಿ ವ್ಯಾಪಾರಿಗಳು ಕೆಂದ್ರ ಸರ್ಕಾರದ ಸ್ವ ನಿಧಿ ಯೋಜನೆಯ ಅಡಿಯಲ್ಲಿ ಕಳೆದ ವರ್ಷದ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸಾಲ ಪಡೆದಿದ್ದರು. ಇವರೆಲ್ಲರ ಖಾತೆಯಿಂದ ರಾಜ್ಯ ಸರ್ಕಾರ ಹಾಕಿದ 2000 ಸಹಾಯಧನ ಕೇಂದ್ರ ಸರ್ಕಾರದ ಯಜನೆಯ ಸಾಲಕ್ಕೆ ಕಡಿತವಾಗಿದೆ. ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಕೇವಲ 1.9ಲಕ್ಷ ಜನರಿಗೆ ಮಾತ್ರ ಸರ್ಕಾರ ಆರ್ಥಿಕ ನೆರವನ್ನು ನೀಡಿದೆ. ಈ 1.9 ಲಕ್ಷ ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಜನರ ಖಾತೆಯಿಂದ ಸರ್ಕಾರ 2000 ರೂಪಾಯಿ ಹಣ ಹಾಕಿದ ಮರು ಕ್ಷಣ ಅದೇ ಹಣ ಕಡಿತಗೊಂಡಿದೆ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ನೆರವಿನ ಹಣವನ್ನು ಕಡಿತಗೊಳಿಸದಂತೆ ಬ್ಯಾಂಕ್‌ಗಳಿಗೆ ಸೂಚಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ರಂಗಸ್ವಾಮಿಯವರು ತಿಳಿಸಿದ್ದಾರೆ.

ಒಂದು ಸಲ ಖಾತೆಗೆ ಹಣ ಜಮೆಯಾದರೆ ಅದು ಆಟೋಮೆಟಿಕ್ ಆಗಿ ಕಡಿತಗೊಳ್ಳುತ್ತದೆ. ಜಮೆಯಾದ ಹಣ ಸರ್ಕಾರದ ನೆರವು ಇರಬಹುದು ಅಥವಾ ಬೇರೆ ಹಣ ಇರಬಹುದು ಅದು ಯಾವುದೆಂದು ಮುಖ್ಯವಾಗುವುದಿಲ್ಲ. ಸಾಲದ ಕಂತುಗಳಿಗೆ ಹಣ ಕಡಿತವಾಗುತ್ತದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಲಾಕ್‌ಡೌನ್‌ ಸಂಕಷ್ಟದಲ್ಲಿ ನಲುಗಿದ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಆರ್ಥಿಕ ನೆರವಿನಿಂದ ಒಂದಷ್ಟು ನಿರಾಳರಾಗಿದ್ದರು. ರಾಜ್ಯ ಸರ್ಕಾರದ ಸಹಾಯಧನವನ್ನು ಬ್ಯಾಂಕ್‌ಗಳು ಕಡಿತಗೊಳಿಸಿಕೊಂಡ ಪರಿಣಾಮ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಇದನ್ನೂ ಓದಿ :ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...