Homeಕರೋನಾ ತಲ್ಲಣಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ಕಟ್ಟಡ ಕಾರ್ಮಿಕರಿಗೆ, ಆಟೋರಿಕ್ಷಾ ಚಾಲಕರಿಗೆ, ಹೂವು ಹಣ್ಣು ಬೆಳೆಗಾರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವನ್ನು ನೀಡುವ 1250 ಕೋಟಿ ರೂ ಮೊತ್ತದ ಲಾಕ್‌ಡೌನ್ ಪ್ಯಾಕೇಜನ್ನು ಘೋಷಿಸಿತ್ತು. ಸರ್ಕಾರ ಮೊದಲ ಹಂತದ ಪ್ಯಾಕೇಜ್ ಘೋಷಿಸಿ ತಿಂಗಳು ಕಳೆದರು ಬಹುತೇಕರಿಗೆ ಸರ್ಕಾರದ ಆರ್ಥಿಕ ನೆರವು ಇದುವರೆಗೆ ತಲುಪಿಲ್ಲ. ಸರ್ಕಾರ ಘೋಷಿಸಿದ 2000 ರೂಪಾಯಿಗಳ ಆರ್ಥಿಕ ನೆರವು ಕೆಲವರ ಖಾತೆ ಜಾಮ ಆಗಿದೆ. ಜಮಾ ಆದ ಹಣ ಜನರ ಕೈಗೆ ಸೇರದೇ ಕೇಂದ್ರ ಸರ್ಕಾರದ ಹಲವು ಸಾಲ ಯೋಜನೆಗಳ ಕಂತಿಗೆ ಕಡಿತವಾಗಿಬಿಟ್ಟಿದೆ. ಸರ್ಕಾರದ ಆರ್ಥಿಕ ನೆರವಿನ ನೀರಿಕ್ಷೆಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳು ಕೈಗೆ ಬಂದ ತುತ್ತು ಬಾಯಿಗೆ ಬರದೆ ಕಷ್ಟಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 1.9 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಬಹುತೇಕರು ಇನ್ನೂ ಸರ್ಕಾರದ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ 2000 ರೂಗಳನ್ನು ಜನರ ಖಾತೆಗೆ ಹಾಕುತ್ತಿದ್ದಂತೆಯೇ ವಿವಿಧ ಸಾಲಗಳ ಕಂತಿಗೆ ಸರ್ಕಾರದ ಹಣ ಕಡಿತವಾಗಿದೆ  ಎಂದು  ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಟಕ್ಕೆ ಗುರಿಯಾಗಿದ್ದೆ. ಸರ್ಕಾರ 2,000 ರೂಪಾಯಿಗಳ ಸಹಾಯವನ್ನು ಮಾಡುತ್ತದೆ ಎಂದು ಕೇಳಿ ಖುಷಿಯಾಯಿತು. ಸರ್ಕಾರ ಹಣ ಹಾಕಿದ ತಕ್ಷಣ ಬ್ಯಾಂಕ್‌ನವರು ಅದನ್ನು ಕಡಿತ ಮಾಡಿಕೊಂಡು ಬಿಟ್ಟರು. ಸರ್ಕಾರದ ಸಹಾಯ ಕೇವಲ ಹೆಸರಿಗಷ್ಟೆ ಸೀಮಿತವಾಯಿತು ಎಂದು ಬೀದಿಬದಿ ವ್ಯಾಪಾರಿ ನಾರಾಯಣ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬ್ಯಾಂಕ್ ಖಾತೆಗೆ ಹಣಬಂದಿರುವುದಾಗಿ ನನಗೆ ಎಸ್‌ಎಂಎಸ್‌ ಬಂತು. ಹಣ ಪಡೆದುಕೊಳ್ಳಲು ಬ್ಯಾಂಕ್‌ಗೆ ಹೋದರೆ ಸರ್ಕಾರ ಹಾಕಿದ ಹಣ ನಿಮ್ಮ ಪಿಎಂ ಸ್ವನಿಧಿ ಯೋಜನೆಯ ಸಾಲಕ್ಕೆ ಕಡಿತವಾಗಿದೆ ಎಂದು ಬ್ಯಾಂಕ್‌ನವರು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಕೇಂದ್ರ ಸರ್ಕಾರದ ಯೋಜನೆಗೆ ಕಡಿತವಾದರೆ ನಮ್ಮಂತಹ ಬೀದಿ ಬದಿ ವ್ಯಾಪಾರಿಗಳು ಏನು ಮಾಡಬೇಕು ಎಂದು ಮತ್ತೊಬ್ಬ ಬೀದಿ ಬದಿ ವ್ಯಾಪಾರಿ ಶಿವಪ್ರಸಾದ್ ಸರ್ಕಾರಕ್ಕೆ ಪ್ರಶ್ನೆಯನ್ನು ಕೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯವರು ಕಳೆದ ವರ್ಷ ಅತಿಹೆಚ್ಚು ಪಿಎಂ ಸ್ವ ನಿಧಿ ಯೋಜನೆಯನ್ನು ವ್ಯಾಪಕವಾಗಿ ಜನರಿಗೆ ತಲುಪಿಸಬೇಕು ಎಂಬ ಕಾರಣಕ್ಕೆ ಅನೇಕ ಬೀದಿ ಬದಿ ವ್ಯಾಪಾರಿಗಳಿಗೆ ಕೆಂದ್ರ ಸರ್ಕಾರದ ಯೋಜನೆಯ ಅಡಿಯಲ್ಲಿ ಸಾಲವನ್ನು ನೀಡಿದರು. ಈಗ ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿರಬೇಕಾದರೆ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ 2000 ರೂ. ಆರ್ಥಿಕ ನೆರವನ್ನು ನೀಡಿವುದಾಗಿ ಘೋಷಿಸಿದೆ. ಸರ್ಕಾರದ ನೆರವು ಬಹುತೇಕ ಬೀದಿ ಬದಿ ವ್ಯಾಪಾರಿಗಳಿಗೆ ಇದು ವರೆಗೆ ತಲುಪಿಲ್ಲ. ಸರ್ಕಾರ ನೆರವು ನೀಡುವಲ್ಲಿ ಕೂಡ ಬಿಪಿಎಲ್-ಎಪಿಲ್ ಗೊಂದಲ ಸೃಷ್ಟಿಯಾಗಿದೆ. ಕೇವಲ ಬೆರಳೆಣಿಕೆಯಷ್ಟು  ಬೀದಿ ಬದಿ ವ್ಯಾಪಾರಿಗಳ ಖಾತೆಗೆ ಹಣ ಜಮೆಯಾಗಿದೆ. ಜಮೆಯಾದ ಹಣವನ್ನು ಬ್ಯಾಂಕ್‌ಗಳು ಜನರಿಗೆ ತಿಳಿಸದೇ ಪಿಎಂ ಸ್ವಾಧೀನ ಯೋಜನೆಗೆ ಕಡಿತಗೊಳಿಸಿಕೊಂಡಿದ್ದಾರೆ ಎಂದು ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಕರ್ನಾಟಕದಲ್ಲಿ ಸುಮಾರು 95,000 ಜನ ಬೀದಿ ಬದಿ ವ್ಯಾಪಾರಿಗಳು ಕೆಂದ್ರ ಸರ್ಕಾರದ ಸ್ವ ನಿಧಿ ಯೋಜನೆಯ ಅಡಿಯಲ್ಲಿ ಕಳೆದ ವರ್ಷದ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸಾಲ ಪಡೆದಿದ್ದರು. ಇವರೆಲ್ಲರ ಖಾತೆಯಿಂದ ರಾಜ್ಯ ಸರ್ಕಾರ ಹಾಕಿದ 2000 ಸಹಾಯಧನ ಕೇಂದ್ರ ಸರ್ಕಾರದ ಯಜನೆಯ ಸಾಲಕ್ಕೆ ಕಡಿತವಾಗಿದೆ. ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಕೇವಲ 1.9ಲಕ್ಷ ಜನರಿಗೆ ಮಾತ್ರ ಸರ್ಕಾರ ಆರ್ಥಿಕ ನೆರವನ್ನು ನೀಡಿದೆ. ಈ 1.9 ಲಕ್ಷ ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಜನರ ಖಾತೆಯಿಂದ ಸರ್ಕಾರ 2000 ರೂಪಾಯಿ ಹಣ ಹಾಕಿದ ಮರು ಕ್ಷಣ ಅದೇ ಹಣ ಕಡಿತಗೊಂಡಿದೆ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ನೆರವಿನ ಹಣವನ್ನು ಕಡಿತಗೊಳಿಸದಂತೆ ಬ್ಯಾಂಕ್‌ಗಳಿಗೆ ಸೂಚಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ರಂಗಸ್ವಾಮಿಯವರು ತಿಳಿಸಿದ್ದಾರೆ.

ಒಂದು ಸಲ ಖಾತೆಗೆ ಹಣ ಜಮೆಯಾದರೆ ಅದು ಆಟೋಮೆಟಿಕ್ ಆಗಿ ಕಡಿತಗೊಳ್ಳುತ್ತದೆ. ಜಮೆಯಾದ ಹಣ ಸರ್ಕಾರದ ನೆರವು ಇರಬಹುದು ಅಥವಾ ಬೇರೆ ಹಣ ಇರಬಹುದು ಅದು ಯಾವುದೆಂದು ಮುಖ್ಯವಾಗುವುದಿಲ್ಲ. ಸಾಲದ ಕಂತುಗಳಿಗೆ ಹಣ ಕಡಿತವಾಗುತ್ತದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಲಾಕ್‌ಡೌನ್‌ ಸಂಕಷ್ಟದಲ್ಲಿ ನಲುಗಿದ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಆರ್ಥಿಕ ನೆರವಿನಿಂದ ಒಂದಷ್ಟು ನಿರಾಳರಾಗಿದ್ದರು. ರಾಜ್ಯ ಸರ್ಕಾರದ ಸಹಾಯಧನವನ್ನು ಬ್ಯಾಂಕ್‌ಗಳು ಕಡಿತಗೊಳಿಸಿಕೊಂಡ ಪರಿಣಾಮ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಇದನ್ನೂ ಓದಿ :ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...