Homeಕರ್ನಾಟಕಬಿಜೆಪಿಯ ಆಡಳಿತದಲ್ಲಿ ರಾಜ್ಯ ‘ನತದೃಷ್ಟ ಕರ್ನಾಟಕ’ವಾಗಿದೆ: ಕಾಂಗ್ರೆಸ್‌ ಕಿಡಿ

ಬಿಜೆಪಿಯ ಆಡಳಿತದಲ್ಲಿ ರಾಜ್ಯ ‘ನತದೃಷ್ಟ ಕರ್ನಾಟಕ’ವಾಗಿದೆ: ಕಾಂಗ್ರೆಸ್‌ ಕಿಡಿ

- Advertisement -
- Advertisement -

ಸದಾನಂದ ಗೌಡ ಅವರು ಒಕ್ಕೂಟ ಸರ್ಕಾರದ ಮಂತ್ರಿಯಾಗಿರುವುದೂ ಒಂದೇ ನಾಯಿ ಮೊಲೆಯಲ್ಲಿ ಹಾಲಿರುವುದೂ ಒಂದೇ ಎಂದು ಕರ್ನಾಟಕ ಕಾಂಗ್ರೆಸ್ ಬುಧವಾರ ಆಕ್ರೋಶ ವ್ಯಕ್ತಪಡಿಸಿದೆ. ರೈತರು ಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ತನ್ನ ಸ್ವಂತ ರಾಜ್ಯಕ್ಕೆ ಗೊಬ್ಬರ ಪೂರೈಸದೆ ನಗುತ್ತಲೇ ಜಾರಿಕೊಳ್ಳುವ ಇವರನ್ನು ಕರ್ನಾಟಕದವರು ಎನ್ನಲು ನಾಚಿಕೆಯಾಗುತ್ತದೆ. ಯಾವ ಪುರುಷಾರ್ಥಕ್ಕೆ ಇವರಿಗೆ ಮಂತ್ರಿಗಿರಿ? ಎಂದು ಕಾಂಗ್ರೆಸ್ ಹೇಳಿದೆ.

ಇಂದು ಪಕ್ಷದ ಅಧೀಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಿರುವ ಕಾಂಗ್ರೆಸ್, “ಡಿ.ವಿ. ಸದಾನಂದ ಗೌಡ ಅವರು ಒಕ್ಕೂಟ ಸರ್ಕಾರದ ಮಂತ್ರಿಯಾಗಿರುವುದೂ ಒಂದೇ ನಾಯಿ ಮೊಲೆಯಲ್ಲಿ ಹಾಲಿರುವುದೂ ಒಂದೇ. ರಾಜ್ಯದಲ್ಲಿ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ತನ್ನ ಸ್ವಂತ ರಾಜ್ಯಕ್ಕೆ ಗೊಬ್ಬರ ಪೂರೈಸದೆ ನಗುತ್ತಲೇ ಜಾರಿಕೊಳ್ಳುವ ಇವರನ್ನು ಕರ್ನಾಟಕದವರು ಎನ್ನಲು ನಾಚಿಕೆಯಾಗುತ್ತದೆ. ಯಾವ ಪುರುಷಾರ್ಥಕ್ಕೆ ಇವರಿಗೆ ಮಂತ್ರಿಗಿರಿ?” ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

“ಫಾರ್ಮಾಸೂಟಿಕಲ್ ಮಂತ್ರಿಯಾಗಿ ರಾಜ್ಯಕ್ಕೆ ರೆಮಿಡಿಸಿವಿರ್, ಲಸಿಕೆ ಹಾಗೂ ಅಂಪೊಟರಿಸನ್ ಹಂಚಿಕೆಯಲ್ಲಿ ನ್ಯಾಯ ಸಲ್ಲಿಸದ ಸದಾನಂದ ಗೌಡರು ರಸಗೊಬ್ಬರ ಸಚಿವರಾಗಿಯೂ ನಮ್ಮ ರೈತರಿಗೆ ಗೊಬ್ಬರ ಒದಗಿಸಲಾಗಲಿಲ್ಲ” ಎಂದು ಕಾಂಗ್ರೆಸ್‌ ಹೇಳಿದೆ.

“ಸದಾನಂದ ಗೌಡ ಅವರೇ, ಎಲ್ಲವೂ ಪಿಎಂ ಕಚೇರಿಯಲ್ಲಿ ನಿರ್ವಹಣೆಯಾಗುತ್ತಿದೆ, ನಿಮ್ಮ ಕೈಯಲ್ಲಿ ಏನೂ ಇಲ್ಲ ಎನ್ನುವ ಸತ್ಯವನ್ನಾದರೂ ಹೇಳಿಬಿಡಿ” ಎಂದು ಕಾಂಗ್ರೆಸ್ ಕಿಡಿ ಕಾರಿದೆ.

“ಬಿಜೆಪಿಯ ಆಡಳಿತದಲ್ಲಿ ರಾಜ್ಯವು ‘ನತದೃಷ್ಟ ಕರ್ನಾಟಕ’ವಾಗಿದೆ. ಕರೋನಾ ಸೋಂಕಿತರಿಗೆ ಆಕ್ಸಿಜನ್ ಕೊಡಲಿಲ್ಲ, ಬೆಡ್ ಒದಗಿಸಲಿಲ್ಲ, ರೆಮಿಡಿಸಿವಿರ್ ನೀಡಲಿಲ್ಲ, ಅಂಪೊಟರಿಸನ್ ಇಲ್ಲ, ಚಿಕಿತ್ಸೆ ಇಲ್ಲವೇ ಇಲ್ಲ, ಸಮರ್ಪಕ ಆರ್ಥಿಕ ಪ್ಯಾಕೇಜ್ ಇಲ್ಲ ಈಗ ಮುಂಗಾರಿನಲ್ಲಿ ರೈತರಿಗೆ ಗೊಬ್ಬರ ಕೊಡುತ್ತಿಲ್ಲ, ಬಿತ್ತನೆ ಬೀಜ ಇಲ್ಲವೇ ಇಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...