Homeಅಂತರಾಷ್ಟ್ರೀಯವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

- Advertisement -
- Advertisement -

ಚಿನ್ನ, ವಜ್ರಗಳು ಸಿಗುವುದಾದರೆ ಜನರು ಎಷ್ಟು ದೂರ ಬೇಕಾದರೂ ಹುಡುಕಾಟವನ್ನು ನಡೆಸುತ್ತಾರೆ. ನಿಧಿ ಶೋಧವನ್ನು ನಡೆಸುತ್ತಾರೆ. ನೆಲದಾಳವನ್ನು ಅಗೆಯುತ್ತಾರೆ. ಎಲ್ಲೊ ಕೆಲವರು ರಾತ್ರಿ ಹೊತ್ತು ನಿಧಿ ಶೋಧವನ್ನು ನಡೆಸಿರುವ, ನೆಲವನ್ನು ಅಗೆದಿರುವ, ದೇವಸ್ಥಾನಗಳ ಸ್ಥಳವನ್ನು ಒಡೆದಿರುವ ಘಟನೆಗಳು ಇದುವರೆಗೆ ನಡೆಯುತ್ತಿದ್ದವು. ಸಾವಿರಾರು ಜನರು ವಜ್ರಗಳಿಗಾಗಿ ಒಮ್ಮೆಲೆ ಮುಗಿಬಿದ್ದು ನೆಲವನ್ನು ಅಗೆಯುತ್ತಿರುವ ಘಟನೆಗಳು ಇದುವರೆಗೆ ವರದಿಯಾಗಿಲ್ಲ. ಈಗ ನೂರಾರು ಜನರು ತಮ್ಮಷ್ಟಕ್ಕೆ ಅನೇಕ ದಿನಗಳಿಂದ ನಿಧಿಗಾಗಿ ನೆಲವನ್ನು ಅಗೆಯುತ್ತಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

ದಕ್ಷಿಣ ಆಫ್ರಿಕಾ ಜಗತ್ತಿನಲ್ಲಿಯೇ ಅತಿಹೆಚ್ಚು ವಜ್ರದ ಗಣಿಯನ್ನು ಹೊಂದಿರುವ ದೇಶ. ಜಗತ್ತಿನ ಮುಕ್ಕಾಲು ಪಾಲು ವಜ್ರಗಳು ದಕ್ಷಿಣ ಆಫ್ರಿಕಾದಿಂದಲೇ ರಫ್ತಾಗುತ್ತವೆ. ದಕ್ಷಿಣ ಆಫ್ರಿಕಾದ ಹತ್ತಾರು ವಜ್ರದ ಗಣಿಯಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಾರೆ. ಜನರು ಹೊಸ ಹೊಸ ಪ್ರದೇಶಗಳಲ್ಲಿ ವಜ್ರದ ನಿಕ್ಷೇಪ ಸಿಗುವ ನಿರೀಕ್ಷೆಯಿಂದ ನೆಲವನ್ನು ಅಗೆಯುವ ಕೆಲಸವನ್ನೂ ಮಾಡುತ್ತಾರೆ. ಆದರೆ ದಕ್ಷಿಣ ಆಫ್ರಿಕಾದ ಪ್ರಾಂತ್ಯದ ಕ್ವಾ ಜುಲು ನಟಾಲ್‌ನ ಒಂದು ಸಣ್ಣ ಹಳ್ಳಿಯಲ್ಲಿ ಕಳೆದ ಒಂದು ತಿಂಗಳಿಂದ ವಿಚಿತ್ರ ಘಟನೆಗಳು ನಡೆಯತೊಡಗಿವೆ.

ಕೆಲವು ದಿನಗಳ ಹಿಂದೆ ನಟಾಲ್‌ನ ಸಣ್ಣ ಹಳ್ಳಿಯಲ್ಲಿ ದಾರಿ ಹೋಕರೊಬ್ಬರಿಗೆ ವಜ್ರದ ತುಂಡೊಂದು ಸಿಕ್ಕಿತು ಎಂಬ ಸುದ್ದಿ ಹರಿದಾಡತೊಡಗಿತ್ತು. ವಜ್ರ ಸಿಕ್ಕಿದ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆಯೂ ಹರಡಿ ಮಾರನೇ ದಿನದಿಂದ ಸಾವಿರಾರು ಜನರು ನಟಾಲ್ ಹಳ್ಳಿಗೆ ಬಂದು ನೆಲ ಅಗೆಯಲು ಪ್ರಾರಂಭಿಸಿದ್ದಾರೆ. ವಜ್ರದ ಹುಡುಕಾಟದಲ್ಲಿ ತೊಡಗಿದ ಕೆಲವರು ತಮಗೆ ವಜ್ರ ಸಿಕ್ಕಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವರು ನಮ್ಮಲ್ಲಿ ತುಂಬಾ ಬಡತನವಿದೆ. ಒಳ್ಳೆಯ ಆಹಾರ, ಒಳ್ಳೆಯ ಬಟ್ಟೆ, ಒಳ್ಳೆಯ ಮನೆ, ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿಲ್ಲ. ಒಂದು ವೇಳೆ ವಜ್ರ ದೊರೆತರೆ ನಮಗೆ ಒಳ್ಳೆಯ ಜೀವನ ಸಿಗಬಹುದು ಎಂಬ ನಿರೀಕ್ಷೆ ಇದೆ. ಹಾಗಾಗಿ ಇಲ್ಲಿ ವಜ್ರದ ಶೋಧಕ್ಕೆ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಸರ್ಕಾರ ನಟಾಲು ಗ್ರಾಮದಲ್ಲಿ ವಜ್ರದ ನಿಕ್ಷೇಪವಿರುವುದನ್ನು ಇದುವರೆಗೆ ಖಚಿತ ಪಡಿಸಿಲ್ಲ. ಸರ್ಕಾರದ ಭೂಗೋಳ ಶಾಸ್ತ್ರಜ್ಞರು ನಟಾಲು ಹಳ್ಲಿಯಲ್ಲಿ ವಜ್ರ ಇರುವ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾದ ಕಾನೂನಿನ ಪ್ರಕಾರ ಜನರು ವಜ್ರವನ್ನು ನೆಲದಾಳದಿಂದ ತೆಗೆಯುವಂತಿಲ್ಲ. ನೆಲದಡಿಯ ಖನಿಜಗಳು ಸರ್ಕಾರಕ್ಕೆ ಸೇರಿದ್ದಾಗಿದೆ.

ಕಾನೂನು ಏನೇ ಇರಲಿ ನಟಾಲು ಗ್ರಾಮಕ್ಕೆ ವಜ್ರ ಹುಡುಕಲು ಬರುವವರ ಸಂಖ್ಯೆ ದಿನದಿಂದ ಹೆಚ್ಚುತ್ತಲೇ ಇದೆ. ಜನರು ವಜ್ರದಿಂದ ತಮ್ಮ ಜೀವನ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿ ಅದೃಷ್ಟ ಪರೀಕ್ಷೆಯಲ್ಲಿ ತೊಡಗುತ್ತಲೆ ಇದ್ದಾರೆ.


ಇದನ್ನೂ ಓದಿ : ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...