Homeಮುಖಪುಟ‘ಕೇಂದ್ರ ಸರ್ಕಾರ’ ಅಲ್ಲ, ‘ಒಕ್ಕೂಟ ಸರ್ಕಾರ’: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌‌!

‘ಕೇಂದ್ರ ಸರ್ಕಾರ’ ಅಲ್ಲ, ‘ಒಕ್ಕೂಟ ಸರ್ಕಾರ’: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌‌!

- Advertisement -
- Advertisement -

ಮೋದಿ ಸರ್ಕಾರವನ್ನು “ಕೇಂದ್ರ ಸರ್ಕಾರ” ಎಂದು ಉಲ್ಲೇಖಿಸುವುದರ ಬದಲು “ಒಕ್ಕೂಟ ಸರ್ಕಾರ” ಎಂದೇ ತಮಿಳುನಾಡು ಸರ್ಕಾರ ಉಲ್ಲೇಖಿಸುತ್ತದೆ ಎಂದು ಮುಖ್ಯಮಂತ್ರಿ ಬುಧವಾರ ಸ್ಪಷ್ಟಪಡಿಸಿದ್ದಾರೆ. 1957 ರಲ್ಲಿ ಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ “ಇಂಡಿಯನ್ ಯೂನಿಯನ್” ಎಂಬ ಪದವನ್ನು ಬಳಸಿದ್ದನ್ನು ಅವರು ವಿಧಾನಸಭೆಯಲ್ಲಿ ನೆನಪಿಸಿಕೊಂಡಿದ್ದಾರೆ.

ಸಂವಿಧಾನ ಕೂಡಾ ಭಾರತವನ್ನು “ರಾಜ್ಯಗಳ ಒಕ್ಕೂಟ” ಎಂದು ಬಣ್ಣಿಸಿದೆ. ನಾವು ‘‘ಒಕ್ಕೂಟ’’ ಎಂದು ಬಳಸಿದ್ದೇವೆ ಮತ್ತು ಹಾಗೆ ಬಳಸುವುದನ್ನು ಮುಂದುವರಿಸುತ್ತೇವೆ ಎಂದು ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಸ್ಟಾಲಿನ್ ಅವರು ಅಧಿಕಾರ ವಹಿಸಿದಾಗಿನಿಂದ ಮೋದಿ ಸರ್ಕಾರವನ್ನು “ಕೇಂದ್ರ ಸರ್ಕಾರ” ಎಂದು ಕರೆಯುವುದರ ಬದಲಿಗೆ “ಒಕ್ಕೂಟ ಸರ್ಕಾರ” ಎಂಬ ಪದವನ್ನು ಬಳಸಲು ಪ್ರಾರಂಭಿಸಿದ್ದರು.

ಇದನ್ನೂ ಓದಿ: ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ವಿಧಾನಸಭೆಯಲ್ಲಿನ ಬಿಜೆಪಿ ನಾಯಕ ನೈನಾರ್ ನಾಗೇಂದ್ರನ್ ಅವರು “ಒಕ್ಕೂಟ” ಎಂಬ ಪದವನ್ನು ಬಳಸುವುದರ ಹಿಂದೆ ಏನಾದರೂ ಉದ್ದೇಶವಿದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿ ಮುಖ್ಯಮಂತ್ರಿಯಿಂದ ಪ್ರತಿಕ್ರಿಯೆ ಬಯಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸ್ಟಾಲಿನ್, “ಈ ಪದ ಬಳಕೆಯ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ಏಕೆಂದರೆ ರಾಜಾಜಿ(ಸಿ. ರಾಜಗೋಪಾಲಾಚಾರಿ) ಅವರೆ ಅಧಿಕಾರದ ಕೇಂದ್ರೀಕರಣದ ವಿರುದ್ಧ ಮತ್ತು ನಿಜವಾದ ಫೆಡರಲಿಸಂ ಪರವಾಗಿ ಮಾತನಾಡಿದ್ದರು. ದಿವಂಗತ ಮಾ.ಪೋ.ಸಿ.(ಶಿವಜ್ಞನಂ) ಸಮಷ್ಠಿ ಎಂಬ ಪದವನ್ನು ಬಳಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಒಕ್ಕೂಟ” ಎಂಬ ಪದದ ಬಳಕೆಯನ್ನು “ಸಾಮಾಜಿಕ ಅಪರಾಧ” ಎಂದು ಪರಿಗಣಿಸುವ ಅಗತ್ಯವಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ. “ನಾವು ಸಂವಿಧಾನದಲ್ಲಿರುವುದನ್ನು ಮಾತ್ರ ಬಳಸುತ್ತಿದ್ದೇವೆ. ಇಂಡಿಯಾ, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ” ಎಂದು ಅವರು ತಿಳಿಸಿದ್ದಾರೆ.

ಭಾರತವನ್ನು ಅದರ ರಾಜ್ಯಗಳು ರಚಿಸಿವೆ ಎಂದು ಅವರು ಹೇಳಿದ್ದಾರೆ. “ನಮ್ಮ ನಾಯಕರಾದ ಅಣ್ಣಾ (ಸಿ.ಎನ್. ಅನ್ನದುರೈ) ಮತ್ತು ಕಲೈನಾರ್ (ಎಂ. ಕರುಣಾನಿಧಿ) ಅವರು ಬಳಸದ ಪದವನ್ನು ಕೆಲವರು ಬಳಸುತ್ತಿದ್ದಾರೆಂದು ಕೆಲವರು ಆರೋಪಿಸುತ್ತಾರೆ. ಆದರೆ ಡಿಎಂಕೆ 1957 ರಲ್ಲಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಇಂಡಿಯನ್ ಯೂನಿಯನ್ ಎಂಬ ಪದವನ್ನು ಬಳಸಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ ನಟರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...