Homeಮುಖಪುಟಸಂಪಾದಕೀಯ; ಮೈಮನಸ್ಸುಗಳಲ್ಲಿ ನಾಟಿರುವ ಜಾತಿಯೆಂಬ ಅಪಾಯಕಾರಿ ಸುಳಿಯಲ್ಲಿ ಬ್ರಾಹ್ಮಣ್ಯದ ಪಾಳೆಗಾರಿಕೆ

ಸಂಪಾದಕೀಯ; ಮೈಮನಸ್ಸುಗಳಲ್ಲಿ ನಾಟಿರುವ ಜಾತಿಯೆಂಬ ಅಪಾಯಕಾರಿ ಸುಳಿಯಲ್ಲಿ ಬ್ರಾಹ್ಮಣ್ಯದ ಪಾಳೆಗಾರಿಕೆ

- Advertisement -
- Advertisement -

ಕರ್ನಾಟಕದಲ್ಲಿ ಹಲವು ಕಾಲಘಟ್ಟಗಳಲ್ಲಿ ಸಾಂಸ್ಕೃತಿಕ ಚರ್ಚೆ-ವಾಗ್ವಾದಗಳು ಜರುಗಿವೆ. ಆ ವಾಗ್ವಾದಗಳಲ್ಲಿ ಹಲವು ಬಾರಿ ಜಾತಿಯ ವಿಷಯವೂ ಮುನ್ನೆಲೆಗೆ ಬಂದು ಒಂದಷ್ಟು ಹೊಸ ತಿಳಿವಳಿಕೆಗೆ ದಾರಿಮಾಡಿಕೊಟ್ಟಿದೆ. ಕುವೆಂಪು ಅವರ ಶೂದ್ರತಪಸ್ವಿ ನಾಟಕದ ವಾಗ್ವಾದ ಇರಬಹುದು, ಬಿ.ಬಸವಲಿಂಗಪ್ಪನವರ ಬೂಸಾ ಪ್ರಕರಣ ಇರಬಹುದು, ಸಾಂಸ್ಕೃತಿಕ ಮತ್ತು ರಾಜಕೀಯ ರಂಗಗಳಲ್ಲಿ ಬಿಸಿಬಿಸಿ ಜಾತಿ ಚರ್ಚೆಗಳು ನಡೆದಿವೆ. ಬ್ರಾಹ್ಮಣ್ಯ ಮತ್ತು ಪುರೋಹಿತಶಾಹಿ ಪಾರಮ್ಯವನ್ನು ಪ್ರಶ್ನಿಸಲಾಗಿದೆ. ಆದರೂ ಬ್ರಾಹ್ಮಣ್ಯದ ಯಜಮಾನಿಕೆಯನ್ನು ನಮ್ಮ ಸಮಾಜದಿಂದ ತೊಲಗಿಸುವುದು ಸುಲಭ ಮಾತಲ್ಲ. ಈಗ ಕನ್ನಡ ಚಿತ್ರನಟರಾದ ಚೇತನ್ ಅಹಿಂಸ ಮತ್ತು ಕಿರಣ್ ಶ್ರೀನಿವಾಸ್ ಈ ಚರ್ಚೆಗೆ ಹೊಸ ಹೊಳಪು ನೀಡಿದ್ದು, ಚೇತನ್ ಅವರ ಮೇಲೆ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನಗರ ಪೊಲೀಸ ಕಮಿಶನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದರು. ಅದಲ್ಲದೆ ರಾಜ್ಯದ ಹಲವು ಕಡೆ ಚೇತನ್ ವಿರುದ್ಧ ದೂರು ದಾಖಲಾಗಿದ್ದು, ಅವರು ಪೊಲೀಸ್ ವಿಚಾರಣೆಗೂ ಹಾಜರಾಗಿದ್ದಾರೆ. ತಾವು ನುಡಿದಿರುವ ಮಾತುಗಳಿಗೆ ಬದ್ಧರಾಗಿರುವುದಾಗಿಯೂ ಮತ್ತು ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿಯೂ ಚೇತನ್ ತಿಳಿಸಿ ಘನತೆಯನ್ನು ಮೆರೆದಿದ್ದಾರೆ. ತಾವು ಒಂದು ನಿರ್ದಿಷ್ಟ ಜಾತಿಯ ವಿರುದ್ಧ ಮಾತನಾಡಿಲ್ಲ; ಬದಲಾಗಿ ಬ್ರಾಹ್ಮಣ್ಯದ ವಿರುದ್ಧ ಮಾತನಾಡಿದ್ದೀನಿ, ತಾರತಮ್ಯವನ್ನು ಪೋಷಿಸುವ ಬ್ರಾಹ್ಮಣ್ಯ ಇಂದು ಎಲ್ಲ ಜಾತಿಗಳಲ್ಲೂ ಇದೆ ಎಂದು ಅವರು ಸ್ಪಷ್ಟಪಡಿಸಿದ್ದರೂ ಅವರ ವಿರುದ್ಧ ಹಲವು ವೇದಿಕೆಗಳಲ್ಲಿ ನಿಂದನೆಯನ್ನು ಸುರಿಸಲಾಗುತ್ತಿದೆ.

1938ರಲ್ಲಿ ನಡೆದ ರೈಲ್ವೇ ನಿಮ್ನವರ್ಗದ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡುತ್ತಾ ಬಾಬಾಸಾಹೇಬರು ಬ್ರಾಹ್ಮಣ್ಯವನ್ನು ಹೀಗೆ ವ್ಯಾಖ್ಯಾನಿಸುತ್ತಾರೆ: “ನನ್ನ ದೃಷ್ಟಿಯಲ್ಲಿ, ಈ ದೇಶದ ಕಾರ್ಮಿಕರು ಇಬ್ಬರು ಶತ್ರುಗಳ ಜೊತೆಗೆ ಹೋರಾಡಬೇಕಿದೆ. ಆ ಇಬ್ಬರು ಶತ್ರುಗಳು ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿ” ಎನ್ನುವ ಅವರು ಮುಂದುವರೆದು “ಬ್ರಾಹ್ಮಣ್ಯ ಅಂದರೆ ಬ್ರಾಹ್ಮಣರು ಒಂದು ಸಮುದಾಯವಾಗಿ ಹೊಂದಿರುವ ಅಧಿಕಾರ, ಸವಲತ್ತುಗಳು ಮತ್ತು ಹಿತಾಸಕ್ತಿಯಷ್ಟೇ ಅಲ್ಲ. ಆ ದೃಷ್ಟಿಯಲ್ಲಿ ನಾನು ಆ ಪದವನ್ನು ಬಳಸುತ್ತಿಲ್ಲ. ಬ್ರಾಹ್ಮಣ್ಯ ಅಂದರೆ ನನ್ನ ಪ್ರಕಾರ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಭಾವನೆಯನ್ನು ಇಲ್ಲವಾಗಿಸುವುದು. ಆ ನಿಟ್ಟಿನಲ್ಲಿ ಇದು ಎಲ್ಲಾ ವರ್ಗಗಳಲ್ಲೂ ವ್ಯಾಪಕವಾಗಿದೆ ಮತ್ತು ಇದರ ಹುಟ್ಟಿಗೆ ಅವರೇ ಕಾರಣರಾಗಿದ್ದರೂ ಬ್ರಾಹ್ಮಣರಲ್ಲಿ ಮಾತ್ರ ಅದು ಉಳಿದಿದೆ ಎನ್ನಲಾಗುವುದಿಲ್ಲ” ಎನ್ನುತ್ತಾರೆ. ಮುಂದುವರೆದು “…ಬ್ರಾಹ್ಮಣ್ಯ ಕೆಲವು ವರ್ಗಗಳಿಗೆ ಮಾತ್ರ ಸವಲತ್ತಿನ ಸ್ಥಾನ ನೀಡುತ್ತದೆ. ಕೆಲವು ವರ್ಗಗಳಿಗೆ ಅದು ಅವಕಾಶದ ಸಮಾನತೆಯನ್ನು ನಿರಾಕರಿಸುತ್ತದೆ” ಎಂದು ವ್ಯಾಖ್ಯಾನಿಸಿ, ಅಂದಿನ ಯೂನಿಯನ್ ಲೀಡರ್‌ಗಳಲ್ಲಿ ಇದ್ದ ಬ್ರಾಹ್ಮಣ್ಯವನ್ನೂ ವಿಮರ್ಶಿಸಿ, ಟೀಕಿಸಿ ನಿಮ್ನವರ್ಗದ ಕಾರ್ಮಿಕರ ಹಿತವನ್ನು ಕಾಪಾಡುವಂತಹ ಹೊಸ ಯೂನಿಯನ್ ಅವಶ್ಯಕತೆಯ ಬಗ್ಗೆ, ಆ ಯೂನಿಯನ್ ರಾಜಕೀಯ ಅಧಿಕಾರಕ್ಕೆ ಪ್ರಯತ್ನಿಸಬೇಕಾದ ಬಗ್ಗೆ ಬಾಬಾಸಾಹೇಬರು ಅಂದು ಮಾಡಿದ ಭಾಷಣ ಐತಿಹಾಸಿಕವಾದದ್ದು.

ಬ್ರಾಹ್ಮಣ್ಯದ ಬಗ್ಗೆ ಇಷ್ಟು ವರ್ಷಗಳಿಂದ ಹೊಮ್ಮಿರುವ ಸ್ಪಷ್ಟವಾದ ವಿಚಾರವನ್ನು ಕಡೆಗಣಿಸಿ, ಈ ನೆಲದ ಪಾರಂಪರಿಕ ಜಾತಿ ತಾರತಮ್ಯವನ್ನು ಬಯಸುವ ಮನಸ್ಸುಗಳು ಇಂದು ಮತ್ತೆ ರಚ್ಚೆ ಹಿಡಿದಿವೆ. ಇದು ಕುವೆಂಪು ಕಾಲದಲ್ಲಿಯೂ ಆಗಿತ್ತು. ಬಸವಲಿಂಗಪ್ಪ, ಸಿದ್ಧಲಿಂಗಯ್ಯನವರ ಮೇಲೆ ದಾಳಿ ನಡೆಸಿದ ಶಕ್ತಿಗಳು ಕೂಡ ಇವೇ ಆಗಿದ್ದವು. ಇಂದು ಚೇತನ್ ಮೇಲೆ ಮುಗಿಬಿದ್ದವರೂ ಅವರೇ ಆಗಿದ್ದಾರೆ. ವಿವಿಧ ಕಾಲಘಟ್ಟಗಳಲ್ಲಿ ಬ್ರಾಹ್ಮಣ್ಯವನ್ನು ತೊಲಗಿಸುವುದಕ್ಕೆ ಚಿಂತಿಸಿದವರ ಮೇಲೆ, ಅದಕ್ಕಾಗಿ ಕೆಲಸ ಮಾಡಿದವರ ಮೇಲೆ ದಾಳಿ ನಡೆಸಿರುವುದಕ್ಕೆ ಹಲವು ನಿದರ್ಶನಗಳಿವೆ. ಆರ್.ವೆಂಕಟೇಶ್ ಎಂಬುವವರು ’ವಿಚಾರ ತರಂಗ’ ಎಂಬ ಪುಸ್ತಕವೊಂದನ್ನು ಸಂಪಾದಿಸಿದ್ದಾರೆ. ವಿಚಾರವಾದ ಗೌಣವಾಗಿದ್ದು ಬ್ರಾಹ್ಮಣ್ಯದ ಶ್ರೇಷ್ಠತೆಯ ವ್ಯಸನಕ್ಕೆ ಬಿದ್ದಿರುವ ಕೃತಿಯದು. ಪುಸ್ತಕದ ಕೊನೆಯ ಭಾಗದ ’ವಿಶ್ವಮಾನವೀಯ ಚಿಂತನ’ ಎಂಬ ತಲೆಬರಹದಲ್ಲಿ ಪ್ರಕಟವಾಗಿರುವ ಲೇಖನಗಳಲ್ಲಿ ಕುವೆಂಪು ಅವರನ್ನು, ಅವರ ವಿಶ್ವಮಾನವ ವಿಚಾರವನ್ನು

PC : Prajavani

ವಿರೋಧಿಸುವ ಲೇಖನಗಳದ್ದೇ ಸಿಂಹಪಾಲು. ಅದರಲ್ಲಿ ಸ್ಥಾನ ಪಡೆದುಕೊಂಡಿರುವ ಪರಮ ಬ್ರಾಹ್ಮಣ್ಯದ ಲೇಖನ ’ವಿಶ್ವಮಾನವೀಯತೆ ಹಾಗು ಸಮಯಸಾಧಕತನ’. 1975ರಲ್ಲಿ ’ಮಧ್ವವಿಜಯ’ ಎಂಬ ಪತ್ರಿಕೆಗೆ ಪುತ್ತಿಗೆ ಲಕ್ಷ್ಮೀನಾರಾಯಣರಾಯರು ಎಂಬುವವರು ಬರೆದಿರುವ ಸಂಪಾದಕೀಯದಲ್ಲಿ ಕುವೆಂಪು ಮತ್ತು ಪ್ರಗತಿಪರ ಬರಹಗಾರರ ಒಕ್ಕೂಟದ ಮೇಲೆ ವಿಷ ಕಾರುವುದಕ್ಕೆಂದೇ ಅವರು ತಮ್ಮ ಬುದ್ಧಿಯನ್ನೆಲ್ಲಾ ಖರ್ಚು ಮಾಡಿದ್ದಾರೆ. ಅದರ ಒಂದು ಪ್ಯಾರಾವನ್ನು ಇಲ್ಲಿ ಉಲ್ಲೇಖಿಸುತ್ತಿರುವ ಉದ್ದೇಶ, ಬ್ರಾಹ್ಮಣ್ಯದ ನೀಚತನ ಸ್ಪಷ್ಟವಾದೀತೆಂದು: “…ನನಗೀಗ ಬಲವಾದ ಅನುಮಾನವೊಂದು ಕಾಡುತ್ತಿದೆ. ಇದನ್ನು ಅಮೆರಿಕಾದ ವಾಟರ್‌ಗೇಟ್ ಪ್ರಕರಣದಂತೆ ಯಾರಾದರೂ ಸಾಹಸಿಗಳು ಬಯಲಿಗೆಳೆದರೆ ಉಪಕಾರ. ಇತ್ತೀಚೆಗೆ ಗತಿಸಿದ ದೊಡ್ಡ ವಾಗ್ಗೇಯಕಾರರು, ತತ್ತ್ವಶಾಸ್ತ್ರ ಪಂಡಿತರು, ಮಹಾಮೇಧಾವಿಗಳೆಂದು ದೇಶವಿದೇಶಗಳಲ್ಲಿ ಮೂಢ ಜನರಿಂದ ಮತ್ತು ಭಟ್ಟಂಗಿಗಳಿಂದ ಹೊಗಳಿಸಿಕೊಂಡ ದೊಡ್ಡ ವ್ಯಕ್ತಿಯೊಬ್ಬರಿಗೆ ಕೀರ್ತನೆ ಪ್ರಬಂಧಗಳನ್ನು ಭಾಷಣಗಳನ್ನು ಬರೆದುಕೊಡುತ್ತಿದ್ದವರೆಲ್ಲಾ ಯಾರು ಯಾರು ಎಂಬುದು ನನಗೆ ಗೊತ್ತು. ಇದು ಪ್ರಚಾರಯುಗ, ಭಾಷಣಯುಗ. ಪತ್ರಿಕೆಗಳಲ್ಲಿ ಬಂದದ್ದೆಲ್ಲಾ ಸತ್ಯವೆಂದು ತಿಳಿದು ವಿಮರ್ಶೆ ಮಾಡದೆ ನಂಬುವ ಅವಿದ್ಯಾವಂತರೇ ಬಹುತೇಕವಾಗಿರುವ ಈ ನಮ್ಮ ದೇಶದಲ್ಲಿ ಇದೆಲ್ಲಾ ಈಗೀಗ ಮಾಮೂಲು. ಇಲಿಮರಿಯಿಂದ ಹಿಡಿದು ಪರಮಾಣು ಬಾಂಬಿನವರೆಗೆ (Every Thing Under Sun) ವೇದಿಕೆಯ ಮೇಲೆ ಭರ್ಜರಿ ಹೂ ಹಾರ ಹಾಕಿಸಿಕೊಂಡು ತಾವು ಮಾತನಾಡುವ ವಿಷಯದ ಬಗ್ಗೆ ಸ್ವಲ್ಪ ಕೂಡಾ ತಮಗೆ ತಿಳಿದಿಲ್ಲವಾದರೂ ಮಂತ್ರಿಗಳೆಲ್ಲ ಭಾಷಣ ಬಿಗಿಯುತ್ತಾರೆ. ಕಾರ್ಯದರ್ಶಿಗಳು ಬರೆದುಕೊಡುತ್ತಾರೆ, ಮಂತ್ರಿಗಳು ಭಾಷಣ ಬಿಗಿಯುತ್ತಾರೆ. ಇಬ್ಬರಿಗೂ ಇದೇ ಕೆಲಸ ಯಾವಾಗಲೂ. ಹಾಗೆಯೇ ಪುಟ್ಟಪ್ಪ ದಕ್ಷಿಣೆಯ ಆಸೆ ತೋರಿಸಿ ಬಡ ಬ್ರಾಹ್ಮಣನೊಬ್ಬನಿಂದ ಬರೆಸಿರಬಹುದೆ?”

PC : ಅರಳಿಮರ

ಕುವೆಂಪು ಅವರಿಗೆ ಇಂತಹ ನೀಚ ಶಕ್ತಿಗಳನ್ನು ಮೆಟ್ಟಿನಿಲ್ಲುವ ಶಕ್ತಿ ಹಲವು ಕಾರಣಗಳಿಂದ ಒದಗಿತ್ತು. ಆದರೆ ಒಂದು ಹೇಳಿಕೆಗಾಗಿ ಬಿ.ಬಸವಲಿಂಗಪ್ಪನವರನ್ನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿದ ಜಾತಿ ಕಬಂಧಗಳು ಮತ್ತು ಅದರಲ್ಲಿ ಅಂತರ್ಗತವಾಗಿರುವ ಬ್ರಾಹ್ಮಣ್ಯ ಎಷ್ಟು ದೈತ್ಯಾಕಾರವಾದದ್ದು, ಎಷ್ಟು ವಿಷಕಾರಿ ಮತ್ತು ಎಷ್ಟು ವಿನಾಶಕಾರಿ ಎಂಬುದನ್ನು ಮನಗಾಣಬಹುದು. ಇಂದು ಚೇತನ್ ವಿರುದ್ಧ ಅದು ತನ್ನ ತೋಳು ತಟ್ಟಿರುವುದು ಸಾಂಕೇತಿಕವಷ್ಟೇ! ಸಾವಿರಾರು ವರ್ಷಗಳಿಂದ ಅದರ ಕಾಲ್ತುಳಿತಕ್ಕೆ ಸಿಕ್ಕಿ ನಶಿಸಿಹೋದವರಿಗೆ ಲೆಕ್ಕವೇ ಇಲ್ಲ. ಮತ್ತೊಂದು ಕೋನದಿಂದ ನೋಡುವುದಾದರೆ ಆರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ಹೇಳುವಂತೆ, ಸಂವಿಧಾನ ನೀಡಿದ ಬಲದಿಂದ ಈಗಷ್ಟೇ ಹಿಂದುಳಿದವರು ಮತ್ತು ದಲಿತರು ಸಣ್ಣ ಮಟ್ಟದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುಂದುವರೆಯುತ್ತಿದ್ದಂತೆ, ಹೊಟ್ಟೆ ಉರಿಯಿಂದ ಮೇಲ್ಜಾತಿಗಳು ಎದ್ದಿರುವ ’ಬಂಡಾಯ’ ಕೂಡ ಇದಾಗಿದೆ.

ಇಂತಹ ದುರಿತ ಸಮಯದಲ್ಲಿ ನ್ಯಾಯಪಥ ಪತ್ರಿಕೆಯ ಈ ಸಂಚಿಕೆಯಲ್ಲಿ ಬ್ರಾಹ್ಮಣ್ಯದ ಬಗ್ಗೆ ಚರ್ಚೆಯನ್ನು ಪ್ರಾರಂಭಿಸಿದ್ದೇವೆ. ಚಿಂತಕರಾದ ರಾಜೇಂದ್ರ ಚೆನ್ನಿ, ಕವಿ ಮೂಡ್ನಾಕೂಡು ಚಿನ್ನಸ್ವಾಮಿ, ಯುವ ಸಂಶೋಧಕ ಅಮರ್ ಹೊಳೆಗದ್ದೆ ತಮ್ಮ ವಾದಗಳನ್ನು ಮಂಡಿಸಿದ್ದಾರೆ. ಬ್ರಾಹ್ಮಣ್ಯದ ಬೇರುಗಳು ಎಷ್ಟು ಆಳಕ್ಕೆ ಇಳಿದಿವೆಯೋ ಹಾಗೆಯೇ ಈ ಆಧುನಿಕ ಜಗತ್ತಿನಲ್ಲಿ ಅದು ಚಾಚಿರುವ ಕೊಂಬೆಗಳು ಕೂಡ ವಿಸ್ತಾರವಾಗಿದೆ. ವಾಸಿಸುವ ಸ್ಥಳಗಳಲ್ಲಿ ಸೆಗ್ರಿಗೇಶನ್, ಮೆರಿಟ್ ಎಂಬುದರ ಬಗ್ಗೆ ಸುಳ್ಳಿನ ಪ್ರಾಮುಖ್ಯತೆ, ಮೀಸಲಾತಿ-ಪ್ರಾತಿನಿಧ್ಯದ ಬಗ್ಗೆ ಲೇವಡಿ ಮಾಡುವ ಪ್ರಚಾರ ಇತ್ಯಾದಿಯಾಗಿ ಅದು ರೂಪಾಂತರಗೊಂಡಿದೆ. ಪತ್ರಿಕೆ ಮುಂದಿನ ವಾರಗಳಲ್ಲಿ ಇವುಗಳ ಚರ್ಚೆಯನ್ನು ಪ್ರಮುಖವಾಗಿ ಕೈಗೆತ್ತಿಕೊಳ್ಳಲಿದೆ.


ಇದನ್ನೂ ಓದಿ: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...