Homeಅಂಕಣಗಳುಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು - ರಾಜಧಾನಿ ಎಂಬ ಮಾಯಾಮೋಹಿನಿ

ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

- Advertisement -
- Advertisement -

ಮೊನ್ನೆ ಭಾರತಮಾತೆಯ ಅನೇಕ ಸುಪುತ್ರರು, ‘ವಿಕೇಂದ್ರೀಕರಣ ವಿನಾಶಕ್ಕೆ ದಾರಿ’, ‘ಒಕ್ಕೂಟ ಸರಕಾರ ಒಡೆದು ಹಾಕೀತು’, ‘ರಾಜ್ಯ ಸರಕಾರಗಳು ರಜೆಯ ಮೇಲೆ ಹೋಗಲಿ’, ‘ಒಂದು ದೇಶ, ಒಂದು ಸರಕಾರ’ ಅಂತೆಲ್ಲಾ ಸೋಷಿಯಲ್ ಮೀಡಿಯಾದಾಗ ಬರಕೊಂಡರು. ಅದು ಲಸಿಕೆ ಪೂರೈಕೆಗೆ ಸಂಬಂಧಪಟ್ಟ ಗೊಂದಲದ ಸಲುವಾಗಿ.

ಅವರ ಪ್ರಕಾರ ಭಾರತ ಎಂಬೊ ಉಪಖಂಡಕ್ಕ ದೆಹಲಿ ಎಂಬ ದೂರದ ಊರಿನಲ್ಲಿ ಒಂದು ಸರಕಾರ ಅಂತ ಇದ್ದರೆ ಸಾಕು. ದೇಶದ ಇತರ ರಾಜ್ಯಗಳು, ಅವುಗಳ ರಾಜಧಾನಿಗಳು, ಕೇವಲ ಭಾರತದ ಭೂಪಟದ ಮೇಲಿನ ಬಿಂದುಗಳು ಅಷ್ಟೇ ಮತ್ತು ದೆಹಲಿಯ ಸುಲ್ತಾನರು ನೀಡುವ ಭಿಕ್ಷೆಯಲ್ಲಿ ಬದುಕುವ ಭಿಕಾರಿಗಳು ಎಂಬಂತಾಗಿತ್ತು.

ಇದನ್ನ ನಾವು ಭಾವನಾತ್ಮಕವಾಗಿ ನೋಡದೆ, ಲಭ್ಯ ದತ್ತಾಂಶಗಳ ಮೂಲಕ ನೋಡೋಣ. ಉದಾಹರಣೆಗೆ ಒಕ್ಕೂಟ ಸರಕಾರದ ಕೇಂದ್ರ ಸ್ಥಾನ ದೆಹಲಿ ಒಳಗ 55 ಇಲಾಖೆಗಳ ಸುಮಾರು 1335 ಕಚೇರಿಗಳು ಅದಾವು. ‘ಯಾರಿಗೆ ಬಂತು ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ್ಯ’ ಅಂದರ ‘ಬರೆ ದೆಹಲಿಗೆ ಬಂತು’ ಅಂದಂಗ ಆಗೇದ. ಸುಮಾರು 130 ಕೋಟಿ ಜನ ಇರುವ, 30 ರಾಜ್ಯಗಳ, 600 ಜಿಲ್ಲೆಗಳ, 200 ಸ್ಮಾರ್ಟ್ ಸಿಟಿಗಳ, 30 ಲಕ್ಷ ಕಿಲೋಮೀಟರ್ ಚದುರ ಕಿಲೋಮೀಟರ್ ವ್ಯಾಪ್ತಿಯ, ಈ ದೇಶದ ಒಳಗ ಕೆಲವು ಕಚೇರಿಗಳನ್ನ ಆದರೂ ದೆಹಲಿಯಿಂದ ದೂರ ತೊಗೊಂಡು ಹೋಗಬೇಕು ಅಂತ ಇಲ್ಲಿಯವರೆಗಿನ 14 ಪ್ರಧಾನ ಮಂತ್ರಿಗಳಿಗೆ, ಅವರು ನಡೆಸಿದ ಸರಕಾರಗಳಿಗೆ ಅವಶ್ಯಕ ಅನ್ನಿಸಲಿಲ್ಲ. ಅದು ಹೋಗಲಿ, 545 ಲೋಕಸಭಾ ಕ್ಷೇತ್ರಗಳಿಂದ ನಮ್ಮ ವೋಟು ತೊಗೊಂಡು, ನಮ್ಮ ಸುಂಕದ ಹಣದಿಂದ ಬಿಂಕ ಮಾಡಿ ಮೆರೆಯುವ ಸಂಸತ್ತು ಸದಸ್ಯರಿಗೂ ಅನ್ನಿಸಲಿಲ್ಲ. ಸ್ವಾತಂತ್ರ ಬಂದು 75 ವರ್ಷ ಆಗಲಿಕ್ಕೆ ಬಂದರೂ ಈ ಹಣೆಬಾರ ಐತಿ ಅಂದರ, ಇನ್ನು ಮುಂದೆ ಅದು ಬದಲು ಆಗತದೋ ಇಲ್ಲೋ ಖಾತ್ರಿ ಇಲ್ಲ.

ಹಂಗ ಅಂತ ಅದು ಬರಿಯ ದೆಹಲಿಗೆ ಸೀಮಿತವಾದ ಭಾವ ಅಂತ ಅಂದುಕೋ ಬ್ಯಾಡ್ರಿ. ಇದೇ ಭಾವ ಇತರರಲ್ಲೂ ಕಾಣತದ. ಇನ್ನು ಬೆಂಗಳೂರಿಗೆ ಬಂದರ, ಅಲ್ಲಿಯೂ ಇದೆ ಹಣೆಬಾರ.

ರಾಜ್ಯ ವಿಧಾನಸಭಾ ಅಧಿವೇಶನ: ಸಭಾಧ್ಯಕ್ಷರಿಂದ ವ್ಯವಸ್ಥೆಗಳ ಪರಿಶೀಲನೆ

ವರ್ಷಕ್ಕೆ ಎರಡು ಬಾರಿ ಯಾವುದೋ ಹೆಸರು ಕೇಳದ ಪ್ರವಾಸೋದ್ಯಮ ಪತ್ರಿಕೆಯವರು ಮಾಡಿದ ಸರ್ವೇಪ್ರಕಾರ ಇಡೀ ದೇಶದಾಗ ವಾಸಕ್ಕ ಅತ್ಯಂತ ಸೂಕ್ತವಾದ ನಗರ ‘ನಮ್ಮ ಬೆಂಗಳೂರು’ ಅಂತ ಸೋಶಿಯಲ್ ಮೀಡಿಯಾದಾಗ ಚೀರಿಕೊಳ್ಳುವ ಅನೇಕ ಕನ್ನಡಿಗರ ಕಣ್ಣಿಗೆ ಇತರ ಜಿಲ್ಲೆ, ನಗರ, ಹಳ್ಳಿಗಳು ಕಾಣೋದ ಇಲ್ಲ. ಇದು ಮಕ್ಕಳ ಕೂಟ ಒಂದನೇ ಕ್ರಾಸ್‌ನಲ್ಲಿ ಹುಟ್ಟಿ, ಬಸವನಗುಡಿ ಕಾಲೇಜಿಗೆ ಹೋಗಿ, ಮಲ್ಲೇಶ್ವರದಲ್ಲಿ ಮನೆ ಮಾಡಿ, ಪಕ್ಕದ ಕ್ರಾಸ್ ಅಂಕಲ್ ಅವರ ಮಗಳನ್ನು ಮದುವೆ ಮಾಡಿಕೊಂಡು ರಾಜಾಜಿನಗರದಲ್ಲಿ ಅಂತಿಮ ಯಾತ್ರೆ ಮುಗಿಸಿದ ‘ಸೆವೆಂತ್ ಜನರೇಷನ್ ಬ್ಯಾಂಗಲೋರಿಯನ್ಸ್’ ಕತೆ ಅಷ್ಟೇ ಅಲ್ಲ. ಕೂಗನಹಳ್ಳಿ ಎಂಬೊ ಕುಗ್ರಾಮದಲ್ಲಿ ಹುಟ್ಟಿ ಹೊಟ್ಟೆಪಾಡಿಗೆ ರಾಜಧಾನಿಯ ಸಿಂಗಲ್ ರೂಮಿನಲ್ಲಿ ಬೆಂದಕಾಳೂರು ತಿಂದು ಬದುಕಿದ ಉತ್ತರ ಕರ್ನಾಟಕದ ವೀರ ಕನ್ನಡಿಗರ ಕತೆಯೂ ಹೌದು.

ಮೂಲ ಇಲಾಖೆಗಳು ಹೋಗಲಿ, ರಾಜ್ಯದ ವಿವಿಧ ಭೂಭಾಗಗಳಿಗೆ ಸಂಬಂಧಿಸಿದ ಅನೇಕ ಕಚೇರಿಗಳು ಬೆಂಗಳೂರಿನಾಗ ಮುರಕೊಂಡು ಬಿದ್ದಾವು. ಉದಾಹರಣೆಗೆ ಬಯಲುಸೀಮೆ ಅಭಿವೃದ್ಧಿ ಮಂಡಳಿ, ಪಶ್ಚಿಮಘಟ್ಟ ಕಾವಲು ಸಮಿತಿ, ಮೀನುಗಾರಿಕೆ ನಿಗಮ, ಕಾಫಿ ಬೋರ್ಡು, ತೊಗರಿ ಬೋರ್ಡು, ಹರಳೆಣ್ಣೆ ಬೋರ್ಡು ಮುಂತಾದ ಕಚೇರಿಯ ಅದಕ್ಷ ಅಧ್ಯಕ್ಷರು, ಅದರ ಮೇಲೂ – ಕೆಳಗೂ ಜವಾಬುದಾರಿ ಇಲ್ಲದ ಮೇಲುಸ್ತುವಾರಿ ಅಧಿಕಾರಿಗಳು, ಅವರ ರಕ್ಷಕರು, ಭಕ್ಷಕರು, ಚಪರಾಸಿಗಳು, ಚಾಲಕರು, ಏಜೆಂಟ್ರು ಎಲ್ಲರೂ ಬೆಂಗಳೂರಿನಾಗ, ಅಲ್ಲಿನ ಹೆಚ್ಚುವರಿ ಭತ್ತೆ ಮತ್ತು ಇತರ ಆನುಷಿಂಗಿಕ ಫಲಗಳನ್ನು ಅನುಭೋಗಿಸುತ್ತಾ ಇದ್ದಾರ.

ಹಿಂದೊಮ್ಮೆ ವಿಧಾನಪರಿಷತ್ತಿನ ಸದಸ್ಯರೊಬ್ಬರು “ರಾಜ್ಯದ 350 ಜನ ಐಎಎಸ್ಸು ಅಧಿಕಾರಿಗಳ ಪೈಕಿ 300 ಜನ ಬರೆ ಬೆಂಗಳೂರಿನಲ್ಲಿ ಅದಾರ. ಇದು ಅನವಶ್ಯಕ, ಅವರನ್ನ ಜಿಲ್ಲೆಗಳಿಗೆ ಕಳಿಸಿರಿ”, ಅಂತ ಕೇಳಿದಾಗ, ಹಳೆ ಮೈಸೂರಿನ ಕೆಲ ಹಳೆ ತಲೆಗಳು ಆಕ್ಷೇಪಿಸಿದರು. “ಯಾಕೆ ನಂ ಬ್ಯಾಂಗಲೋರ್‌ಗೆ ಒಳ್ಳೆ ಆಫೀಸರ್ಸ್ ಬೇಡವಾ?” ಅಂತ ತರಲೆ ಮಾಡಿದರು.

ಘನ ರಾಜ್ಯ ಸರಕಾರ ಪ್ರತಿ ಜಿಲ್ಲೆಗೆ ಒಂದು ಉಸ್ತುವಾರಿ ಕಾರ್ಯದರ್ಶಿ ಅಂತ ಇಟಗೊಂಡದ. ಇವರಲ್ಲಿ ಕೆಲ ಪುಣ್ಯಾತರು ಮತ್ತು ಪುಣ್ಯಾತಗಿತ್ತಿಯರು ವಿಕ್ಟೋರಿಯಾ ರಾಣಿಯ ದತ್ತು ಪುತ್ರರು. ವಿಕ್ಟೋರಿಯಾ ರಾಣಿಯ ಕೆಲಸದ ಅವಧಿ ಬೆಳಿಗ್ಗೆ 11ರಿಂದ ಸಂಜೆ 5 ಆಗಿತ್ತಲ್ಲಾ, ಹಿಂಗಾಗಿ ಇವರೆಲ್ಲ, ಅದನ್ನು ಚಾಚೂತಪ್ಪದೆ ಪಾಲಿಸುವರು. ಆ ಜಿಲ್ಲೆಗೆ ಫ್ಲಯಿಟ್ ಇದೆಯಾ ಅಂತ ಕೇಳಿ, ತಿಳಕೊಂಡ ಮ್ಯಾಲೆನೆ ಆ ಜವಾಬುದಾರಿ ಒಪ್ಪಿಕೊಂಡವರು. ಬೆಳಿಗ್ಗೆ 11 ಗಂಟೆ ಫ್ಲಯಿಟ್‌ಗೆ ಬಂದು ಒಂದು ಮೀಟಿಂಗ್ ಮಾಡಿ, ಎಲ್ಲರ ಕಡೆಯಿಂದ ‘ಯಸ್ ಸರ್’, ‘ಓಕೆ ಸಾರ್’ ಅನ್ನಿಸಿಕೊಂಡು, ಯಾವಾಗ ಸಂಜೆ 5 ಗಂಟೆ ಆದೀತೋ, ಯಾವಾಗ ಫ್ಲಯಿಟ್ ಹಿಡಕೊಂಡು ವಾಪಸ್ ಬೆಂಗಳೂರಿಗೆ ಹೋದೆನೋ ಅಂತ ಓಡಿ ಹೋಗತಾರ. ಅಲ್ಲಿ ಏನು ಗಂಟು ಇಟ್ಟಿರತಾರೋ, ರಾತ್ರಿ ಮನಿಗೆ ಹೋಗಲಿಲ್ಲ ಅಂದ್ರ ಯಾವ ದರೊಡೆಕೋರರು ದೋಚಿಕೊಂಡು ಹೋಗತಾರೋ ಗೊತ್ತಿಲ್ಲ.

ಇದು ಬರೆ ಬೀದರ್- ಗುಲ್ಬರ್ಗದ ಕತಿ ಅಲ್ಲ. ಚಾಮರಾಜನಗರ, ಚಿತ್ರದುರ್ಗದ ಕತಿನೂ ಹೌದು. ಕೇವಲ ಹಿಂದಿ ಮಾತಾಡುವ ಕಾಶ್ಮೀರಿ ಲಾಲಾಗಳ ಸ್ವಭಾವ ಅಲ್ಲ. ಇಲ್ಲೇ ಬಳ್ಳಾರಿಯ ಹಳ್ಳಿಯಲ್ಲಿ ಹುಟ್ಟಿ ಐಎಎಸ್ಸು ಪಾಸಾಗಿ ಬೆಂಗಳೂರಿಗೆ ಹೋದಮ್ಯಾಲೆ ತನ್ನೂರು ಮರೆತವನ ಕತಿನೂ ಹೌದು.

ಬೆಳಗಾವಿಯ ಹೊರಗ ಒಂದು ಕಲ್ಲು ಹೃದಯದ ಕಟ್ಟಡ ಅದ. ಸುಮಾರು 400 ಕೋಟಿ ರೂಪಾಯಿಯಲ್ಲಿ ಲೋಕೋ ಗೈರು ಉಪಯೋಗಿ ಇಲಾಖೆಯವರು ಕಟ್ಟಿದ ಈ ಅನಗತ್ಯ ಆಲಯಕ್ಕೆ ಸುವರ್ಣಸೌಧ ಅಂತ ಹೆಸರು. ಈ ಬಿಳಿಯಾನೆಯನ್ನು ಸ್ವಚ್ಛ ಮಾಡಿ, ಮೈ ತೊಳದು, ಹುಲ್ಲು ತಿನಿಸಲಿಕ್ಕೆ ವರ್ಷಕ್ಕೆ 2-3 ಕೋಟಿ ಖರ್ಚು ಆಗತದ. ಬೆಂಗಳೂರು ಎಂಬೊ ದಂತಗೋಪುರದ ಮುತ್ತುಗದ ಕುರ್ಚಿಗಳ ಮ್ಯಾಲೆ ಫೆವಿಕಾಲ್ ಮೆತ್ತಿ ಕೂತಿರುವ ಪುಢಾರಿ ಹಾಗೂ ಅಧಿಕಾರಿಗಳಿಗೆ ಇಲ್ಲಿಯೂ ಸದನ ನಡೆಸಬಹುದು ಅಂತ ಅನ್ನಿಸಿ ನಾಲ್ಕು ವರ್ಷ ಆತು.

“ವಿಕೇಂದ್ರೀಕರಣ ಇರಲೇಬೇಕು, ಆದರ ಬರೆ ನನ್ನ ಲೆವೆಲ್ ತನಕ ಆಷ್ಟ ಇರಬೇಕು. ನನ್ನ ಕೆಳಗಿನ ಎಲ್ಲ ಅಧಿಕಾರವೂ ನನ್ನಲ್ಲೇ ಕೇಂದ್ರೀಕೃತ ಆಗಿರಬೇಕು” ಅನ್ನೋದು ಪುಢಾರಿ-ಅಧಿಕಾರಿಗಳ ಬಯಕೆ, ಅಂತ ಒಂದು ಹಳೆ ಜೋಕು ಐತಿ. ಇದೆ ಲಾಜಿಕ್ ಜಿಲ್ಲೆ, ತಾಲೂಕ, ಗ್ರಾಮ ಪಂಚಾಯತಿವರೆಗೂ ಅನ್ವಯ ಆಗತದ. ರಾಜಧಾನಿ ರಾಜಕೀಯ ಅನ್ನೋದು ಸದ್ಯದ ಮಟ್ಟಿಗೆ ಐದು ಅಂಕದ ನಾಟಕ.

ಸಂಸತ್ತು ಅಧಿವೇಶನದ ಪ್ರಶ್ನೆಯ ಅವಧಿ ರದ್ದುಗೊಳಿಸಿದ ಕೇಂದ್ರ: ಖಂಡಿಸಿ ಪತ್ರಬರೆದ 800 ತಜ್ಞರು
PC: Jagran Josh

ಅಂದಹಂಗ ದೆಹಲಿ ಅಂದರೆ ಪರ್ಷಿಯನ್, ಉರ್ದು ಭಾಷೆಯಲ್ಲಿ ಮೆಟ್ಟಿಲು. ದೇಹಲವಿ ಅನ್ನೋದು ಉರ್ದು ಭಾಷೆಯ ಇನ್ನೊಂದು ಹೆಸರು. ಆದರ ನಮಗ ಎಲ್ಲರಿಗೂ ಗೊತ್ತಿರೋ ಹಂಗ, ಮನಿ ಅನ್ನೋದು ಮೆಟ್ಟಿಲಿನಿಂದ ಶುರು ಆಗಬೇಕೇ ಹೊರತು ಅಲ್ಲಿಗೆ ಮುಗದು ಹೋಗಬಾರದು. ಇನ್ನು ದೆಹಲಿಯ ದೊರೆಗಳು ಗೆದ್ದ ದಕ್ಷಿಣದ ಮೊದಲ ನಗರ ಔರಂಗಾಬಾದ್. ಇದರ ಮೂಲ ಹೆಸರು ‘TIQ’, ಅಂದ್ರ ದಕ್ಷಿಣದ ಕಿಡಕಿ. ಕಿಡಕಿಯಿಂದ ಹೊರ ಜಗತ್ತು ತೆರೀಬೇಕು ಆಷ್ಟ, ಮುಚ್ಚಬಾರದು.

ಶರ್ಲಾಕ್ ಹೋಮ್ಸ್, ಡಾ. ವಾಟ್ಸನ್ ಎನ್ನುವ ಅಜರಾಮರ ಪಾತ್ರಗಳನ್ನು ಸೃಷ್ಟಿಸಿ ಜಗತ್ತನ್ನೇ ದಂಗುಬಡಿಸಿದ. ಮನುಕುಲ ಮರೆಯಲಾರದ ಪತ್ತೇದಾರಿ ಬರಹಗಾರ ಆರ್ಥರ್ ಕೋನಾನ್ ಡಾಯ್ಲನ ಒಂದು ಮಾತು ಇಲ್ಲೇ ನೆನಪು ಆಗತದ: “ಈ ಲಂಡನ್ ಅನ್ನುವುದು ಒಂದು ಮಹಾನ್ ಕಸದ ಗುಂಡಿ. ಈ ಸಾಮ್ರಾಜ್ಯದ ಎಲ್ಲ
ಸೋಮಾರಿಗಳು ಹಾಗೂ ಕೂತು ತಿನ್ನುವವರು ಇದರ ಆಕರ್ಷಣೆ ತಪ್ಪಿಸಿಕೊಳ್ಳಲಾರದೆ ಇಲ್ಲಿ ಬಂದು ಬೀಳುತ್ತಾರೆ. ಅಂತೆಯೇ ನಾನೂ ಇಲ್ಲಿಗೆ ಬಂದು ಬಿದ್ದೆ.”

ಹುಟ್ಟಿನಿಂದ ಲಂಡನ್‌ನವನಾಗಿರದ, ವೃತ್ತಿಯಿಂದ ವೈದ್ಯನಾಗಿ, ಬರಹದಿಂದ ಜನಪ್ರಿಯತೆ ಪಡೆದ ಡಾ. ಡಾಯ್ಲ, ತನ್ನದೇ ಪ್ರತಿಬಿಂಬವಾದ ಡಾ. ವಾಟ್ಸನ್‌ನ ಬಾಯಿಯಿಂದ ಈ ಮಾತು ಹೇಳಿಸಿದ. ಇದು ವಿಶ್ವದ ಪ್ರತಿ ನಾಗರಿಕತೆಗೆ, ಅನಾದಿಕಾಲದವರೆಗೂ ಅನ್ವಯ ಆಗತದ ಅಂತ ಅನ್ನಸತದ.

ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಡೇಟಾಖೋಲಿ: ಮಾಧ್ಯಮ ನಲ್ಲರು – ಯಾರ ಕೆಲಸ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...