Homeಮುಖಪುಟಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ...

ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

- Advertisement -
- Advertisement -

ಅಂದು ಭಾರತದ ಮೊದಲ ಮಹಿಳಾ ಪ್ಯಾರಾ ಶೂಟರ್ ಆಗಿ, ದೇಶಕ್ಕಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ 8 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದು ತಂದಿದ್ದ ಕ್ರೀಡಾಪಟು, ಇಂದು ಕುಟುಂಬವನ್ನು ನಿರ್ವಹಿಸಲು, ಹೊಟ್ಟೆ ತುಂಬಿಸಿಕೊಳ್ಳಲು ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಸೇರಿದಂತೆ ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಉತ್ತರಾಖಂಡದ 38 ವರ್ಷದ ದಿಲ್‌ರಾಜ್ ಕೌರ್, ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ 28 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದಿದ್ದಾರೆ, ಇದರಲ್ಲಿ 2007 ರಲ್ಲಿ ತೈವಾನ್‌ನಲ್ಲಿ ನಡೆದ ವಿಶ್ವ ಕ್ರೀಡಾಕೂಟ ಮತ್ತು 2015 ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಡಗಳು ಸೇರಿವೆ.

ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟು ದಿಲ್‌ರಾಜ್ ಕೌರ್ ಮತ್ತು ಆಕೆಯ ತಾಯಿ ಪ್ರತಿದಿನ ಡೆಹ್ರಾಡೂನ್‌ನ ಗಾಂಧಿ ಪಾರ್ಕ್‌ನ ಹೊರಗಡೆ ಬಿಸ್ಕತ್ತು, ಚಿಪ್ಸ್ ಸೇರಿದಂತೆ ಇತರೆ ಕುರುಕಲು ತಿಂಡಿಗಳನ್ನು ಮಾರಾಟ ಮಾಡುತ್ತಾರೆ.

“ನಾವು ನನ್ನ ತಂದೆ, ಸಹೋದರ, ನನ್ನ ವೃತ್ತಿಜೀವನ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಆದರೆ ನನ್ನ ಕುಟುಂಬ ಯಾವತ್ತೂ ಛಲದಿಂದ ಬದುಕುವುದನ್ನು ಬಿಟ್ಟುಕೊಡುವುದಿಲ್ಲ. ಯಾವ ಕೆಲಸವು ಚಿಕ್ಕದಲ್ಲ ಎಂದು ನಾವು ನಂಬಿರುವುದರಿಂದ ಬೀದಿಗಳಲ್ಲಿ ಈ ವಸ್ತುಗಳನ್ನು ಮಾರಾಟ ಮಾಡಲು ನನಗೆ ಮುಜುಗರವಿಲ್ಲ” ಎಂದು ದಿಲ್‌ರಾಜ್ ಕೌರ್‌ ಹೇಳುತ್ತಾರೆ.

ಇದನ್ನೂ ಓದಿ: ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ದಿಲ್‌ರಾಜ್ ಕೌರ್‌ 2019 ರಲ್ಲಿ ತನ್ನ ತಂದೆಯನ್ನು ಮತ್ತು ಆಕೆಯ ಸಹೋದರನನ್ನು ಕಳೆದುಕೊಂಡಿದ್ದಾರೆ. ಆಕೆಯ ತಾಯಿ ಗುರುದೀಪ್ ಕೌರ್,  ಉತ್ತರಾಖಂಡದ ರಾಜ್ಯತ್ವಕ್ಕಾಗಿ ನಡೆದ ಚಳವಳಿಯಲ್ಲಿ ಸಕ್ರಿಯ ಹೋರಾಟಗಾರರಾಗಿದ್ದರು.

PC: Express

ಸಹೋದರ ಮತ್ತು ತಂದೆಯ ಚಿಕಿತ್ಸೆಗಾಗಿ ದಿಲ್‌ರಾಜ್ ಕೌರ್‌ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ಸದ್ಯ  ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ನಮ್ಮವರನ್ನು, ನಮ್ಮ ಕೆಲಸಗಳನ್ನು ಕಸಿದುಕೊಂಡಿದೆ ಎಂದು ಆಕೆ ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇನ್ನು ಪತಿಯ ಮಾದಕ ವ್ಯಸನದಿಂದಾಗಿ ದಿಲ್‌ರಾಜ್ ಕೌರ್‌  ವೈವಾಹಿಕ ಜೀವನ ಮುರಿದು ಬಿದ್ದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದಿಲ್‌ರಾಜ್ ಕೌರ್‌ ಅವರ ಸಹಾಯಕ್ಕೆ ನಿಲ್ಲಿ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ.

ತಮ್ಮ ಕೆಲಸವನ್ನು, ಸಾಧನೆಯನ್ನು ಗುರುತಿಸಿ ಸರ್ಕಾರ ಉದ್ಯೋಗ ನೀಡುತ್ತದೆ ಎಂದು ಹಲವು ಬಾರಿ ಪ್ರಯತ್ನಿಸಿದರೂ ಕೆಲಸ ಸಿಕ್ಕಿಲ್ಲ. ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕತ್, ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದೇನೆ ಎಂದು ದಿಲ್‌ರಾಜ್ ಕೌರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಕ್ರೀಡಾಪಟುವಿಗೂ ಇಂತಹ ಸ್ಥಿತಿ ‌ಬರಬಾರದು. ಸರ್ಕಾರಗಳು ಕೂಡಲೇ ಇವರಿಗೆ ನೆರವು ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...