Homeಮುಖಪುಟಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ...

ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

- Advertisement -
- Advertisement -

ಅಂದು ಭಾರತದ ಮೊದಲ ಮಹಿಳಾ ಪ್ಯಾರಾ ಶೂಟರ್ ಆಗಿ, ದೇಶಕ್ಕಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ 8 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದು ತಂದಿದ್ದ ಕ್ರೀಡಾಪಟು, ಇಂದು ಕುಟುಂಬವನ್ನು ನಿರ್ವಹಿಸಲು, ಹೊಟ್ಟೆ ತುಂಬಿಸಿಕೊಳ್ಳಲು ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಸೇರಿದಂತೆ ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಉತ್ತರಾಖಂಡದ 38 ವರ್ಷದ ದಿಲ್‌ರಾಜ್ ಕೌರ್, ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ 28 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದಿದ್ದಾರೆ, ಇದರಲ್ಲಿ 2007 ರಲ್ಲಿ ತೈವಾನ್‌ನಲ್ಲಿ ನಡೆದ ವಿಶ್ವ ಕ್ರೀಡಾಕೂಟ ಮತ್ತು 2015 ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಡಗಳು ಸೇರಿವೆ.

ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟು ದಿಲ್‌ರಾಜ್ ಕೌರ್ ಮತ್ತು ಆಕೆಯ ತಾಯಿ ಪ್ರತಿದಿನ ಡೆಹ್ರಾಡೂನ್‌ನ ಗಾಂಧಿ ಪಾರ್ಕ್‌ನ ಹೊರಗಡೆ ಬಿಸ್ಕತ್ತು, ಚಿಪ್ಸ್ ಸೇರಿದಂತೆ ಇತರೆ ಕುರುಕಲು ತಿಂಡಿಗಳನ್ನು ಮಾರಾಟ ಮಾಡುತ್ತಾರೆ.

“ನಾವು ನನ್ನ ತಂದೆ, ಸಹೋದರ, ನನ್ನ ವೃತ್ತಿಜೀವನ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಆದರೆ ನನ್ನ ಕುಟುಂಬ ಯಾವತ್ತೂ ಛಲದಿಂದ ಬದುಕುವುದನ್ನು ಬಿಟ್ಟುಕೊಡುವುದಿಲ್ಲ. ಯಾವ ಕೆಲಸವು ಚಿಕ್ಕದಲ್ಲ ಎಂದು ನಾವು ನಂಬಿರುವುದರಿಂದ ಬೀದಿಗಳಲ್ಲಿ ಈ ವಸ್ತುಗಳನ್ನು ಮಾರಾಟ ಮಾಡಲು ನನಗೆ ಮುಜುಗರವಿಲ್ಲ” ಎಂದು ದಿಲ್‌ರಾಜ್ ಕೌರ್‌ ಹೇಳುತ್ತಾರೆ.

ಇದನ್ನೂ ಓದಿ: ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ದಿಲ್‌ರಾಜ್ ಕೌರ್‌ 2019 ರಲ್ಲಿ ತನ್ನ ತಂದೆಯನ್ನು ಮತ್ತು ಆಕೆಯ ಸಹೋದರನನ್ನು ಕಳೆದುಕೊಂಡಿದ್ದಾರೆ. ಆಕೆಯ ತಾಯಿ ಗುರುದೀಪ್ ಕೌರ್,  ಉತ್ತರಾಖಂಡದ ರಾಜ್ಯತ್ವಕ್ಕಾಗಿ ನಡೆದ ಚಳವಳಿಯಲ್ಲಿ ಸಕ್ರಿಯ ಹೋರಾಟಗಾರರಾಗಿದ್ದರು.

PC: Express

ಸಹೋದರ ಮತ್ತು ತಂದೆಯ ಚಿಕಿತ್ಸೆಗಾಗಿ ದಿಲ್‌ರಾಜ್ ಕೌರ್‌ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ಸದ್ಯ  ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ನಮ್ಮವರನ್ನು, ನಮ್ಮ ಕೆಲಸಗಳನ್ನು ಕಸಿದುಕೊಂಡಿದೆ ಎಂದು ಆಕೆ ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇನ್ನು ಪತಿಯ ಮಾದಕ ವ್ಯಸನದಿಂದಾಗಿ ದಿಲ್‌ರಾಜ್ ಕೌರ್‌  ವೈವಾಹಿಕ ಜೀವನ ಮುರಿದು ಬಿದ್ದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದಿಲ್‌ರಾಜ್ ಕೌರ್‌ ಅವರ ಸಹಾಯಕ್ಕೆ ನಿಲ್ಲಿ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ.

ತಮ್ಮ ಕೆಲಸವನ್ನು, ಸಾಧನೆಯನ್ನು ಗುರುತಿಸಿ ಸರ್ಕಾರ ಉದ್ಯೋಗ ನೀಡುತ್ತದೆ ಎಂದು ಹಲವು ಬಾರಿ ಪ್ರಯತ್ನಿಸಿದರೂ ಕೆಲಸ ಸಿಕ್ಕಿಲ್ಲ. ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕತ್, ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದೇನೆ ಎಂದು ದಿಲ್‌ರಾಜ್ ಕೌರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಕ್ರೀಡಾಪಟುವಿಗೂ ಇಂತಹ ಸ್ಥಿತಿ ‌ಬರಬಾರದು. ಸರ್ಕಾರಗಳು ಕೂಡಲೇ ಇವರಿಗೆ ನೆರವು ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...